Home State News ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
State News

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Share
Share
ಚಿಕ್ಕಮಗಳೂರು: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊನೆಗೂ ವಿಡಿಯೋ ಅಸಲಿಯತ್ತು ಏನೆಂದು ತನಿಖೆಯಿಂದ ಬಯಲಾಗಿದೆ.

ಕೆಲವು ದಿನಗಳ ಹಿಂದೆ ಡಿಜಿಪಿ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲಿ ಇಬ್ಬರು ಮಹಿಳೆಯರೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ತಕ್ಷಣವೇ ಗೃಹ ಇಲಾಖೆ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಇಲಾಖೆ ಮಟ್ಟದಲ್ಲಿ ತನಿಖೆಗೆ ಆದೇಶಿಸಿತ್ತು.  ಇದೀಗ ತನಿಖೆ ಪೂರ್ಣಗೊಂಡಿದ್ದು ವಿಡಿಯೋಗಳು ಅಸಲಿ ಎಂದು ಬಯಲಾಗಿದೆ. ಈ ವಿಡಿಯೋಗಳು ಎಐ ನಿರ್ಮಿತ ಅಥವಾ ಡೀಪ್ ಫೇಕ್ ವಿಡಿಯೋ ಅಥವಾ ಎಡಿಟ್ ಮಾಡಲಾದ ವಿಡಿಯೋಗಳು ಅಲ್ಲ ಎಂದು ತನಿಖೆಯಿಂದ ಖಚಿತವಾಗಿದೆ.
ಇದರೊಂದಿಗೆ ರಾಮಚಂದ್ರ ರಾವ್ ಗೆ ತೀವ್ರ ಹಿನ್ನಡೆಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಅವರು ನಿವೃತ್ತರಾಗಲಿದ್ದರು. ಇದಕ್ಕೆ ಮೊದಲು ಪ್ರತಿಕ್ರಿಯಿಸಿದ್ದ ಅವರು ಇದು ಎಐ ವಿಡಿಯೋ ಎಂದಿದ್ದರು. ಆದರೆ ಈಗ ವಿಡಿಯೋಗಳು ಅಸಲಿ ಎಂದು ಖಚಿತವಾಗಿದ್ದು ಸದ್ಯಕ್ಕೆ ಅವರ ನಿವೃತ್ತಿ ವೇತನ, ಇತರೆ ಸೌಲಭ್ಯಗಳನ್ನುಸ್ಥಗಿತಗೊಳಿಸಲಾಗುತ್ತದೆ.
ಇನ್ನು ವಿಡಿಯೋದಲ್ಲಿದ್ದ ಇಬ್ಬರು ಮಹಿಳೆಯರು ಸದ್ಯಕ್ಕೆ ನಾಪತ್ತೆಯಾಗಿದ್ದಾರೆ. ಇವರು ಆಗಾಗ ರಾಮಚಂದ್ರ ರಾವ್ ಅವರ ಖಾಸಗಿ ಕಚೇರಿಗೆ ಭೇಟಿ ನೀಡುತ್ತಿದ್ದರು ಎನ್ನಲಾಗಿದೆ. ಇಬ್ಬರು ಮಹಿಳೆಯರ ಪೈಕಿ ಒಬ್ಬಾಕೆ ಈ ವಿಡಿಯೋಗಳನ್ನು ಚಿತ್ರೀಕರಿಸಿದ್ದಾಳೆ ಎನ್ನಲಾಗಿದೆ. ಸದ್ಯಕ್ಕೆ ಮಹಿಳೆಯರಿಗಾಗಿ ಹುಡುಕಾಟ ನಡೆದಿದೆ.
Big twist for DGP Ramachandra Rao Rasalile case
Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ಕಿಸಿಂಗ್, ಕಿಸಿಂಗ್ ರಾಮಚಂದ್ರ -ಸ್ಮಗ್ಲಿಂಗ್, ಸ್ಮಗ್ಲಿಂಗ್ ರನ್ಯಾ ರಾವ್‌

ಅಪ್ಪ ರಾಮಚಂದ್ರ ರಾವ್ ಗೆ ಚಿನ್ನವೀಡು ಕಾಟ,ಮಲ ಮಗಳು ರನ್ಯಾ ರಾವ್ ಗೆ ಚಿನ್ನ ಕಳವಿನ...

ರಾಮಚಂದ್ರ ರಾವ್ ಅಲಿಯಾಸ್ ಕಾಮುಕ ರಾವ್ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ

ರಾಮಚಂದ್ರ ರಾವ್ ಅಲಿಯಾಸ್ ಕಾಮಚಂದ್ರ ರಾವ್ ನಿವೃತ್ತಿ ಅಂಚಿನಲ್ಲಿ ಕಾಮ ಪುರಾಣದಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಮಾಡಿದ್ದು...

ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ....

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...