Home namma chikmagalur chikamagalur ಖಾಸಗಿ ಬ್ಯಾಂಕ್ ಗಳಿಂದ ವಾಹನ ಮಾಲೀಕನಿಗೆ ವಂಚನೆ
chikamagalurCrime NewsHomeLatest Newsnamma chikmagalur

ಖಾಸಗಿ ಬ್ಯಾಂಕ್ ಗಳಿಂದ ವಾಹನ ಮಾಲೀಕನಿಗೆ ವಂಚನೆ

Share
Share

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಖಾಸಗಿ ಬ್ಯಾಂಕ್ ಗಳು ಹಾಗೂ ಫೈನಾನ್ಸ್ ಕಂಪನಿಗಳು ಗ್ರಾಹಕರ ಮೇಲೆ ನಡೆಸುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಖಾಸಗಿ ಫೈನಾನ್ಸ್ ಸಂಸ್ಥೆಯ ಜೊತೆಗೆ ಆರ್‌ಟಿಒ ಅಧಿಕಾರಿಗಳ ವಿರುದ್ಧ ಗಂಭೀರ ಭ್ರಷ್ಟಚಾರದ ಆರೋಪ ಕೇಳಿಬಂದಿದೆ. ವಾಹನದ ಮೂಲ ಮಾಲೀಕರಿಗೆ ಯಾವುದೇ ಮುನ್ಸೂಚನೆ ನೀಡದೆ ದಾಖಲೆಗಳನ್ನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಮಾಡಿರುವ ಆರೋಪ ಚಿಕ್ಕಮಗಳೂರಿನಲ್ಲಿ ಕೇಳಿ ಬಂದಿದೆ.

ನಗರದ ಇಮ್ತಿಯಾಜ್ ಎಂಬುವರು ೨೦೨೨ರಲ್ಲಿ ಖಾಸಗಿ ಫೈನಾನ್ಸ್ ನಿಂದ ಸರಕು ಸಾಗಣೆ ವಾಹನ ಖರೀದಿಸಲು ೧೨ ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಅದರಲ್ಲಿ ಈಗಾಗಲೇ ೬ ಲಕ್ಷ ರೂಪಾಯಿಗಳನ್ನು ಪ್ರಾಮಾಣಿಕವಾಗಿ ಮರುಪಾವತಿಯನ್ನು ಮಾಡಿದ್ದಾರೆ. ಆದರೆ ಇತ್ತೀಚಿನ ಕೆಲವು ತಿಂಗಳುಗಳಲ್ಲಿ ಎದುರಾದ ಆರ್ಥಿಕ ಸಂಕ?ದಿಂದಾಗಿ ಸಾಲದ ಕಂತುಗಳನ್ನು ಪಾವತಿಸಲು ಅವರಿಗೆ ಸಾಧ್ಯವಾಗಿರಲಿಲ್ಲ. ಈ ಸಂದರ್ಭವನ್ನೇ ಬಳಸಿಕೊಂಡ ಫೈನಾನ್ಸ್ ಸಿಬ್ಬಂದಿ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಹರಾಜನ್ನು ಮಾಡಿದ್ದಾರೆ.

ನಿಯಮಗಳ ಪ್ರಕಾರ ವಾಹನವನ್ನು ಹರಾಜು ಮಾಡುವ ಮುನ್ನ ಅಥವಾ ವರ್ಗಾಯಿಸುವ ಮುನ್ನ ಮೂಲ ಮಾಲೀಕರಿಗೆ ಅಧಿಕೃತ ನೋಟಿಸ್ ನೀಡಬೇಕಾಗುತ್ತದೆ. ಆದರೆ ಇಮ್ತಿಯಾಜ್ ಅವರ ಗಮನಕ್ಕೆ ತರದೆ ಫೈನಾನ್ಸ್ ಕಂಪನಿಯವರು ನಿಯಮಗಳನ್ನು ಗಾಳಿಗೆ ತೂರಿ ವಾಹನವನ್ನು ಬೇರೆ ವ್ಯಕ್ತಿಗೆ ಮಾರಾಟ ಮಾಡಿದ್ದಾರೆ. ಈ ಅಕ್ರಮಕ್ಕೆ ಆರ್‌ಟಿಒ ಅಧಿಕಾರಿಗಳು ಸಾಥ್ ನೀಡಿದ್ದು, ಫೈನಾನ್ಸ್ ಕಂಪನಿ ಸೂಚಿಸಿದ ವ್ಯಕ್ತಿಯ ಹೆಸರಿಗೆ ವಾಹನದ ದಾಖಲೆಗಳನ್ನು ಕಾನೂನುಬಾಹಿರವಾಗಿ ಬದಲಿಸಿಕೊಟ್ಟಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ತಮ್ಮ ಮನೆಯಲ್ಲಿದ್ದ ಅಲ್ಪಸ್ವಲ್ಪ ಚಿನ್ನಾಭರಣಗಳನ್ನು ಅಡಮಾನವಿಟ್ಟು ಕ?ಪಟ್ಟು ಸಾಲ ತೀರಿಸುತ್ತಿದ್ದ ಇಮ್ಮಿಯಾಜ್, ಈಗ ಕೈಯಲ್ಲಿದ್ದ ವಾಹನವೂ ಇಲ್ಲದೆ ಜೀವನ ನಿರ್ವಹಣೆಗಾಗಿ ಕಣ್ಣೀರು ಹಾಕುತ್ತಿದ್ದಾರೆ. ಆರ್‌ಟಿಒ ಅಧಿಕಾರಿಗಳ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ನ್ಯಾಯಕ್ಕಾಗಿ ಉಪ ಲೋಕಾಯುಕ್ತರಿಗೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ. ಮಾಧ್ಯಮಗಳ ಮುಂದೆ ತಮ್ಮ ಅಳಲು ತೋಡಿಕೊಂಡಿರುವ ಅವರು, ಭ್ರ? ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Vehicle owner cheated by private banks

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...