ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು ಪೊಲೀಸರು ಬಲೆ ಬೀಸಿದ್ದಾರೆ.
ಹಾಲೂರು ಗ್ರಾಮದ ವ್ಯಾಪ್ತಿಯಲ್ಲಿ ನದಿಯಿಂದ ಕಳ್ಳತನದಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಶ್ರೀನಾಥ ರೆಡ್ಡಿ ನೇತೃತ್ವದ ತಂಡವು ಹಠಾತ್ ದಾಳಿ ನಡೆಸಿದೆ.
ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಹಾಲೂರು ನಿವಾಸಿ ಸುನೀಲ್ ಎಂಬಾತ ಸಿಕ್ಕಿಬಿದ್ದಿದ್ದು, ಆತನ ಬಳಿಯಿದ್ದ ಕೆ.ಎ.18 ಡಿ.3614 ನೋಂದಣಿ ಸಂಖ್ಯೆಯ ಬೊಲೆರೊ ಪಿಕ್ ಅಪ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪರಿಶೀಲನೆಯ ವೇಳೆ ವಾಹನದ ಹಿಂಭಾಗದಲ್ಲಿ ಸುಮಾರು 50 ರಿಂದ 60 ಪ್ಲಾಸ್ಟಿಕ್ ಚೀಲಗಳಲ್ಲಿ ಅಕ್ರಮವಾಗಿ ತುಂಬಿಸಿದ್ದ ಮರಳು ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ 6,000 ರೂಪಾಯಿಗಳೆಂದು ತಿಳಿದುಬಂದಿದೆ.
ಸದ್ಯ ಪೊಲೀಸರು ಮರಳು ಸಹಿತ ವಾಹನವನ್ನು ಜಪ್ತಿ ಮಾಡಿದ್ದು, ಆರೋಪಿತನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ನದಿ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಇಲಾಖೆಯ ಈ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
Illegal sand transportation case detected in Hemavati river
Leave a comment