Home namma chikmagalur chikamagalur ಅಪ್ರಾಪ್ತ ಪ್ರೇಮಿಗಳ ಪ್ರಕರಣ-ಲವ್ ಜಿಹಾದ್’ ಆರೋಪ
chikamagalurCrime NewsHomeLatest Newsnamma chikmagalur

ಅಪ್ರಾಪ್ತ ಪ್ರೇಮಿಗಳ ಪ್ರಕರಣ-ಲವ್ ಜಿಹಾದ್’ ಆರೋಪ

Share
Share

ಚಿಕ್ಕಮಗಳೂರು:  ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಈಗ ಅನ್ಯಕೋಮಿನ ಅಪ್ರಾಪ್ತ ಪ್ರೇಮಿಗಳ ಪ್ರಕರಣವೊಂದು ಭಾರೀ ಸದ್ದು ಮಾಡುತ್ತಿದೆ. ಇದು ಕೇವಲ ಪ್ರೇಮ ಪ್ರಕರಣವಾಗಿ ಉಳಿಯದೆ, ‘ಲವ್ ಜಿಹಾದ್’ ಆರೋಪ, ಹಲ್ಲೆ ಹಾಗೂ ಪೋಕ್ಸೋ ಕಾಯ್ದೆಯಡಿ ದೂರು-ಪ್ರತಿದೂರುಗಳ ಸಮರವಾಗಿ ಮಾರ್ಪಟ್ಟಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿಳಗೊಳ ಗ್ರಾಮದಲ್ಲಿ ಅಪ್ರಾಪ್ತ ಯುವಕ-ಯುವತಿಯ ನಡುವಿನ ಪ್ರೀತಿಯ ವಿಚಾರವು ಉದ್ವಿಗ್ನತೆಗೆ ಕಾರಣವಾಗಿ, ಎರಡು ವಿಭಿನ್ನ ಪ್ರಕರಣಗಳು ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೂಡಿಗೆರೆ ತಾಲೂಕಿನ ಬಿಳಗೊಳ ಗ್ರಾಮದ ನಿವಾಸಿಗಳಾದ ಇಬ್ಬರು ಅಪ್ರಾಪ್ತರಾಗಿದ್ದಾರೆ‌.

ಪಿಯುಸಿ ವ್ಯಾಸಂಗ ಮಾಡುತ್ತಿರುವ ಹಿಂದೂ ಮುದಾಯದ ಹುಡುಗಿ ಮತ್ತು ಎಸ್ ಎಸ್ ಎಲ್ ಸಿ ಓದುತ್ತಿರುವ ಮುಸ್ಲಿಂ ಸಮುದಾಯದ ಹುಡುಗ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ವಿಚಾರ ಹೊರಬಿದ್ದ ನಂತರ, ‘ಲವ್ ಜಿಹಾದ್’ ಆರೋಪದಡಿ ಕೆಲವು ಹಿಂದೂ ಸಂಘಟನೆ ಕಾರ್ಯಕರ್ತರು ಅಪ್ರಾಪ್ತ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹಲ್ಲೆಗೆ ಒಳಗಾದ ಅಪ್ರಾಪ್ತ ಯುವಕ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅದರ ಆಧಾರದಲ್ಲಿ ಮೂವರು ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ್ದಾರೆ.

ಇನ್ನೊಂದೆಡೆ, ಹುಡುಗಿಯ ತಂದೆಯೂ ಕೂಡ ಅಪ್ರಾಪ್ತ ಮುಸ್ಲಿಂ ಯುವಕನ ವಿರುದ್ಧ ದೂರು ನೀಡಿದ್ದು, ಅದರ ಆಧಾರದಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತರ ನಡುವಿನ ಸಂಬಂಧವಾಗಿರುವುದರಿಂದ ಪ್ರಕರಣ ಇನ್ನಷ್ಟು ಗಂಭೀರತೆಯನ್ನು ಪಡೆದಿದೆ.ಈ ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಾವಲು ಹೆಚ್ಚಿಸಿದ್ದಾರೆ.

ಈ ಪ್ರಕರಣದಲ್ಲಿ ಯುವಕ ಮತ್ತು ಯುವತಿ ಇಬ್ಬರೂ ಅಪ್ರಾಪ್ತರಾಗಿರುವುದರಿಂದ, ಕಾನೂನು ಪ್ರಕಾರ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಹಲ್ಲೆ ಆರೋಪ ಮತ್ತು ಪೋಕ್ಸೋ ಪ್ರಕರಣ ಎರಡರ ಮೇಲೂ ಕ್ರಮ ಕೈಗೊಳ್ಳಲಾಗುತ್ತಿದೆ.
Underage lovers’ case – ‘Love Jihad’ allegations
Share

Leave a comment

Leave a Reply

Your email address will not be published. Required fields are marked *

Don't Miss

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ ಘಟನೆ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಳದಾಳ್ ಪಾಳ್ಯದಲ್ಲಿ ನಡೆದಿದೆ. ತ್ಯಾಗರಾಜ್ ಗೌಡ ಎಂಬುವವರ...

ಎಮ್ಮೆದೊಡ್ಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವೃದ್ಧನ ಸಾವು

ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೇಖರಪ್ಪ ಎಂದು ಗುರುತಿಸಲಾಗಿದ್ದು, ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಡೂರು...

Related Articles

ಚಿಕ್ಕಮಗಳೂರಿನಲ್ಲಿ ಡಕೋಟಾ ಬಸ್ಸುಗಳು

ಚಿಕ್ಕಮಗಳೂರು: ಚಿಕ್ಕಮಗಳೂರು ಕೆ,ಎಸ್,ಆರ್, ಟಿ ಸಿ ಬಸ್ಸುಗಳನ್ನು “ಡಕೋಟಾ” ಎಂದು ಜನ ಕರೆಯ ತೊಡಗಿದ್ದಾರೆ. ಕೆ,ಎಸ್,ಆರ್,ಟಿ...

ಜಿಲ್ಲೆಯಲ್ಲಿ ಜನನ-ಮರಣ ನೋಂದಣಿ ಕಡ್ಡಾಯ

ಚಿಕ್ಕಮಗಳೂರು:  ಭಾರತದ ನಾಗರಿಕ ನೋಂದಣಿ ನಿಯಮದ ಪ್ರಕಾರ ಜನನ-ಮರಣ ನೋಂದಣಿಯನ್ನು ಪ್ರತಿಯೊಬ್ಬರೂ ತಪ್ಪದೇ ಮಾಡಿಸಬೇಕು ಎಂದು...

ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ

ಚಿಕ್ಕಮಗಳೂರು: ಲ್ಲೆಯಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಇಲ್ಲ; ಬುಕಿಂಗ್ ಮಾಡಿದವರಿಗೆ ನಿಯಮಾನುಸಾರ ಗ್ಯಾಸ್...

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ-ಸವಾರ ಸಾವು

ಕಡೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...