Home namma chikmagalur chikamagalur ಎ.ಆರ್. ಫರ್ನಿಚರ್ ಅಂಗಡಿ ಅಗ್ನಿ ಅವಘಡ : ತನಿಖೆಯಲ್ಲಿ ವ್ಯವಸ್ಥಿತ ಕೃತ್ಯ ಸಾಬೀತು
chikamagalurCrime NewsLatest Newsnamma chikmagalur

ಎ.ಆರ್. ಫರ್ನಿಚರ್ ಅಂಗಡಿ ಅಗ್ನಿ ಅವಘಡ : ತನಿಖೆಯಲ್ಲಿ ವ್ಯವಸ್ಥಿತ ಕೃತ್ಯ ಸಾಬೀತು

Share
Share

ಚಿಕ್ಕಮಗಳೂರು: ನಗರದ ಐ.ಜಿ. ರಸ್ತೆಯಲ್ಲಿ ನಡೆದ ಎ.ಆರ್. ಫರ್ನಿಚರ್ ಅಂಗಡಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನಿರೀಕ್ಷಿತ ಸತ್ಯವನ್ನ ಹೊರಹಾಕಿದ್ದಾರೆ.

ಈ ಬೆಂಕಿ ಆಕಸ್ಮಿಕವಾಗಿ ಸಂಭವಿಸಿದ್ದಲ್ಲ, ಬದಲಿಗೆ ವ್ಯಾಪಾರ ದ್ವೇಷದ ಹಿನ್ನೆಲೆಯಲ್ಲಿ ನಡೆದ ವ್ಯವಸ್ಥಿತ ಕೃತ್ಯ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಕಳೆದ ಭಾನುವಾರ ನಡೆದ ಈ ದುರ್ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿದ್ದವು.

ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಎ.ಆರ್. ಫರ್ನಿಚರ್ ಪಕ್ಕದಲ್ಲೇ ಇರುವ ಮತ್ತೊಂದು ಫರ್ನಿಚರ್ ಅಂಗಡಿ ಮಾಲೀಕ ಸಂಚು ರೂಪಿಸಿರುವುದು ಕಂಡುಬಂದಿದೆ. ತನ್ನ ಅಂಗಡಿಗಿಂತ ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ ಎಂಬ ಅಸೂಯೆಯಿಂದ ಈ ಕೃತ್ಯ ಎಸಗಿದ್ದಾನೆ.

ಇದಕ್ಕಾಗಿ ಇಬ್ಬರಿಗೆ 20 ಸಾವಿರ ರೂಪಾಯಿ ಸುಪಾರಿ ನೀಡಿ ಬೆಂಕಿ ಹಚ್ಚಿಸಿದ್ದಾನೆ. ಪ್ರಸ್ತುತ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಕೃತ್ಯದಲ್ಲಿ ಭಾಗಿಯಾದ ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

Police investigation proves systematic crime

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....