Home namma chikmagalur chikamagalur ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ
chikamagalurHomeLatest Newsnamma chikmagalur

ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Share
Share

ಚಿಕ್ಕಮಗಳೂರು: ಕಮಲದ ಚಿಹ್ನೆಯಡಿ ಉದಯಿಸಿದ ಭಾಜಪ, ಜಗತ್ತಿನ ಎದುರು ದೇ ಶದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅನೇಕ ಸವಾಲು ಹಾಗೂ ಏಳುಬೀಳಿನ ನಡುವೆಯೂ ಎದೆ ಗುಂದದೇ ರಾಷ್ಟದ ಏಕೀಕರಣಕ್ಕೆ ದುಡಿಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ೪೭ನೇ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಕಾರ್ಯಕ್ರಮನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಟಲ್‌ಜೀ ಹಾಗೂ ಅಡ್ವಾಣಿಜೀಯವರ ಸಾರಥ್ಯದಲ್ಲಿ ಮುನ್ನೆಲೆಗೆ ಬಂದ ಪಕ್ಷವು ಆರಂಭದಲ್ಲಿ ಬಹ ಳಷ್ಟು ಸಂಕಷ್ಟ ಎದುರಿಸಿತ್ತು. ೧೯೮೪ರ ಲೋಕಸಭಾ ಚುನಾವಣೆಯಲ್ಲಿ ಎರಡು ಸ್ಥಾನ ಬಿಜೆಪಿ ಪಡೆದುಕೊ ಂಡಿತು. ಕಾಲಕ್ರಮೇಣ ನಾಲ್ಕೆöÊದು ವರ್ಷಗಳಲ್ಲೇ ೧೯೮೯ರಲ್ಲಿ ಚುನಾವಣೆಯಲ್ಲಿ ೮೩ ಸ್ಥಾನ ವಿಜಯ ಸಾಧಿಸಿ, ನೂರರ ಗಡಿ ದಾಟುವ ಸಾಮರ್ಥ್ಯ ಬೆಳೆಸಿಕೊಂಡಿತು ಎಂದರು.

ಆಟಲ್‌ಜೀ ನೇತೃತ್ವದ ಬಿಜೆಪಿ ೧೯೯೩ರ ಇಸವಿಯಲ್ಲಿ ೧೩ ದಿನಗಳ ಕಾಲ ದೇಶದ ಅಧಿಕಾರ ನಡೆಸಿತು. ನಂತರ ರಾಜಕೀಯ ಅಸೃಶ್ಯತೆ ಹಿನ್ನೆಲೆ ರಾಜೀನಾಮೆ ಸಲ್ಲಿಸಿದರು. ಈ ವೇಳೆ ಆಟಲ್‌ಜೀ ರಾಜಕೀಯ ಅಸೃ ಶ್ಯತೆ ಬಗ್ಗೆ ಅದ್ಬುತ ಭಾಷಣ ನೀಡಿ ನಿರ್ಗಮಿಸಿದರು. ೧೯೯೮ರಲ್ಲೂ ಒಂದು ಮತದಿಂದ ಸರ್ಕಾರ ರಚಿಸಲು ಸಾಧ್ಯವಾಗದಿದ್ದರೂ ದೃತಿಗೆಡಲಿಲ್ಲ ಎಂದು ಹೇಳಿದರು.

ಹಿಂದೆ ಬಿಜೆಪಿ ಅನೇಕ ಸವಾಲುಗಳನ್ನು ನಡುವೆ ಆಟಲ್‌ಜೀ ನೇತೃತ್ವದಲ್ಲಿ ೧೯೯೯ರಲ್ಲಿ ಆರು ವರ್ಷಗಳ ಕಾಲ ಅಧಿಕಾರ ನಡೆಸಿತು. ಈ ಆಡಳಿತ ವೈಖರಿಯಲ್ಲಿ ಕಳಂಕ ರಹಿತ, ಉತ್ತಮ ಸರ್ಕಾರ ಎಂಬುದನ್ನು ದೇಶ ಹಾಗೂ ಜಗತ್ತಿಗೆ ತಿಳಿಸಿಕೊಟ್ಟರು. ಸುವರ್ಣ ಚತುಶ್ಥತ ಹೆದ್ದಾರಿ ನಿರ್ಮಿಸುವ ಮೂಲಕ ಅಭಿವೃದ್ದಿ ಮೈಲಿಗಲ್ಲನ್ನು ಕೊಡುಗೆ ನೀಡಿದವರು ಎಂದರು.

ರಾಷ್ಟç ನಿರ್ಮಾಣ ದೃಷ್ಟಿಯಿಂದ ಭಾಜಪ ಸರ್ವ ಶಿಕ್ಷಣ ಅಭಿಯಾನದಡಿ ಸರ್ಕಾರಿ ಶಾಲೆಗಳಿಗೆ ಸುಣ್ಣ ಬಣ್ಣ, ಕಾಂಪೌAಡ್ ನಿರ್ಮಾಣ, ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಅಂದೇ ಕಲ್ಪಿಸಿಕೊಟ್ಟಿತು. ಪಿಎಂ ಗ್ರಾಮಸಡಕ್ ಯೋಜನೆ ಸೇರಿದಂತೆ ಅಭಿವೃಧ್ದಿಯಲ್ಲಿ ಬದಲಾವಣೆಗೆ ಆಟಲ್‌ಜೀ ಅವರು ತಮ್ಮದೇ ಸಾಮರ್ಥ್ಯ ತೋರಿಸಿದರು ಎಂದು ಹೇಳಿದರು.

ಬಿಜೆಪಿ ರಾಜಕೀಯ ಪಕ್ಷವಲ್ಲ, ರಾಷ್ಟಿçÃಯ ಚಳುವಳಿ. ಬಿಜೆಪಿ ದೇಶದಲ್ಲಿ ಉಗಮಿಸದಿದ್ದಲ್ಲಿ ರಾಷ್ಟç ಚಿಂ ತನೆಗಳು ಮರೆಯಾಗುತ್ತಿದ್ದವು. ಸ್ವಾತಂತ್ರö್ಯ ಪೂರ್ವದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸಿದರೂ, ರಾಷ್ಟಿçÃಯ ಚಿಂ ತನೆಗೆ ಕೊಡಲಿಪೆಟ್ಟು ಹಾಕಿತು. ಕುಟುಂಬದ ಹಿತಾಸಕ್ತಿಗಾಗಿ ರಾಷ್ಟಿçÃಯ ಹಿತಾಸಕ್ತಿ ಕಡೆಗಣಿಸಿದ ಪಕ್ಷವಾಗಿ ಕಾಂಗ್ರೆಸ್ ಬೆಳೆದುಕೊಂಡು ಬಂದಿತು ಎಂದರು

ಬಿಜೆಪಿ ರಾಜಕೀಯ ತಂತ್ರಗಾರಿಕೆ, ಹೊಂದಾಣಿಕೆ ಮಾಡಿಕೊಂಡಿವೆ, ಹೊರತು ರಾಷ್ಟಿçÃಯ ಹಿತಾಸಕ್ತಿ ಎಂದಿಗೂ ಕಡೆಗಣಿಸಿಲ್ಲ. ಭಾಜಪ ಎಂದಿಗೂ ರಾಜಕೀಯ ಅಸೃಶ್ಯತೆ ಎಂದು ಪರಿಗಣಿಸಿಲ್ಲ. ಸಾಮಾಜಿಕ ಹಾ ಗೂ ರಾಜಕೀಯ ಅಸೃಶ್ಯತೆ ಬಗ್ಗೆ ನಂಬಿಕೆಯಿಲ್ಲ. ರಾಷ್ಟಿçÃಯ ಹಿತದ ಉದ್ದೇಶ ಸಾಧನೆಗೆ ಎಲ್ಲರೊಂದಿಗೆ ಕೈ ಜೋಡಿಸಿಕೊಂಡು ದೇಶದ ಹಿತಕ್ಕಾಗಿ ಜನಿಸಿದÀ ರಾಷ್ಟಿçÃಯ ಚಳುವಳಿ ಬಿಜೆಪಿ ಪಕ್ಷ ಎಂದರು.

ಒAದು ವೇಳೆ ದೇಶದಲ್ಲಿ ಬಿಜೆಪಿ ಉದಯಿಸದಿದ್ದಲ್ಲಿ, ಅಂದಿನ ದೇಶದ ಆಡಳಿತವು ಸ್ವಂತ ಹಿತ ಸಾಧನೆ ಗೆ ಪ್ರದೇಶ ಮತ್ತು ಭಾಷೆಯನ್ನು ದುರ್ಬಳಕೆ ಮಾಡಿಕೊಂಡು ರಾಷ್ಟçದ ವಿಂಗಡನೆಗೆ ದಾರಿ  ಮಾಡುತ್ತಿದ್ದವು. ಇಂದು ಭಾಜಪ ರಾಷ್ಟçದ ಏಕತೆ, ಸಂವಿಧಾನದ ಆಶಯ, ಸಂವಿಧಾನ ವಿಚಾರಧಾರೆಗೆ ಬಲತುಂಬಿದೆ. ಅಲ್ಲ ದೇ ಸಂವಿಧಾನ ವಿರೋಧಿ ಕಾಯ್ದೆ ತೆಗೆದು ಹಾಕುವ ಕಾರ್ಯ ಮಾಡಿದೆ ಎಂಧರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ದೇಶದ ಅಭಿವೃದ್ದಿ, ಏಕತೆಗಾಗಿ ದುಡಿದಿರುವ ಪಕ್ಷ ಬಿಜೆಪಿ. ಆ ನಿಟ್ಟಿನಲ್ಲಿ ಭಾಜಪ ಉಗಮದ ಕಾರಣಕರ್ತರಾದ ಪ್ರತಿ ನಾಯಕರು ಇಂದಿನ ರಾಜಕೀಯ ಮುಖಂಡರುಗಳಿಗೆ ಸ್ಪೂರ್ತಿಯಾಗಿದ್ದಾರೆ. ಆ ನಿಟ್ಟಿನಲ್ಲಿ ದೇಶದ ಹಿತ ಕಾ ಯುವ ಪಕ್ಷದಲ್ಲಿ ನಾವೆಲ್ಲರೂ ಭಾಗಿಯಾಗಿರುವುದು ಹೆಮ್ಮೆಯ ಸಂಗತಿ ಎಂದರು

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಕೋಟೆ ರಂಗನಾಥ್, ಪ್ರೇಮ್‌ಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ನರೇಂದ್ರ, ರವೀಂದ್ರ ಬೆಳವಾಡಿ, ನಗರಾಧ್ಯಕ್ಷ ಪುಷ್ಪರಾಜ್, ಗ್ರಾಮಾಂ ತರ ಮಂಡಲ ಅಧ್ಯಕ್ಷ ವಿಜಯ್‌ಕುಮಾರ್, ಮುಖಂಡರುಗಳಾದ ವೀಣಾಶೆಟ್ಟಿ, ಕವೀಶ್ ಉಪಸ್ಥಿತರಿದ್ದರು.

BJP Foundation Day celebration at BJP office

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ಮೊಟ್ಟೆ ವಿತರಣೆ

ಚಿಕ್ಕಮಗಳೂರು: ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ಇನ್ಮುಂದೆ ವಾರಕ್ಕೆ ಆರು ಮೊಟ್ಟೆಯಂತೆ ತಿಂಗಳಿಗೆ 25 ಮೊಟ್ಟೆ ವಿತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ...

ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಚಿಕ್ಕಮಗಳೂರಿನ ೧೫೦ ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಚಿಕ್ಕಮಗಳೂರಿನ...

Related Articles

ಕನ್ನಡದ ಸಂಯೋಜಕ ಪ್ರತಿಭೆ ತೇಜಸ್ವಿ

ಕೊಟ್ಟಿಗೆಹಾರ: ಪೋಟೋಗ್ರಾಫಿ, ಫಿಶಿಂಗ್, ಪೈಂಟಿಂಗ್, ಸಾಹಿತ್ಯ ಹೀಗೆ ನಾನಾ ಬಗೆಯ ಆಸಕ್ತಿ ಕುತೂಹಲಗಳಿದ್ದ ತೇಜಸ್ವಿ ಅವರು...

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮ ಯಶಸ್ಸಿಗೆ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಏಪ್ರಿಲ್ ೧೩ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...

ಸಾರ್ವಜನಿಕ ಚರ್ಚೆ ಬಳಿಕ ಕ್ಷೇತ್ರಗಳ ಮರುವಿಂಗಡಣೆ ಸೂಕ್ತ

ಚಿಕ್ಕಮಗಳೂರು: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ಸಾರ್ವಜನಿಕ ಚರ್ಚೆ ಮತ್ತು ಸಮಾಲೋಚನೆ ಮಾಡಿದ ನಂತರವೇ ಜಾರಿ ಮಾಡಬೇಕು...

ನಾಪತ್ತೆಯಾದ ಯುವತಿಯ ರಕ್ಷಣಾ ಕಾರ್ಯಾಚರಣೆಗೆ ಸಚಿವರ ಸೂಚನೆ

ಚಿಕ್ಕಮಗಳೂರು: ಕಾಫಿನಾಡಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ತೆರಳಿದ್ದ ಕೇರಳದ ಪಾಲಕಾಡ್ ಜಿಲ್ಲೆಯ...