Home namma chikmagalur chikamagalur ಆಕಸ್ಮಿಕ ಅಗ್ನಿ ಅವಘಡಕ್ಕೆ ಮೂರು ಪ್ರಾಣಿಗಳ ಸಜೀವ ದಹನ
chikamagalurHomeLatest Newsnamma chikmagalur

ಆಕಸ್ಮಿಕ ಅಗ್ನಿ ಅವಘಡಕ್ಕೆ ಮೂರು ಪ್ರಾಣಿಗಳ ಸಜೀವ ದಹನ

Share
Share

ಅಜ್ಜಂಪುರ: ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡವೊಂದು ಎರಡು ಕುಟುಂಬಗಳನ್ನು ಬೀದಿಗೆ ತಂದಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟದೊಂದಿಗೆ ಮೂರು ಮೂಕಪ್ರಾಣಿಗಳು ಜೀವಂತ ದಹನವಾಗಿರುವ ಘಟನೆ ಅಜ್ಜಂಪುರ ಸಮೀಪದ ಬೇಗೂರು ಗ್ರಾಮದಲ್ಲಿ ವರದಿಯಾಗಿದೆ.

ಗ್ರಾಮದ ನಿವಾಸಿಗಳಾದ ಲೋಕೇಶಪ್ಪ ಹಾಗೂ ಮಹಾಂತೇಶ್ ಎಂಬುವವರಿಗೆ ಸೇರಿದ ಶೆಡ್‌ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗಳನ್ನು ಆವರಿಸಿಕೊಂಡಿದೆ. ಈ ದುರ್ಘಟನೆಯಲ್ಲಿ ಕಣ್ಣೆದುರೇ ಮನೆಯಲ್ಲಿದ್ದ ಹಸುವಿನ ಒಂದು ಕರು ಹಾಗೂ ಎರಡು ಎಮ್ಮೆ ಕರುಗಳು ಬೆಂಕಿಗೆ ಆಹುತಿಯಾಗಿರುವುದು ಅಲ್ಲಿದ್ದವರ ಕರುಳು ಹಿಂಡುವಂತಿತ್ತು.

ಬೆಂಕಿಯ ಅಬ್ಬರ ಎಷ್ಟಿತ್ತೆಂದರೆ ಮನೆಯಲ್ಲಿದ್ದ ಒಂದು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ವರ್ಷವಿಡೀ ಕಷ್ಟಪಟ್ಟು ಬೆಳೆದು ಸಂಗ್ರಹಿಸಿಟ್ಟಿದ್ದ ಸುಮಾರು 30 ಚೀಲ ರಾಗಿ ಸೇರಿದಂತೆ ಎಲ್ಲಾ ದವಸ ಧಾನ್ಯಗಳು ಬೂದಿಯಾಗಿವೆ. ಅಷ್ಟೇ ಅಲ್ಲದೆ, ಮನೆಯಲ್ಲಿದ್ದ ಬೆಲೆಬಾಳುವ ಆಭರಣಗಳು ಹಾಗೂ ಪ್ರಮುಖ ದಾಖಲೆಗಳು ಬೆಂಕಿಗಾಹುತಿಯಾಗಿದ್ದು, ಎರಡು ಕುಟುಂಬಗಳು ಕಂಗಾಲಾಗಿವೆ. ಸ್ಥಳೀಯರು ಕೂಡಲೇ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ ಅಗ್ನಿಶಾಮಕ ದಳ ಸ್ಥಳಕ್ಕೆ ಬರುವಷ್ಟರಲ್ಲಿ ಎಲ್ಲವೂ ಸರ್ವನಾಶವಾಗಿತ್ತು.

ಈ ಘಟನೆಯಿಂದ ಅಜ್ಜಂಪುರ ಭಾಗದ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಹಾಗೂ ಬೇಸರ ವ್ಯಕ್ತವಾಗಿದೆ. ಅಜ್ಜಂಪುರ ವ್ಯಾಪ್ತಿಯಲ್ಲಿ ಒಂದು ಅಗ್ನಿಶಾಮಕ ಠಾಣೆ ಇದ್ದಿದ್ದರೆ ಇಷ್ಟೊಂದು ದೊಡ್ಡ ಮಟ್ಟದ ಅನಾಹುತವನ್ನು ತಪ್ಪಿಸಬಹುದಿತ್ತು ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ. ಪ್ರತಿ ಬಾರಿ ಇಂತಹ ಅವಘಡಗಳು ಸಂಭವಿಸಿದಾಗಲೂ ತರೀಕೆರೆಯಿಂದ ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿರುತ್ತೆ. ಹೀಗಾಗಿ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಅಜ್ಜಂಪುರಕ್ಕೆ ಪ್ರತ್ಯೇಕ ಅಗ್ನಿಶಾಮಕ ಠಾಣೆಯನ್ನು ಮಂಜೂರು ಮಾಡಬೇಕು ಎಂದು ಗ್ರಾಮಸ್ಥರು ಗಟ್ಟಿಯಾಗಿ ಒತ್ತಾಯಿಸಿದ್ದಾರೆ.

Three animals burnt alive in accidental fire

Share

Leave a comment

Leave a Reply

Your email address will not be published. Required fields are marked *

Don't Miss

ಮುಳ್ಳಯ್ಯನಗಿರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್

ಚಿಕ್ಕಮಗಳೂರು:  ಕರ್ನಾಟಕದ ನೆಚ್ಚಿನ ಪ್ರವಾಸಿ ತಾಣವಾದ ಕಾಫಿನಾಡು ಚಿಕ್ಕಮಗಳೂರಿನ  ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹೊಸ ನಿಯಮ ಜಾರಿ ಮಾಡಲಾಗಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ವಿಶ್ವ ಪ್ರಸಿದ್ಧ ಎತ್ತರದ ಶಿಖರ ಮುಳ್ಳಯ್ಯನಗಿರಿ...

ನಗರಸಭೆಯಲ್ಲಿ 2.60 ಕೋಟಿ ರೂ. ಉಳಿತಾಯ ಬಜೆಟ್‌ ಮಂಡನೆ

ಚಿಕ್ಕಮಗಳೂರು: ನಗರ ಸಭೆ ಸಿಬ್ಬಂದಿ ವೇತನ, ವಿದ್ಯುತ್‌ ಬಿಲ್‌ ಪಾವತಿ ಅನುದಾನ ಸೇರಿದಂತೆ ವಾರ್ಷಿಕ ಕೇವಲ 58 ಕೋಟಿ ರು.ನಷ್ಟು ಆದಾಯ ಹೊಂದಿರು ಚಿಕ್ಕಮಗಳೂರು ನಗರ ಸಭೆಯು ರಾಜ್ಯ ಮತ್ತು ಕೇಂದ್ರ ಸರ್ಕಾರದ...

Related Articles

ಪ್ರಚೋದಕಾರಿ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷರ ಬಂಧನಕ್ಕೆ ಮನವಿ

ಚಿಕ್ಕಮಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂಘಟನೆ ಬಗ್ಗೆ ಪ್ರಚೋದಕಾರಿ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ...

ಕೃತಕಬುದ್ದಿ ಮತ್ತೆ ಮನುಷ್ಯನಿಗೆ ದೊಡ್ಡ ಸವಾಲಾಗಿದೆ

ಚಿಕ್ಕಮಗಳೂರು: ಆಧುನಿಕ ಜೀವನ ಪದ್ಧತಿಯಲ್ಲಿ ಕೃತಕಬುದ್ದಿ ಮತ್ತೆ ಮನುಷ್ಯನಿಗೆ ದೊ ಡ್ಡ ಸವಾಲಾಗಿ ಪರಿಣಾಮಿಸಿದೆ. ಪ್ರಸ್ತುತ...

ದ್ವೀತಿಯ ಪಿಯುಸಿಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ 90.80ರಷ್ಟು ಫಲಿತಾಂಶ

ಚಿಕ್ಕಮಗಳೂರು: ಪಿಯುಸಿ ಫಲಿತಾಂಶದಲ್ಲಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಶೇಕಡವಾರು ಉತ್ತಮ ಸಾಧನೆ ಮಾಡಿದೆ, ಕಳೆದ ವರ್ಷ...

ನಾಪತ್ತೆಯಾದ ಬಾಲಕಿಗಾಗಿ ಎರಡನೇ ದಿನವೂ ಶೋಧ ಕಾರ್ಯ

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಾಧಾರ ಜಲಪಾತದ ಬಳಿ ನಾಪತ್ತೆಯಾಗಿರುವ ಕೇರಳ ಮೂಲದ ಬಾಲಕಿಯ ಪತ್ತೆಗಾಗಿ...