Home namma chikmagalur chikamagalur ಚರಂಡಿ ವಿಷಯಕ್ಕೆ ಅಟ್ರಾಸಿಟಿ ಪ್ರಕರಣ ದಾಖಲು
chikamagalurCrime NewsHomeLatest Newsnamma chikmagalur

ಚರಂಡಿ ವಿಷಯಕ್ಕೆ ಅಟ್ರಾಸಿಟಿ ಪ್ರಕರಣ ದಾಖಲು

Share
Share

ಚಿಕ್ಕಮಗಳೂರು : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರಂಡಿ ವಿಚಾರವಾಗಿ ಉಂಟಾದ ಸಣ್ಣ ಕಿಡಿ ಇದೀಗ ದೊಡ್ಡ ಜಗಳಕ್ಕೆ ನಾಂದಿ ಹಾಡಿದ್ದು, ಕೇಸ್ ಹಾಗೂ ಕೌಂಟರ್ ಕೇಸ್ ದಾಖಲಾಗಿವೆ.

ಏಪ್ರಿಲ್ 4ರ ಸಂಜೆ ಸಣೇಗೌಡ ಎಂಬುವವರು ಯಶೋಧ ಎಂಬುವವರ ಮನೆಯ ಗೋಡೆಯ ಪಕ್ಕದಲ್ಲಿ ಚರಂಡಿಗಾಗಿ ಗುಂಡಿ ತೆಗೆಯುತ್ತಿದ್ದಾಗ ಈ ವಿವಾದ ಆರಂಭವಾಗಿದೆ. ಮಳೆ ಬಂದರೆ ಗೋಡೆ ಕುಸಿಯುತ್ತದೆ ಎಂದು ಯಶೋಧ ಆಕ್ಷೇಪಿಸಿದರೆ, ಗುಂಡಿ ತೋಡದಿದ್ದರೆ ನೀರು ತಮ್ಮ ಮನೆಗೆ ನುಗ್ಗುತ್ತದೆ ಎಂದು ಸಚ್ಚೇಗೌಡ ವಾದಿಸಿದ್ದು, ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.

ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಲ್ಲದೆ, ದೈಹಿಕ ಹಲ್ಲೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಎರಡೂ ಕಡೆಯವರು ಪೊಲೀಸರ ಮೆಟ್ಟಿಲೇರಿದ್ದಾರೆ. ಸಣ್ಣೀಗೌಡ, ಲಕ್ಷ್ಮಮ್ಮ ಮತ್ತು ಯಶೋಧ, ಸುಮಿತ್ರಾ ಅವರುಗಳು ಪರಸ್ಪರ ದೂರು ನೀಡಿದ ಹಿನ್ನೆಲೆಯಲ್ಲಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಶೇಷವೆಂದರೆ, ಈ ಜಗಳದ ನಡುವೆ ಜಾತಿ ನಿಂದನೆಯ ಆರೋಪವೂ ಕೇಳಿಬಂದಿದ್ದು, ಪೊಲೀಸರು ಅಟ್ರಾಸಿಟಿ ಪ್ರಕರಣವನ್ನೂ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಒಟ್ಟಿನಲ್ಲಿ ನೆರೆಹೊರೆಯವರ ನಡುವಿನ ಸಣ್ಣ ಚರಂಡಿ ವಿವಾದ ಈಗ ಪೊಲೀಸ್ ಠಾಣೆಯ ಅಂಗಳದಲ್ಲಿ ದೊಡ್ಡ ಕಾನೂನು ಸಮರಕ್ಕೆ ಕಾರಣವಾಗಿದೆ.

Atrocity case registered over sewage issue

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ಮೊಟ್ಟೆ ವಿತರಣೆ

ಚಿಕ್ಕಮಗಳೂರು: ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ಇನ್ಮುಂದೆ ವಾರಕ್ಕೆ ಆರು ಮೊಟ್ಟೆಯಂತೆ ತಿಂಗಳಿಗೆ 25 ಮೊಟ್ಟೆ ವಿತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ...

ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಚಿಕ್ಕಮಗಳೂರಿನ ೧೫೦ ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಚಿಕ್ಕಮಗಳೂರಿನ...

Related Articles

ಕನ್ನಡದ ಸಂಯೋಜಕ ಪ್ರತಿಭೆ ತೇಜಸ್ವಿ

ಕೊಟ್ಟಿಗೆಹಾರ: ಪೋಟೋಗ್ರಾಫಿ, ಫಿಶಿಂಗ್, ಪೈಂಟಿಂಗ್, ಸಾಹಿತ್ಯ ಹೀಗೆ ನಾನಾ ಬಗೆಯ ಆಸಕ್ತಿ ಕುತೂಹಲಗಳಿದ್ದ ತೇಜಸ್ವಿ ಅವರು...

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮ ಯಶಸ್ಸಿಗೆ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಏಪ್ರಿಲ್ ೧೩ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...

ಸಾರ್ವಜನಿಕ ಚರ್ಚೆ ಬಳಿಕ ಕ್ಷೇತ್ರಗಳ ಮರುವಿಂಗಡಣೆ ಸೂಕ್ತ

ಚಿಕ್ಕಮಗಳೂರು: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ಸಾರ್ವಜನಿಕ ಚರ್ಚೆ ಮತ್ತು ಸಮಾಲೋಚನೆ ಮಾಡಿದ ನಂತರವೇ ಜಾರಿ ಮಾಡಬೇಕು...

ನಾಪತ್ತೆಯಾದ ಯುವತಿಯ ರಕ್ಷಣಾ ಕಾರ್ಯಾಚರಣೆಗೆ ಸಚಿವರ ಸೂಚನೆ

ಚಿಕ್ಕಮಗಳೂರು: ಕಾಫಿನಾಡಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ತೆರಳಿದ್ದ ಕೇರಳದ ಪಾಲಕಾಡ್ ಜಿಲ್ಲೆಯ...