ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರಿನಂದಾ (15) ಶವವಾಗಿ ಪತ್ತೆಯಾಗಿದ್ದಾಳೆ.
ಪ್ರಸಿದ್ಧ ಪ್ರವಾಸಿ ತಾಣವಾದ ಮಾಣಿಕ್ಯಾಧಾರ ಪ್ರದೇಶದ ಸಮೀಪ ಸುಮಾರು 2 ಸಾವಿರ ಅಡಿಗಳಷ್ಟು ಆಳದ ಪ್ರಪಾತದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಕಳೆದ ಕೆಲವು ದಿನಗಳಿಂದ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಈ ದುರಂತ ಬೆಳಕಿಗೆ ಬಂದಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ಮನಕಲಕುವ ದೃಶ್ಯಗಳು ಕಂಡುಬಂದಿವೆ. ಪ್ರವಾಸಕ್ಕೆ ಬಂದಿದ್ದಾಗಲೇ ಬಾಲಕಿ ನಾಪತ್ತೆಯಾಗಿದ್ದ ಹಿನ್ನೆಲೆ, ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಾಲಕಿ ಪ್ರಪಾತಕ್ಕೆ ಬಿದ್ದ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
Kerala girl Srinanda found dead
Leave a comment