Home namma chikmagalur chikamagalur ವಿದ್ಯುತ್ ದರ ಏರಿಕೆಗೆ ಸಿ.ಟಿ. ರವಿ ತೀವ್ರ ವಾಗ್ದಾಳಿ
chikamagalurHomeLatest Newsnamma chikmagalur

ವಿದ್ಯುತ್ ದರ ಏರಿಕೆಗೆ ಸಿ.ಟಿ. ರವಿ ತೀವ್ರ ವಾಗ್ದಾಳಿ

Share
Share

ಚಿಕ್ಕಮಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್ಲ ಕ್ಷೇತ್ರಗಳಲ್ಲಿಯೂ ಬೆಲೆ ಏರಿಕೆಯಾಗಿದೆ ಎಂದು ಅವರು ಆರೋಪಿಸಿದರು. ನೀರು, ಕಸ ನಿರ್ವಹಣೆ, ಸ್ಟಾಂಪ್ ಪೇಪರ್ ಹಾಗೂ ಸ್ಟಾಂಪ್ ಡ್ಯೂಟಿ ದರಗಳು ಹೆಚ್ಚಳವಾಗಿದ್ದು, ಜನನ–ಮರಣ ಪ್ರಮಾಣಪತ್ರಗಳಿಗೂ ಹೆಚ್ಚಿನ ಶುಲ್ಕ ವಿಧಿಸಲಾಗುತ್ತಿದೆ ಎಂದು ಹೇಳಿದರು.

ಅದೇ ರೀತಿ ಅಡುಗೆ ಎಣ್ಣೆ, ಕುಡಿಯುವ ಎಣ್ಣೆ ದರ ಏರಿಕೆಯ ಜೊತೆಗೆ ರೈತರ ಪಹಣಿ ದರ ಹಾಗೂ ಪಂಪ್‌ಸೆಟ್ ಟಿಸಿ ದರವೂ ಹೆಚ್ಚಿಸಲಾಗಿದೆ ಎಂದು ಟೀಕಿಸಿದರು. 20 ರೂಪಾಯಿ ಸ್ಟಾಂಪ್ ಪೇಪರ್ ಕೂಡ ಈಗ ದುಬಾರಿಯಾಗಿದ್ದು, ಚಿನ್ನವನ್ನು ಅಡವಿಟ್ಟು ಸಾಲ ಪಡೆಯುವ ಸಂದರ್ಭದಲ್ಲೂ 0.5% ಸ್ಟಾಂಪ್ ಡ್ಯೂಟಿ ವಿಧಿಸಲಾಗುತ್ತಿದೆ ಎಂದು ಹೇಳಿದರು.

ಪೆಟ್ರೋಲ್ ಮತ್ತು ಡೀಸೆಲ್ ಮೇಲೂ ಪದೇ ಪದೇ ಸೆಸ್ ವಿಧಿಸಲಾಗುತ್ತಿದೆ. ಇದೀಗ ವಿದ್ಯುತ್ ಹಾಗೂ ಬಸ್ ದರ ಏರಿಕೆಯ ಮೂಲಕ ಜನರಿಗೆ ಮತ್ತಷ್ಟು ಭಾರ ಹಾಕಲಾಗಿದೆ ಎಂದು ಆರೋಪಿಸಿದರು.
“ಗಾಳಿಯನ್ನು ಬಿಟ್ಟು ಉಳಿದ ಎಲ್ಲದರ ಮೇಲೂ ತೆರಿಗೆ ಹಾಕಲಾಗಿದೆ. ಗಾಳಿಗೂ ತೆರಿಗೆ ಹಾಕಿದರೆ ನಿಮ್ಮ ಜೀವನ ಸಾರ್ಥಕವಾಗುತ್ತದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದರು.

“ಆಡು ಮುಟ್ಟದ ಸೊಪ್ಪಿಲ್ಲ, ಗಾಳಿಯನ್ನು ಬಿಡದ ಕಾಂಗ್ರೆಸ್ ಎನ್ನುವ ಜಾಗತಿಕ ದಾಖಲೆ ಸೃಷ್ಟಿಯಾಗಬಹುದು. ಜಗತ್ತಿನಲ್ಲಿ ಸರ್ವಾಧಿಕಾರಿಗಳೂ ಗಾಳಿಗೆ ತೆರಿಗೆ ಹಾಕಿಲ್ಲ” ಎಂದು ತೀವ್ರವಾಗಿ ಟೀಕಿಸಿದರು.

C.T. Ravi strongly criticizes the increase in electricity prices

Share

Leave a comment

Leave a Reply

Your email address will not be published. Required fields are marked *

Don't Miss

ಅಂಬೇಡ್ಕರ್ ಜಯಂತಿಗೆ ಅಡ್ಡಿ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಚಿಕ್ಕಮಗಳೂರು: ಮರ್ಲೆಹೊಸಕೋಟೆಯಲ್ಲಿ ಕಂದಾಯ ಜಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲು ಮುಂದಾಗಿದ್ದಾಗ ಧ್ವಜಗಳನ್ನು ತೆರವುಗೊಳಿಸಿದ ಗ್ರಾಮಲೆಕ್ಕಿಗರು ಮತ್ತು ರಾಜಸ್ವನಿರೀಕ್ಷರನ್ನು ಅಮಾನತುಪಡಿಸಬೇಕು. ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಸವರ್ಣೀಯರ ಮೇಲೆ ದೌರ್ಜನ್ಯಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ದಲಿತ...

ಜಮೀನಿನ ನಕಲಿ ದಾಖಲೆ ಸೃಷ್ಟಿಸಿ ವಂಚನೆ

ಚಿಕ್ಕಮಗಳೂರು: ಕಡೂರು ತಾಲೂಕು ಪಂಚನಹಳ್ಳಿ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ತಮ್ಮ ಪಿತ್ರಾರ್ಜಿತ ಆಸ್ತಿಗೆ ನಕಲಿ ದಾಖಲೆಯನ್ನು ಸೃಷ್ಟಿಸಿ ಕೆಲವರು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತ ಮಹಿಳೆ ಯಶೋಧ ಆರೋಪಿಸಿದರು. ನಗರದ...

Related Articles

ಅರಣ್ಯ ಸಮಸ್ಯೆ ಬಗ್ಗೆ ಏ.28ಕ್ಕೆ ಪ್ರವಾಸಿಮಂದಿರದಲ್ಲಿ ಚರ್ಚೆ

ಚಿಕ್ಕಮಗಳೂರು: ಡೀಮ್ಡ್ ಫಾರೆಸ್ಟ್ ಮತ್ತು ಅರಣ್ಯ ಸಮಸ್ಯೆಗಳನ್ನು ನಿವಾರಿಸಲು ಎಸ್‌ಐಟಿ ರಚಿಸಿ ಸರ್ವೆ ಆರಂಭಿಸಿದೆ. ಈ...

ಷೇರುದಾರರಿಗೆ ಅನುಕೂಲಕ್ಕೆ ಆಡಳಿತ ವ್ಯವಸ್ಥೆ ಡಿಜಿಟಲೀಕರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಟೌನ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ವ್ಯವಸ್ಥೆಯನ್ನು ಷೇರುದಾರರಿಗೆ ಅನುಕೂಲ ಆಗುವಂತೆ ಡಿಜಿಟಲೀಕರಣಗೊಳಿಸಲಾಗಿದೆ ಎಂದು...

ಏ. 26ಕ್ಕೆ ಜಿಲ್ಲಾ ಮಟ್ಟದ 6ನೇ ಜಾನಪದ ಸಮ್ಮೇಳನ

ಚಿಕ್ಕಮಗಳೂರು: ಪಾಶ್ಚಾತ್ಯ ಸಂಸ್ಕೃತಿ ಸಂಗೀತದ ಹಾವಳಿಯಿಂದಾಗಿ ನಶಿಸುತ್ತಿರುವ ಅತ್ಯಮೂಲ್ಯ ಜನಪದ ಕಲೆ ಮತ್ತು ಸಂಸ್ಕೃತಿಯನ್ನು ಮುಂದಿನ...

ಸರ್ಫೇಸಿ ಕಾಯಿದೆಯ ವಿರುದ್ದ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಕಾಫಿ ಬೆಳೆಗಾರರ ಪಾಲಿಗೆ ಮರಣ ಶಾಸನವಾಗಿರುವ ಸರ್ಫೇಸಿ ಕಾಯಿದೆ ರದ್ದು ಗೊಳಿಸಲು ರಾಜ್ಯ ಸರ್ಕಾರ...