Home namma chikmagalur ajjampura ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ರೈತರೊಬ್ಬರ ಎತ್ತಿನ ಗಾಡಿ ಕಳ್ಳತನ
ajjampuraCrime NewsHomeLatest Newsnamma chikmagalur

ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ರೈತರೊಬ್ಬರ ಎತ್ತಿನ ಗಾಡಿ ಕಳ್ಳತನ

Share
Share

ಅಜ್ಜಂಪುರ: ರೈತರೊಬ್ಬರ ಎತ್ತಿನ ಗಾಡಿ ಕಳ್ಳತನವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಎಂಬುವವರು ಕಳೆದುಹೋದ ತಮ್ಮ ಕಬ್ಬಿಣದ ಎತ್ತಿನ ಗಾಡಿಗಾಗಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಲ್ಲಪ್ಪ ಅವರು ಸುಮಾರು 15 ವರ್ಷಗಳ ಹಿಂದೆ ಹೊಸದುರ್ಗದ ಟಿಬಿ ಸರ್ಕಲ್‌ನಲ್ಲಿರುವ ಗೌಸಿಯಾ ವೆಲ್ಡಿಂಗ್ ಶಾಪ್‌ನಲ್ಲಿ ಈ ಕಬ್ಬಿಣದ ಟೈರ್ ಗಾಡಿಯನ್ನು ಮಾಡಿಸಿದ್ದರು. ಇದನ್ನು ಅವರು ತಮ್ಮ ಅಸಂಧಿ-ಮುದಿಗೆರೆ ರಸ್ತೆಯ ಪಕ್ಕದಲ್ಲಿರುವ ಸ್ವಂತ ಶೆಡ್ ಮುಂಭಾಗದಲ್ಲಿ ಪ್ರತಿದಿನ ನಿಲ್ಲಿಸುತ್ತಿದ್ದರು.

ಮಾರ್ಚ್ 23ರ ರಾತ್ರಿ 10 ಗಂಟೆ ಸುಮಾರಿಗೆ ದನಗಳಿಗೆ ಮೇವು ಹಾಕಿ ಎತ್ತಿನ ಗಾಡಿಯನ್ನು ಗಮನಿಸಿ ಮನೆಗೆ ತೆರಳಿದ್ದ ಇವರು, ಮರುದಿನ ಬೆಳಿಗ್ಗೆ 7 ಗಂಟೆಗೆ ಹಾಲು ಕರೆಯಲು ಬಂದಾಗ ಗಾಡಿ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಸುಮಾರು 15 ಸಾವಿರ ರೂಪಾಯಿ ಮೌಲ್ಯದ ಈ ಎತ್ತಿನ ಗಾಡಿಯನ್ನು ಮಾರ್ಚ್ 23ರ ರಾತ್ರಿ 10 ರಿಂದ ಮಾರ್ಚ್ 24ರ ಬೆಳಿಗ್ಗೆ 7 ಗಂಟೆಯ ಮಧ್ಯದ ಅವಧಿಯಲ್ಲಿ ಕಳ್ಳರು ಅಪಹರಿಸಿದ್ದಾರೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಮಲ್ಲಪ್ಪ ಅವರು ನೀಡಿದ ದೂರಿನ ಮೇರೆಗೆ ಅಜ್ಜಂಪುರ ಪೊಲೀಸರು ಕಳ್ಳರ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.

Bullock cart theft of a farmer in Asandhi village of Ajjampur taluk

Share

Leave a comment

Leave a Reply

Your email address will not be published. Required fields are marked *

Don't Miss

ನಕಲಿ “ಐ.ಎ.ಎಸ್” ಮಿಥುನ್ ಬಂಧನ

ಬೆಂಗಳೂರು: ಚಿಕ್ಕಮಗಳೂರು ಮೂಲದ ಮಿಥುನ್ ಎಂಬತಾ ಐ.ಎ.ಎಸ್.ನ ನಕಲಿ ದಾಖಲೆ ಸೃಷ್ಟಿ ಮಾಡಿ ಹಲವರಿಗೆ ವಂಚನೆ ಮಾಡಿದ್ದು ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅರೋಗ್ಯ ಇಲಾಖೆಯ ಎನ್.ಹೆಚ್.ಎಮ್.ನ ಉಸ್ತುವಾರಿ ಎಂದು...

ನಗರದಲ್ಲಿ ಹಾಡುಹಗಲೇ ಶಿಕ್ಷಕಿಯ ಮಾಂಗಲ್ಯ ಸರ ಅಪಹರಣ

ಚಿಕ್ಕಮಗಳೂರು: ಹಾಡುಹಗಲೇ ಶಿಕ್ಷಕಿಯ ಕೊರಳಿಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಸೋಮವಾರ ಸಂಜೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ...

Related Articles

ಪ್ರಯಾಣಿಕರೇ ಬಸ್ ತಳ್ಳುವ ಕೆಎಸ್‌ಆರ್‌ಟಿಸಿ ಬಸ್‌

ಚಿಕ್ಕಮಗಳೂರು: ಸರ್ಕಾರದ ಉಚಿತ ಯೋಜನೆಗಳ ಆರ್ಭಟದ ನಡುವೆ ಸಾರಿಗೆ ಬಸ್‌ಗಳ ನಿರ್ವಹಣೆ ಅಧೋಗತಿಗೆ ತಲುಪಿದೆಯೇ? ಇಂತಹದೊಂದು ಪ್ರಶ್ನೆ...

ಏ.23ಕ್ಕೆ ಕರಾಳಕೃತ್ಯ ಖಂಡಿಸಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯದ ಅಪಚಾರ ಏಪ್ರಿಲ್ ೨೩ ರಂದು ಪಶ್ಚಿಮಬಂಗಾಳದಲ್ಲಿ ನಡೆಯುತ್ತಿದೆ. ಇದನ್ನು ವಿರೋಧಿಸಿ...

ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ

ಚಿಕ್ಕಮಗಳೂರು:ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಮೌನವಹಿಸಿದ್ದಾರೆಂದು ದಲಿತ ಸಂಘರ್ಷಸಮಿತಿ ರಾಜ್ಯ ಸಂಘಟನಾ ಸಂಚಾಲಕ...

ಜನತೆ ಬಿಸಿಲಿನ ಬೇಗೆಗೆ ತತ್ತರಿಸಿ ಹೋದ ಕಾಫಿನಾಡಿನ ಜನತೆ

ಚಿಕ್ಕಮಗಳೂರು: ಮಲೆನಾಡಿನ ಮಡಿಲು, ತಂಪಾದ ಹವಾಮಾನಕ್ಕೆ ಹೆಸರಾದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಈ ಬಾರಿ ಸೂರ್ಯನ ಪ್ರಖರತೆ...