Home namma chikmagalur chikamagalur ರಬ್ಬರ್ ತೋಟದಲ್ಲಿ ಮನುಷ್ಯನ ತಲೆಬುರುಡೆ -ಮೂಳೆಗಳು ಪತ್ತೆ
chikamagalurCrime NewsHomeLatest Newsnamma chikmagalur

ರಬ್ಬರ್ ತೋಟದಲ್ಲಿ ಮನುಷ್ಯನ ತಲೆಬುರುಡೆ -ಮೂಳೆಗಳು ಪತ್ತೆ

Share
Share

ಎನ್.ಆರ್.ಪುರ: ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ರಬ್ಬರ್ ತೋಟವೊಂದರಲ್ಲಿ ಮನುಷ್ಯನನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಎಲ್ಲೋ ಬಿನ್ ಅವರಚ್ಚನ್ ಎಂಬುವವರಿಗೆ ಸೇರಿದ ರಬ್ಬರ್ ತೋಟದಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಮೂಳೆಗಳು ಪತ್ತೆಯಾಗಿದ್ದು, ಇದು ಸುಮಾರು ಒಂದೂವರೆ ತಿಂಗಳಿನಿಂದ ಕಾಣೆಯಾಗಿದ್ದ ಬಿಬಿನ್ (43) ಎಂಬುವವರದ್ದೇ ಇರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.

ಮೃತ ಬಿಬಿನ್ ಮೂಲತಃ ಕೇರಳದವರಾಗಿದ್ದು, ಕಳೆದ 15 ವರ್ಷಗಳಿಂದ ಸಿಂಸೆಯಲ್ಲಿ ವಾಸವಿದ್ದರು ಮತ್ತು ಕಳೆದ ಕೆಲವು ವರ್ಷಗಳಿಂದ ಎಲ್ಲೋ ಅವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು.

ಕಳೆದ ಮಾರ್ಚ್ 5 ರಿಂದ ಬಿಬಿನ್ ಕಾಣೆಯಾಗಿದ್ದು, ಆತ ಕೇರಳಕ್ಕೆ ಹೋಗಿರಬಹುದೆಂದು ಸಂಬಂಧಿಕರು ಭಾವಿಸಿದ್ದರು. ಆದರೆ ಬಿಬಿನ್ ತಂದೆ ಕರೆ ಮಾಡಿ ಮಗನ ಬಗ್ಗೆ ವಿಚಾರಿಸಿದಾಗ ಅನುಮಾನಗೊಂಡ ಆತನ ಅಣ್ಣ ಮಾರ್ಟಿನ್ ಅವರು ಎಲ್ಲೋ ಅವರ ಮನೆಗೆ ಹುಡುಕಿಕೊಂಡು ಹೋಗಿದ್ದಾರೆ.

ಆ ವೇಳೆ ಎಲ್ಲೋ ಕೂಡ ಮನೆಯಲ್ಲಿ ಇರಲಿಲ್ಲ. ವಿಚಾರಿಸಿದಾಗ ಮದ್ಯವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಾಗಿರುವುದು ತಿಳಿದುಬಂದಿದೆ. ಬಿಬಿನ್ ಕಾಣೆಯಾದ ಸಮಯ ಮತ್ತು ಎಲ್ಲೋ ಕೇಂದ್ರಕ್ಕೆ ದಾಖಲಾದ ಸಮಯ ಒಂದೇ ಆಗಿದ್ದರಿಂದ ಸಂಶಯಗೊಂಡು ಮಾರ್ಟಿನ್ ಮತ್ತು ಗ್ರಾಮಸ್ಥರು ರಬ್ಬರ್ ತೋಟದಲ್ಲಿ ಹುಡುಕಾಟ ನಡೆಸಿದ್ದಾರೆ.

ಈ ವೇಳೆ ತೋಟದ ಗುಂಡಿಯೊಂದರಲ್ಲಿ ನಾಯಿಗಳು ಏನೋ ತಿನ್ನುತ್ತಿರುವುದು ಕಂಡುಬಂದಿದೆ. ಹತ್ತಿರ ಹೋಗಿ ನೋಡಿದಾಗ ಮನುಷ್ಯನನ್ನು ಕೊಲೆ ಮಾಡಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ತಲೆಬುರುಡೆ ಹಾಗೂ ಮೂಳೆಗಳು ಸಿಕ್ಕಿವೆ.

ಸಾಕ್ಷಿ ನಾಶಪಡಿಸಲು ಶವದ ಮೇಲೆ ತೆಂಗಿನ ಗರಿಗಳನ್ನು ಹಾಕಿ ಸುಡಲಾಗಿದ್ದು, ಸುತ್ತಮುತ್ತಲಿನ ಗಿಡಗಳು ಕೂಡ ಸುಟ್ಟು ಹೋಗಿವೆ. ಘಟನಾ ಸ್ಥಳದಲ್ಲಿ ಬಿಬಿನ್ ಧರಿಸುತ್ತಿದ್ದ ಜರ್ಕಿನ್ ಕೂಡ ಪತ್ತೆಯಾಗಿದೆ. ಈ ಬಗ್ಗೆ ಮಾರ್ಟಿನ್ ಅವರು ಎನ್.ಆರ್.ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಯಾರೋ ದುಷ್ಕರ್ಮಿಗಳು ಬಿಬಿನ್ ಅವರನ್ನು ಕೊಲೆ ಮಾಡಿ ಸಾಕ್ಷಿ ನಾಶಪಡಿಸಲು ಸುಟ್ಟಿರುವ ಸಾಧ್ಯತೆ ಇದ್ದು, ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದೆ.

Human skull and bones found in a rubber plantation

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ರೈತರೊಬ್ಬರ ಎತ್ತಿನ ಗಾಡಿ ಕಳ್ಳತನ

ಅಜ್ಜಂಪುರ: ರೈತರೊಬ್ಬರ ಎತ್ತಿನ ಗಾಡಿ ಕಳ್ಳತನವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಎಂಬುವವರು ಕಳೆದುಹೋದ ತಮ್ಮ ಕಬ್ಬಿಣದ ಎತ್ತಿನ ಗಾಡಿಗಾಗಿ ದೂರು ನೀಡಿದ್ದು, ಪೊಲೀಸರು...

ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ

ಶೃಂಗೇರಿ: ತಾಲೂಕಿನ ಕಿಗ್ಗಾ ಸಮೀಪದ ಯಡದಳ್ಳಿ ಗ್ರಾಮದ ಕೊಚ್ಚಾರಿನಲ್ಲಿರುವ ಐತಿಹಾಸಿಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೈವ ಸನ್ನಿಧಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿಯ ಆಭರಣಗಳು ಹಾಗೂ ಕಾಣಿಕೆ...

Related Articles

ಮಹಿಳಾ ವಿರೋಧಿ ಕಾಂಗ್ರೆಸ್ ಪಕ್ಷದ ನಡೆ ಖಂಡಿಸಿ ಮಹಿಳೆಯರು ಪ್ರತಿಭಟನೆ

ಚಿಕ್ಕಮಗಳೂರು: ಲೋಕಸಭಾ ಸ್ಥಾನದಲ್ಲಿ ಮಹಿಳೆಯರಿಗೆ ಶೇ.೩೩ ಮೀಸಲಾತಿ ಮಂಡನೆ ಅನುಷ್ಟಾನ ಗೊಳಿಸದಂತೆ ತಡೆಹಿಡಿದ ಮಹಿಳಾ ವಿರೋಧಿ...

ಲವ್ ಜಿಹಾದ್ ಖಂಡಿಸಿ ನಗರದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಹಾಗೂ ದೇಶದ ಹಲವೆಡೆ ನಡೆಯುತ್ತಿರುವ ಲವ್ ಜಿಹಾದ್ ಹಾಗೂ ಕಾರ್ಪೊರೇಟ್ ಜಿಹಾದ್‌ನಂತಹ ಕೃತ್ಯಗಳನ್ನು...

ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

ಚಿಕ್ಕಮಗಳೂರು : ಸರ್ವ ಜನರ ಉತ್ಸವವಾಗಿ ಜನೋತ್ಸವದ ರೀತಿ ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್...

ತಾಂಡಗಳಿಗೆ ಕಾಂಗ್ರೆಸ್ ಶಾಸಕರ ಭೇಟಿ ಪ್ರವೇಶ ನಿಷೇಧ ಫಲಕ ಅಳವಡಿಕೆ

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ನಮ್ಮ...