Home namma chikmagalur chikamagalur ಏ.23ಕ್ಕೆ ಕರಾಳಕೃತ್ಯ ಖಂಡಿಸಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ
chikamagalurHomeLatest Newsnamma chikmagalur

ಏ.23ಕ್ಕೆ ಕರಾಳಕೃತ್ಯ ಖಂಡಿಸಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

Share
Oplus_16908288
Share

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯದ ಅಪಚಾರ ಏಪ್ರಿಲ್ ೨೩ ರಂದು ಪಶ್ಚಿಮಬಂಗಾಳದಲ್ಲಿ ನಡೆಯುತ್ತಿದೆ. ಇದನ್ನು ವಿರೋಧಿಸಿ ಅದೇ ದಿನ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಎದ್ದೇಳು ಕರ್ನಾಟಕ ರಾಜ್ಯ ಸಂಚಾಲಕ ಗೌಸ್‌ಮೊಹಿಯುದ್ದೀನ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಮಾತನಾಡಿ, ಆ ರಾಜ್ಯದಲ್ಲಿ ಸುಮಾರು ಅರ್ಧಕೋಟಿ ಮತದಾರರ ಹಕ್ಕನ್ನು ಕಸಿದುಕೊಂಡು ಚುನಾವಣೆ ನಡೆಸಲಾಗುತ್ತಿದೆ.ಪ್ರಜಾತಂತ್ರ ಪ್ರೇಮಿಗಳ ಎದೆಗೆ ಇರಿದಂತಾಗಿದೆ. ಪಶ್ಚಿಮಬಂಗಾಳಕ್ಕೆ ಬಂದಿರುವ ಸ್ಥಿತಿ ಕರ್ನಾಟಕಕ್ಕೂ ಬರುವ ಸಾಧ್ಯತೆಗಳಿದ್ದು, ಈ ಕುರಿತು ಎಚ್ಚರಿಕೆ ವಹಿಸಬೇಕಾಗಿದೆ ಎಂದು ಹೇಳಿದರು.

ಸುಮಾರು ೧೩ ರಾಜ್ಯಗಳ ೬.೫ ಕೋಟಿ ಜನರ ಮತದಾನದಹಕ್ಕು ರದ್ದಾಗಿದೆ. ಇದು ಹಂತಹಂತವಾಗಿ ದೇಶದ ವಿದ್ಯಾಮಾನವಾಗಲಿದೆ. ಭಾರತದ ಪ್ರಜಾತಂತ್ರಕ್ಕೆ ಇಂಜೆಕ್ಷನ್ ಮೂಲಕ ವಿಷ ಉಣಿಸಲಾಗುತ್ತಿದೆ. ನಾವುಗಳ ಮೌನವಹಿಸುತ್ತಾ ಸಾಗಿದರೆ ಈ ದೇಶ ದೇಶವಾಗಿ ಉಳಿಯುವುದಿಲ್ಲ ಎಂದರು.

ಬೆಂಗಳೂರಿನಲ್ಲಿ ವಿವಿಧ ಸಂಘಟನೆ ಮುಖಂಡರು ಮತ್ತು ಕಾರ್ಯಕರ್ತರು ಏ ೨೩ರ ಕರಾಳ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.ಕರ್ನಾಟಕದಲ್ಲಿ ಎಸ್‌ಐಆರ್ ವಿರೋಧಿಸುತ್ತಿರುವ ಪ್ರಗತಿಪರ ಸಂಘಟನೆಗಳು, ಜಾತ್ಯತೀತ ಪಕ್ಷಗಳು ಒಗ್ಗೂಡಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ನಮಗೆ ನೀಡಿರುವ ಮತದಾನದ ಹಕ್ಕನ್ನು ಕಳೆದುಕೊಳ್ಳಲು ನಾವು ಇಚ್ಚಿಸುವುದಿಲ್ಲವೆಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಬಿ.ದಿವಾಕರ ಹೇಳಿದರು. ಏ ೨೩ ರಂದು ನಡೆಯುವ ಪ್ರತಿಭಟನೆಗೆ ಪ್ರಗತಿಪರರು ಕೈಜೋಡಿಸಬೇಕು.ಕರ್ನಾಟಕಕ್ಕೆ ಬರಲಿರುವ ಅಪಾಯವನ್ನು ತಡೆಯಬೇಕಾಗಿದೆ ಎಂದು ಹೇಳಿದರು. ಯುಸೂಫ್‌ಹಾಜಿ ಮನವಿ ಮಾಡಿದರು.

ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿ ಸಂಚಾಲಕ ಟಿ.ಎಲ್.ಗಣೇಶ್, ಮಹಿಳಾ ಘಟಕದ ಸಂಚಾಲಕರಾದ ಅರುಣಾಕ್ಷಿ, ರೀತು, ಮಹಮ್ಮದ್ ಅತಿಕ್ ಇದ್ದರು.

Protest at Freedom Park Bengaluru condemning the atrocities on April 23

Share

Leave a comment

Leave a Reply

Your email address will not be published. Required fields are marked *

Don't Miss

ನಕಲಿ “ಐ.ಎ.ಎಸ್” ಮಿಥುನ್ ಬಂಧನ

ಬೆಂಗಳೂರು: ಚಿಕ್ಕಮಗಳೂರು ಮೂಲದ ಮಿಥುನ್ ಎಂಬತಾ ಐ.ಎ.ಎಸ್.ನ ನಕಲಿ ದಾಖಲೆ ಸೃಷ್ಟಿ ಮಾಡಿ ಹಲವರಿಗೆ ವಂಚನೆ ಮಾಡಿದ್ದು ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅರೋಗ್ಯ ಇಲಾಖೆಯ ಎನ್.ಹೆಚ್.ಎಮ್.ನ ಉಸ್ತುವಾರಿ ಎಂದು...

ನಗರದಲ್ಲಿ ಹಾಡುಹಗಲೇ ಶಿಕ್ಷಕಿಯ ಮಾಂಗಲ್ಯ ಸರ ಅಪಹರಣ

ಚಿಕ್ಕಮಗಳೂರು: ಹಾಡುಹಗಲೇ ಶಿಕ್ಷಕಿಯ ಕೊರಳಿಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಸೋಮವಾರ ಸಂಜೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ...

Related Articles

ಪ್ರಯಾಣಿಕರೇ ಬಸ್ ತಳ್ಳುವ ಕೆಎಸ್‌ಆರ್‌ಟಿಸಿ ಬಸ್‌

ಚಿಕ್ಕಮಗಳೂರು: ಸರ್ಕಾರದ ಉಚಿತ ಯೋಜನೆಗಳ ಆರ್ಭಟದ ನಡುವೆ ಸಾರಿಗೆ ಬಸ್‌ಗಳ ನಿರ್ವಹಣೆ ಅಧೋಗತಿಗೆ ತಲುಪಿದೆಯೇ? ಇಂತಹದೊಂದು ಪ್ರಶ್ನೆ...

ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ

ಚಿಕ್ಕಮಗಳೂರು:ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಮೌನವಹಿಸಿದ್ದಾರೆಂದು ದಲಿತ ಸಂಘರ್ಷಸಮಿತಿ ರಾಜ್ಯ ಸಂಘಟನಾ ಸಂಚಾಲಕ...

ಜನತೆ ಬಿಸಿಲಿನ ಬೇಗೆಗೆ ತತ್ತರಿಸಿ ಹೋದ ಕಾಫಿನಾಡಿನ ಜನತೆ

ಚಿಕ್ಕಮಗಳೂರು: ಮಲೆನಾಡಿನ ಮಡಿಲು, ತಂಪಾದ ಹವಾಮಾನಕ್ಕೆ ಹೆಸರಾದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಈ ಬಾರಿ ಸೂರ್ಯನ ಪ್ರಖರತೆ...

ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು

ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ 13 ವರ್ಷದ ಬಾಲಕನೋರ್ವ...