Home namma chikmagalur chikamagalur ಬೊಲೆರೋ ಪಿಕ್ ಅಪ್ ವಾಹನದಲ್ಲಿ ಕಾಡುಪ್ರಾಣಿಯ ಮಾಂಸ ಪತ್ತೆ
chikamagalurHomeLatest Newsnamma chikmagalur

ಬೊಲೆರೋ ಪಿಕ್ ಅಪ್ ವಾಹನದಲ್ಲಿ ಕಾಡುಪ್ರಾಣಿಯ ಮಾಂಸ ಪತ್ತೆ

Share
Share

ಮೂಡಿಗೆರೆ: ಕಾಡುಪ್ರಾಣಿಗಳನ್ನು ಬೇಟೆಯಾಡಿ ಸಾಗಿಸುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಜನ್ನಾಪುರದಿಂದ ಮೂಡಿಗೆರೆ ಕಡೆಗೆ ಬೊಲೆರೋ ಪಿಕ್ ಅಪ್ ವಾಹನದಲ್ಲಿ ಕಾಡುಪ್ರಾಣಿಯ ಮಾಂಸ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಗೋಣಬೀಡು ಶಾಖೆಯ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಹಾಲೂರು ಗ್ರಾಮದ ಜೋಗಣ್ಣನಕೆರೆ ಬಸ್‌ಸ್ಟಾಂಡ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ನಿಲ್ಲಿಸದೆ ವೇಗವಾಗಿ ಸಾಗಿದ್ದ ಬಿಳಿ ಬಣ್ಣದ ಮಹೀಂದ್ರ ಬೊಲೆರೋ ಮ್ಯಾಕ್ಸ್ ಟ್ರಕ್ (KA-46-6330) ಅನ್ನು ಅಧಿಕಾರಿಗಳು ಬೆನ್ನಟ್ಟಿ ಹಿಡಿದಿದ್ದಾರೆ. ವಾಹನವನ್ನು ಪರಿಶೀಲಿಸಿದಾಗ ಪ್ಲಾಸ್ಟಿಕ್ ಚೀಲದಲ್ಲಿ ಸತ್ತಿರುವ ಮೂರು ಪುನುಗುಬೆಕ್ಕುಗಳು (Small Indian Civet Cat) ಪತ್ತೆಯಾಗಿವೆ.

ಬಂಧಿತ ಆರೋಪಿಗಳಾದ ಅಬಚೂರಿನ ಎ.ಜೆ.ನಂದನ್ (38 ವರ್ಷ) ಮತ್ತು ಹಾಲೂರು ಗ್ರಾಮದ ಹೆಚ್.ಜಿ.ಆದರ್ಶ (33 ವರ್ಷ) ಅವರನ್ನು ವಿಚಾರಣೆ ನಡೆಸಿದಾಗ, ಇವರು ಚಿಕ್ಕಮಗಳೂರು ತಾಲ್ಲೂಕಿನ ಕಳಸಾಪುರ ಮತ್ತು ಮರ್ಲೆ ಗ್ರಾಮದ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಸರ್ಚ್ ಲೈಟ್ ಬಳಸಿ ರಾತ್ರಿ ವೇಳೆ ಬೇಟೆಯಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಬೇಟೆಯಾಡಿದ ಪ್ರಾಣಿಗಳ ಮಾಂಸವನ್ನು ಬಳಸುವ ಉದ್ದೇಶವನ್ನು ಇವರು ಹೊಂದಿದ್ದರು ಎಂದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಿದ ಎರಡು ಒಂಟಿನಳಿಕೆ ಬಂದೂಕುಗಳು, 4 ಜೀವಂತ ಗುಂಡುಗಳು, ಒಂದು ಸರ್ಚ್ ಲೈಟ್, ಎರಡು ಮೊಬೈಲ್ ಫೋನ್‌ಗಳು ಮತ್ತು ಬೊಲೆರೋ ವಾಹನವನ್ನು ಇಲಾಖೆ ವಶಕ್ಕೆ ಪಡೆದಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ (WLOR/No.03/2026-27) .

ಪ್ರಕರಣದಲ್ಲಿ ಭಾಗಿಯಾದ ಎ3 ರಿಂದ ಎ6 ವರೆಗಿನ ಆರೋಪಿಗಳಾದ ಪ್ರೀತಮ್, ಚಿದಾನಂದ, ಕೃಷ್ಣಪ್ಪ ಮತ್ತು ಬಂದೂಕು ನೀಡಿ ಸಹಕರಿಸಿದ ಹೆಚ್.ಜಿ.ಕರುಣಾಕರಮೂರ್ತಿ ಪ್ರಸ್ತುತ ತಲೆಮರೆಸಿಕೊಂಡಿದ್ದಾರೆ.

Wild animal meat found in Bolero pick-up vehicle

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...