Home namma chikmagalur chikamagalur ತಾಂಡಗಳಿಗೆ ಕಾಂಗ್ರೆಸ್ ಶಾಸಕರ ಭೇಟಿ ಪ್ರವೇಶ ನಿಷೇಧ ಫಲಕ ಅಳವಡಿಕೆ
chikamagalurHomeLatest Newsnamma chikmagalur

ತಾಂಡಗಳಿಗೆ ಕಾಂಗ್ರೆಸ್ ಶಾಸಕರ ಭೇಟಿ ಪ್ರವೇಶ ನಿಷೇಧ ಫಲಕ ಅಳವಡಿಕೆ

Share
Share

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ನಮ್ಮ ತಾಂಡಗಳಿಗೆ ಭೇಟಿ ನೀಡದಂತೆ ಪ್ರವೇಶ ನಿಷೇಧ ಫಲಕ ಅಳವಡಿಸುತ್ತೇವೆ ಎಂದು ರಾಷ್ಟ್ರೀಯ ಘೋರ್ ಮುಳಾವ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ನಾಯ್ಕ ಹೇಳಿದರು.

ಬಂಜಾರ ಸಮುದಾಯಕ್ಕೆ ಮುಖ್ಯಮಂತ್ರಿ ದ್ರೋಹ ಮಾಡಿದ್ದಾರೆ. ಒಳಮೀಸಲಾತಿಯಲ್ಲಿ ನಮ್ಮ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ ಮಾಧುಸ್ವಾಮಿ ವರದಿಯಲ್ಲಿ ಬಂಜಾರ ಸಮಾಜದವರಿಗೆ 4 ಜಾತಿಗಳು ಇದ್ದವು ಬಂಜಾರ, ಕೊರಮ, ಕೊರಚ, ಭೋವಿ ಜನಾಂಗಕ್ಕೆ ಶೇ 4ರಷ್ಟು ಮೀಸಲಾತಿ ಇತ್ತು ಅದನ್ನೇ ನಮ್ಮ ಸಮಾಜದವರು ‘ಬಿಜೆಪಿ ಹಠವೋ ತಾಂಡಾ ಬಚಾವೋ ಎಂದು ಬಿಜೆಪಿಗೆ ಮತ ಹಾಕದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಲು ನೆರವಾಗಿದ್ದವು. ಆದರೆ, ಅವರು ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂಜಾರ ಸಮುದಾಯಕ್ಕೆ ಸರಿಯಾದ ಅವಕಾಶ ನೀಡಿಲ್ಲ. ಸಂಪುಟದಲ್ಲಿ ಎಡಗೆ ಮತ್ತು ಬಲಗೈಗೆ ತಲಾ ಶೇ 5.25 ರಷ್ಟು ಮೀಸಲಾತಿ ಮಾಡಲಾಗಿ ನೀಡಲಾಗಿದೆ. ಭೋವಿ, ಕೊರಮಕ್ಕೆ ಶೇ 4.5 ರಷ್ಟು ಮೀಸಲಾತಿ ಮಾಡಿದ್ದಾರೆ. ಈ ಮೂಲಕ ನಮ್ಮ ಜನಾಂಗಕ್ಕೆ ಕಡಿಮೆ ಮೀಸಲಾತಿ ನೀಡಿದ್ದಾರೆ ಎಂದರು.

ನಮ್ಮ ಬಂಜಾರ ಸುಮುದಾಯದವರು ರಾಜ್ಯದ ಹರಪನಹಳ್ಳಿ, ದಾವಣಗೆರೆ ಸೇರಿದಂತೆ ವಿವಿಧೆಡೆಯಿಂದ ಸುಮಾರು 12 ಸಾವಿರ ಮಂದಿ ಮಲೆನಾಡಿನ ಕಾಫಿತೋಟಕ್ಕೆ ಕೂಲಿ ಕೆಲಸಕ್ಕೆ ಬಂದು ವರ್ಷದ 10 ತಿಂಗಳು ಇಲ್ಲಿ ಕೂಲಿ ಮಾಡುತ್ತಾರೆ. ಅಷ್ಟು ಬಡತನದ ಸ್ಥಿತಿಯಲ್ಲಿ ನಮ್ಮ ಸಮುದಾಯ ಇದೆ ಎಂದು ಹೇಳಿದರು.

ರಾಜ್ಯದ ನಮ್ಮ ಯಾವುದೇ ತಾಂಡಗಳಿಗೆ ಕಾಂಗ್ರೆಸ್ ಶಾಸಕರಿಗೆ ಪ್ರವೇಶ ಇಲ್ಲ ಎಂದು ಫಲಕ ಹಾಕಿಸು ತ್ತೇವೆ. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರವಾ ಹೋರಾಟ ಮಾಡು ತ್ತೇವೆ ಎಂದು ಎಚ್ಚರಿಕೆ ನೀಡಿದರು.
ರಾಷ್ಟ್ರೀಯ ಘೋರ್ ಮಳಾವ್ ಸಂಘದ ಸುಮಿತ್ರ, ಭಾಮ, ಜಯಂತ್, ಕೃಷ್ಣಾನಾಯಕ್ ಸುದ್ದಿ ಗೋಷ್ಠಿಯಲ್ಲಿ ಭಾಗವಹಿಸಿದ್ದರು.

Signs prohibiting Congress MLAs from visiting Tandas installed

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...