Home namma chikmagalur chikamagalur ಶೃಂಗೇರಿ ರಾಜಕೀಯ ಮಿಕ್ಸ್ ಮಸಾಲಾ-ಎದೆ ಬಡಿತ ಯಾರಿಗೆ.
chikamagalurHomeLatest Newsnamma chikmagalur

ಶೃಂಗೇರಿ ರಾಜಕೀಯ ಮಿಕ್ಸ್ ಮಸಾಲಾ-ಎದೆ ಬಡಿತ ಯಾರಿಗೆ.

Share
Share

ಶೃಂಗೇರಿ: ಶೃಂಗೇರಿ ವಿಧಾನ ಸಭಾ ಸದಸ್ಯರಾದ ಟಿ.ಡಿ.ರಾಜೇಗೌಡರ ಆಯ್ಕೆಯಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಅನ್ಯಾಯಯಾಗಿದೆ ಎಂದು ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಅರ್ಜಿ ಹೈಕೋರ್ಟ್ ಪುರಸ್ಕರಿಸಿ ಮೇ 2 ರಂದು ಅಂಚೆ ಮತಗಳ ಏಣಿಕೆಗೆ ಆದೇಶ ನೀಡಿದೆ.

ಮತಗಳ ಏಣಿಕೆಗಾಗಿ ಈಗಾಗಲೇ ಜಿಲ್ಲಾ ಆಡಳಿತ ತಯಾರಿ ನಡೆಸಿದೆ.ಫಲಿತಾಂಶ ಏನೇ ಬಂದರು ಮತ್ತೆ ಸುಪ್ರೀಂ ಕೋರ್ಟ್ ಗೆ ಹೋಗಲೇ ಬೇಕಾಗುತ್ತದೆ ಎಂದು ಕಾನೂನು ತಜ್ಞರು ಹೇಳುತ್ತಿದ್ದಾರೆ.

ರಾಜೇಗೌಡರು 205 ಮತಗಳ ಅಂತರದಿಂದ ವಿಜೇಯತರಾಗಿದ್ದು 299 ಮತಗಳನ್ನು ತಿರಸ್ಕರಿಸಿರುವುದು ಸೇರಿದಂತೆ ಅಂಚೆ ಮತಗಳನ್ನು ಮತ್ತೊಮ್ಮೆ ಏಣಿಕೆ ಮಾಡಬೇಕಾಗಿದೆ.ಹೀಗಾಗಿ ಜೀವರಾಜ್ ಮತ್ತು ರಾಜೇಗೌಡರ ಹೃದಯ ಬಡಿತ ಯಾರಿಗೆ ಬೇಕಾದರೂ ಆಗಬಹುದು ಎಂದು ನಿರೀಕ್ಷೆ ಮಾಡುವಂತಿಲ್ಲ ಏಕೆಂದರೆ ಯಾರ ಪರ ಫಲಿತಾಂಶ ಬಂದರು ಮತ್ತೊಮ್ಮೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಅವಕಾಶವಿದೆ.

ಈಗಾಗಲೇ ವಿಧಾನ ಪರಿಷತ್ ಸದಸ್ಯರಾದ ಪ್ರಾಣೇಶ್ ಮತ್ತು ಗಾಯಿತ್ರಿ ಶಾಂತೇಗೌಡ ಆಯ್ಕೆ ತಕರಾರು ಸುಪ್ರೀಂ ಕೋರ್ಟ್ ಆದೇಶದಂತೆ ಏಣಿಕೆ ಕಾರ್ಯ ಕೂಡ ಮುಗಿದರು ಫಲಿತಾಂಶ ಮಾತ್ರ ಪ್ರಕಟವಾಗಿಲ್ಲ.ಹೀಗಾಗಿ ಏನೇ ಫಲಿತಾಂಶ ಬಂದರು ಅವಧಿ ಮುಗಿಯುವವರೆಗೆ ಟಾಕು ಠೀಕಾಗಿ ರಾಜೇಗೌಡ ಓಡಾಡುತ್ತಾರೆ ಎಂದು ಅಂದಾಜಿಸಲಾಗುತ್ತಿದೆ.

ಜಿಲ್ಲೆಯಲ್ಲಿ ವಿಧಾನ ಪರಿಷತ್ ಮತ್ತು ವಿಧಾನ ಸಭಾ ಕ್ಷೇತ್ರಗಳ ತಕರಾರು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಆದರೆ ಮುಂದಿನ ವಿಧಾನ ಸಭಾ ಚುನಾವಣೆ ರಂಗೇರುವುದು ಖಚಿತ.ಬಿಜೆಪಿಯಲ್ಲಿ ಗದ್ದೆ ಮನೆ ವಿಶ್ವನಾಥ ಎಂಟ್ರಿ ಕೊಟ್ಟಿರುವುದು ಜೀವರಾಜ್ ಪರಿಸ್ಥಿತಿ ಏನು ಎಂದು ಚರ್ಚೆ ಅಗುತ್ತಿದೆ.ಇದರ ಜೊತೆಗೆ ಮಲೆನಾಡಿನಲ್ಲಿ ಝಣ,ಝಣ ಕಾಂಚಾಣ ಸದ್ದು ಮಾಡುವುದು ಮಾತ್ರ ಖಚಿತ ಎನ್ನಲಾಗಿದೆ.

ಬಿಜೆಪಿ ಜನತಾದಳ ಒಟ್ಟಾಗಿ ಚುನಾವಣೆಗೆ ಹೋದರೆ ಕಾಂಗ್ರೆಸ್ ಗೆ ಸಂಕಷ್ಟ ಎನ್ನಲಾಗುತ್ತಿದೆ.ಆದರೂ ರಾಜೇಗೌಡರು ಪವರ್ ಪುಲ್ ಅಭ್ಯರ್ಥಿಯಾಗಿರುವುದು ಹಣ ಬಲ ಕೂಡ ನೆರವಿಗೆ ಬರುತ್ತದೆ ಎಂದು ಕಟ್ಟಾ ಕಾಂಗ್ರೆಸ್ಸಿಗರ ಅಭಿಪ್ರಾಯವಾಗಿದೆ.

Sringeri political mix masala-who is the chest beating for?

Share

Leave a comment

Leave a Reply

Your email address will not be published. Required fields are marked *

Don't Miss

ಜನತೆ ಬಿಸಿಲಿನ ಬೇಗೆಗೆ ತತ್ತರಿಸಿ ಹೋದ ಕಾಫಿನಾಡಿನ ಜನತೆ

ಚಿಕ್ಕಮಗಳೂರು: ಮಲೆನಾಡಿನ ಮಡಿಲು, ತಂಪಾದ ಹವಾಮಾನಕ್ಕೆ ಹೆಸರಾದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಈ ಬಾರಿ ಸೂರ್ಯನ ಪ್ರಖರತೆ ಮಿತಿ ಮೀರಿದ್ದು, ಜನತೆ ಬಿಸಿಲಿನ ಬೇಗೆಯಿಂದ ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಸಾಮಾನ್ಯವಾಗಿ ವರ್ಷಪೂರ್ತಿ ಹಿತಕರವಾದ...

ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು

ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ 13 ವರ್ಷದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಚಿಕ್ಕಮಗಳೂರು ನಗರದ ದಂಟರಮಕ್ಕಿ ನಿವಾಸಿಯಾದ ಪೃಥ್ವಿರಾಜ್ ಮೃತಪಟ್ಟ...

Related Articles

ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ 2

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ 2 ಇದೇ ಏ.30 ರಿಂದ ಆರಂಭಗೊಳ್ಳುತ್ತಿರುವುದರಿಂದ ಪರೀಕ್ಷಾ ತಯಾರಿ ಕುರಿತು...

ಸಂವಿಧಾನದ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಸಾವಿರ ಸಿದ್ದಾಂತಗಳನ್ನು ನೀಡಿದ್ದಾರೆ

ಚಿಕ್ಕಮಗಳೂರು: ಇತ್ತೀಚಿನ ವರ್ಷಗಳಲ್ಲಿ ಡಾ|ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಬದಲಾಯಿಸುತ್ತೇವೆಂಬ ಮಾತುಗಳು ಕೇಳಿ ಬರುತ್ತಿದೆ. ಇಂತಹ...

ಇಂದು ಕೈವಾರ ತಾತಯ್ಯನವರ ದೇವಾಲಯ ಉದ್ಘಾಟನೆ

ಚಿಕ್ಕಮಗಳೂರು: ತಾಲೂಕಿನ ಸಗನಿಪುರ ರಸ್ತೆಯ ಕೈವಾರ ಗಿರಿಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀಯೋಗಿನರೇಯಣ ಯತೀಂದ್ರ ಕೈವಾರ...

ಕಾಂಗ್ರೆಸ್ – ಮಿತ್ರ ಪಕ್ಷದಿಂದ ದೇಶದ ಮಹಿಳೆಯರಿಗೆ ಮಾಡಿದ ಅಪಮಾನ

ಚಿಕ್ಕಮಗಳೂರು:ಸಂಸತ್ತಿನಲ್ಲಿ ನಾರಿಶಕ್ತಿ ಮಹಿಳಾ ಮೀಸಲಾತಿ ವಿರುದ್ಧ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಮತಚಲಾಯಿಸುವ ಮೂಲಕ...