Home 40 ವರ್ಷಗಳ ಒಳ ಮೀಸಲಾತಿ ಹೋರಾಟ ಫಲ ಕೊಟ್ಟಿದೆ
HomeLatest Newsnamma chikmagalurTarikere

40 ವರ್ಷಗಳ ಒಳ ಮೀಸಲಾತಿ ಹೋರಾಟ ಫಲ ಕೊಟ್ಟಿದೆ

Share
Share

ತರೀಕೆರೆ:  ಕಳೆದ 40 ವರ್ಷಗಳಿಂದ ಒಳ ಮೀಸಲಾತಿ ಜಾರಿಗೊಳಿಸುವಂತೆ ಮಾಡಿದ ಹೋರಾಟ ಫಲ ಕೊಟ್ಟಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು. ತರೀಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಮಾದಿಗ ಸಮುದಾಯದ ಮುಖಂಡರ ಸಂವಾದದಲ್ಲಿ ಮಾತನಾಡಿ ಒಳ ಮೀಸಲಾತಿ ಒದಗಿಸಲು ನೇಮಿಸಿದ ಎಲ್ಲಾ ಆಯೋಗಗಳು ಮಾದಿಗ ಸಮುದಾಯದ ಪರವಾದ ಮತ್ತು ಸತ್ಯವಾದ ವರದಿಯನ್ನೇ ರಾಜ್ಯ ಸರ್ಕಾರಕ್ಕೆ ನೀಡಿವೆ.

ಡಾ.ಬಿ.ಆರ್.ಅಂಬೇಡ್ಕರ್ ರವರ ಆಶಯದಂತೆಯೇ ಮೀಸಲಾತಿ ದೊರಕಿದೆ. ಮುಂದಿನ ಎಲ್ಲಾ ಸರ್ಕಾರಿ ನೌಕರಿಗಳು ಒಳ ಮೀಸಲಾತಿಯಡಿಯಲ್ಲಿಯೇ ಭರ್ತಿಯಾಗಲಿವೆ. ಒಳ ಮೀಸಲಾತಿಯಲ್ಲಿ ಜನಸಂಖ್ಯೆ ಮತ್ತು ಅವರ ಸ್ಥಿತಿಗತಿಗಳ ಆಧಾರದ ಮೇಲೆ ಮೀಸಲಾತಿಯ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಒಳ ಮೀಸಲಾತಿ ಸೌಲಭ್ಯದಡಿ ಸಮುದಾಯದ ವಿದ್ಯಾವಂತರಿಗೆ ಸೂಕ್ತ ಅವಕಾಶ ದೊರಕಲಿವೆ.

ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಜಿಲ್ಲಾವಾರು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕು ಎಂಬ ಉದ್ದೇಶದೊಂದಿಗೆ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಭೃಹತ್ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಜಿ.ತಿಪ್ಪೇಶ್, ಮಹೇಂದ್ರಸ್ವಾಮಿ, ಶಿಕ್ಷಕ ಎಚ್.ಕೆ.ಶೇಖರಪ್ಪ ಮಾತನಾಡಿದರು. ಅಣ್ಣಯ್ಯ, ಪ್ರಮೋದ್, ವೈ.ಎಸ್.ಮಂಜಪ್ಪ, ಜಿ.ಟಿ.ರಮೇಶ್, ಬಸವರಾಜು, ಮಂಜಪ್ಪ, ನಾಗೇಶ್, ರಂಗನಾಥ್, ಹರೀಶ್, ಮಂಜಪ್ಪ, ಅಶೋಕ್, ಆಂಜನೇಯ, ಎಸ್.ಕೆ.ರಂಗಪ್ಪ, ಕುಮಾರಪ್ಪ, ರಘು, ಶಿವರಾಜ್, ಗುರುಮೂರ್ತಿ ಹಾಗೂ ಇತರರು ಹಾಜರಿದ್ದರು.
40 years of internal reservation struggle has borne fruit
Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...