Home namma chikmagalur chikamagalur ಕಗ್ಗಂಟಾಗಿ ಉಳಿದ ಅಂಚೆ ಮತಗಳ ಎಣಿಕೆ ಕಾರ್ಯ
chikamagalurHomeLatest Newsnamma chikmagalur

ಕಗ್ಗಂಟಾಗಿ ಉಳಿದ ಅಂಚೆ ಮತಗಳ ಎಣಿಕೆ ಕಾರ್ಯ

Share
Share

ಚಿಕ್ಕಮಗಳೂರು: ಹೈಕೋರ್ಟ್ ನಿರ್ದೇಶನದಂತೆ ಶನಿವಾರ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಕಾರ್ಯ ಪೂರ್ಣಗೊಳ್ಳದೆ. ತಡರಾತ್ರಿವರೆಗೂ ಕಗ್ಗಂಟಾಗಿ ಉಳಿದಿತ್ತು.

2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ 201 ಮತಗಳಿಂದ ಜಯ ಸಾಧಿಸಿದ್ದರು. 1,822 ಅಂಚೆ ಮತಗಳಲ್ಲಿ 279 ಮತಗಳು ತಿರಸ್ಕೃತಗೊಂಡಿದ್ದವು. ಇದರ ವಿರುದ್ಧ ಬಿಜೆಪಿ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು.

ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಸುಧಾಕರಶೆಟ್ಟಿ ಅವರು ಮಧ್ಯಾಹ್ನ ಮತ ಎಣಿಕೆ ಕೇಂದ್ರದಿಂದ ಹೊರ ಬಂದು, ‘ತಿರಸ್ಕೃತ ಮತಗಳ ಪರಿಶೀಲನೆ ಶೇ. 70ರಷ್ಟು ಮುಗಿದಿದೆ. ಯಾವುದೇ ಮತಪತ್ರ ಪುರಸ್ಕೃತವಾಗಿಲ್ಲ. ಈ ಮರು ಎಣಿಕೆಯಿಂದ ಫಲಿತಾಂಶದಲ್ಲಿ ವ್ಯತ್ಯಾಸ ಆಗುವುದಿಲ್ಲ’ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.

ಆರಂಭದ 350 ಮತಗಳ ಎಣಿಕೆಯ ವೇಳೆಗೆ ಟಿ.ಡಿ.ರಾಜೇಗೌಡ ಮತ್ತು ಡಿ.ಎನ್.ಜೀವರಾಜ್ ಇಬ್ಬರಿಗೂ ಗುರುತು ಹಾಕಿರುವ 50 ಮತ ಪತ್ರ ದೊರಕಿದವು. ‘2023ರಲ್ಲಿ ನಡೆದ ಎಣಿಕೆ ವೇಳೆ ಮಾನ್ಯವಾಗಿದ್ದ ಮತಪತ್ರಗಳಲ್ಲಿ ಈಗ ಇಬ್ಬರ ಹೆಸರಿಗೂ ಗುರುತು ಹಾಕಲಾಗಿದೆ ಎಂದರೆ ಮತಪತ್ರಗಳನ್ನು ವಿರೂಪಗೊಳಿಸಲಾಗಿದೆ. ಮತ ಎಣಿಕೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ರಾಜೇಗೌಡ ಪಟ್ಟು ಹಿಡಿದರು ಎಂದು ಮೂಲಗಳು ತಿಳಿಸಿವೆ.

ರಾಜೇಗೌಡ ಅವರು ಎಣಿಕೆಗೆ ಅಡ್ಡಿಪಡಿಸು ತ್ತಿದ್ದು ಅವರನ್ನು ಹೊರಗೆ ಕಳುಹಿಸಿ ಎಣಿಕೆ ಮಾಡಬೇಕು ಎಂದು ಬಿಜೆಪಿಯವರು ಪ್ರತಿಭಟನೆ ನಡೆಸಿದರು.

Postal vote counting remains a mess

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...