Home namma chikmagalur chikamagalur ರೈತರು-ಹೋರಿಗಳಿಗೂ ಅವಿನಾಭಾವ ಸಂಬಂಧ
chikamagalurHomeLatest Newsnamma chikmagalur

ರೈತರು-ಹೋರಿಗಳಿಗೂ ಅವಿನಾಭಾವ ಸಂಬಂಧ

Share
Share

ಚಿಕ್ಕಮಗಳೂರು:  ರೈತನಿಗೂ ಹಾಗೂ ಹೋರಿಗಳಿಗೂ ಅವಿನಾವಭಾವ ಸಂಬಂಧವಿದೆ. ಜೋಡೆತ್ತಿನ ಓಟದ ಸ್ಪರ್ಧೆ ರೈತರಿಗೆ ಮನರಂಜನೆ ಜೊತೆಗೆ ಕ್ರೀಡಾಸ್ಪೂರ್ತಿ ನೀಡುತ್ತಿದ್ದು ಯುವಜನತೆ ಹೆಚ್ಚು ಗ್ರಾಮೀಣ ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಿಡಿಎ ಮಾಜಿ ಅಧ್ಯಕ್ಷ ಕೋಟೆ ರಂಗನಾಥ್ ಹೇಳಿದರು.

ನಗರದ ಕೋಟೆ ಸಮೀಪ ಮಿನಿ ವಿಮಾನ ಮೈದಾನದಲ್ಲಿ ಶ್ರೀ ಕೊಲ್ಲಾಪುರದಮ್ಮನವರ ಜಾತ್ರಾ ಮ ಹೋತ್ಸವ ಪ್ರಯುಕ್ತ ಭಾನುವಾರ ಆಯೋಜಿಸಿದ್ಧ ಅಂತರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ ದೈನಂದಿನವು ಕೃಷಿ ಚಟುವಟಿಕೆ ಕೆಲಸಗಳಲ್ಲಿ ನಿರತರಾಗುವ ರೈತರಿಗೆ ಜೋಡೆತ್ತಿನ ಗಾಡಿ ಕ್ರೀಡಾಕೂಟ ಗಳು ಸಹಕಾರಿ. ಅಲ್ಲದೇ ರಾಸುಗಳು ಮತ್ತು ರೈತನ ನಡುವೆ ಬಾಂಧವ್ಯ ವೃದ್ದಿಸಲು ಈ ಕ್ರೀಡೆ ಸ್ಪೂರ್ತಿಯಾ ಗಿದ್ದು ಹೆಚ್ಚಿನ ಗ್ರಾಮೀಣ ಪ್ರದೇಶದ ಯುವಜನತೆ ಭಾಗಿಯಾಗುವುದು ಒಳ್ಳೆಯ ಬೆಳವಣಿಗೆ ಎಂದರು.

ಎತ್ತಿನಗಾಡಿ ಸ್ಪರ್ಧೆ ನಮ್ಮ ನೆಲದ ಗ್ರಾಮೀನ ಸೊಗಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಪೂರ್ವಿ ಕರ ಕಾಲದಿಂದಲೂ ಉತ್ತಮ ರಾಸುಗಳನ್ನು ರೈತರು ಪ್ರೀತಿಯಿಂದ ಸಾಕುತ್ತಿದ್ದಾರೆ. ಸ್ಪರ್ಧೆಗಳಲ್ಲಿ ಭಾಗಹಿಸು ವ ಸ್ಪರ್ಧಾಳುಗಳು ಸೋಲು-ಗೆಲುವು ಎರಡನ್ನೂ ಸಮನಾಗಿ ಕ್ರೀಡಾ ಮನೋಭಾವನೆಯಿಂದ ಸ್ವೀಕರಿಸಬೇ ಕು ಎಂದರು.

ಜಯಕರ್ನಾಟಕ ವೇದಿಕೆ ಅಧ್ಯಕ್ಷ ಕೆ.ಆರ್.ಅನಿಲ್‌ಕುಮಾರ್ ಮಾತನಾಡಿ ಆಧುನಿಕ ಜಗತ್ತಿನಲ್ಲಿ ಯುವ ಕರು ಮೊಬೈಲ್ ಹಾಗೂ ಟಿವಿಗಳಿಗೆ ಅಂಟಿಕೊಂಡಿದ್ದಾರೆ. ಹೀಗಾಗಿ ಹೊರಾಂಗಣ ಕ್ರೀಡೆಗೆ ಹೆಚ್ಚು ಮನ್ನಣೆ ನೀಡುತ್ತಿಲ್ಲ. ಆದ್ದರಿಂದ ಹೆಚ್ಚು ಗ್ರಾಮೀಣ ಕ್ರೀಡೆಗಳಾದ ಜೋಡೆ ಎತ್ತಿನ ಗಾಡಿ, ಕಬ್ಬಡಿದಂಥ ಕ್ರೀಡಾಕೂಟದ ಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಜೋಡೆತ್ತಿನ ಸ್ಪರ್ಧೆಯಲ್ಲಿ ಸ್ಪರ್ಧಾಳುಗಳು ತೀರ್ಪುಗಾರರ ತೀರ್ಮಾನಕ್ಕೆ ಬದ್ಧರಾಗಬೇಕು. ಯಾವುದೇ ಅಡಚಣೆಯಾಗದಂತೆ ಸೂಕ್ತ ರೀತಿಯಲ್ಲಿ ಸ್ಪರ್ಧೆ ಯಶಸ್ವಿಗೊಳಿಸಿದರೆ, ಮುಂದೆಯೂ ಈ ರೀತಿಯ ಕಾ ರ್ಯಕ್ರಮ ನಡೆಸಲು ಆಯೋಜಕರಿಗೆ ಹೆಚ್ಚು ಮುಂದಾಗುತ್ತಾರೆ ಎಂದು ತಿಳಿಸಿದರು.

ಸ್ಪರ್ಧಾ ಆಯೋಜಕರು ಮಾತನಾಡಿ ಕರ್ನಾಟಕ, ಆಂಧ್ರ ಸೇರಿದಂತೆ ಹಲವು ರಾಜ್ಯಗಳಿಂದ ಸುಮಾ ರು ೬೨ ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾದ ಮೊದ ಲ ನಾಲ್ಕು ತಂಡಗಳಿಗೂ ಟ್ರೊಫಿ ಮತ್ತು ನಗದು ಬಹುಮಾನ ನಿಗಧಿಪಡಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಕುಮಾರ್, ಸ್ಥಳೀಯರಾದ ಗುಂಡಣ್ಣ, ಹರೀಶ್, ವಿಶ್ವನಾಥ್, ಮಧುಕುಮಾರ್ ಅರಸ್, ಜೀವನ್, ಆಯೋಜಕರು ಮತ್ತು ದೋಣಿಖಣ, ಕೋಟೆ, ಮೂರುಮನೆಹಳ್ಳಿ , ಹೊಸಮನೆ ಗ್ರಾಮಸ್ಥರು ಉಪಸ್ಥಿತರಿದ್ದರು.

Farmers and bulls have an inseparable relationship.

Share

Leave a comment

Leave a Reply

Your email address will not be published. Required fields are marked *

Don't Miss

ವಸತಿ ಶಾಲೆಯಿಂದ ಓಡಿಹೋದ ಮಕ್ಕಳು…?

ಚಿಕ್ಕಮಗಳೂರು: ಕಾಫಿನಾಡಿನ ತುಡುಕೂರು ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ತಡರಾತ್ರಿ ನಡೆದ ಮಕ್ಕಳ ಗಲಾಟೆ ಸದ್ಯ ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಶಾಲೆಯಲ್ಲಿ ಮಕ್ಕಳ ನಡುವೆ ಉಂಟಾದ ಜಗಳದಿಂದ...

ಜಿಲ್ಲೆಯವರಿಗೆ ಮಂತ್ರಿ ಸ್ಥಾನ ಇಲ್ಲವೆ ಇಲ್ಲ

ನ್ಯೂಸ್ ಕಿಂಗ್ ಈ ಹಿಂದೆ ಜಿಲ್ಲೆಯ ಯಾರಿಗೂ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಸುದ್ದಿ ನೀಡಿತ್ತು.ಆದರೆ ಅನಿವಾಸಿ ಕನ್ನಡಿಗರಿಗೆ ಸಚಿವಾಲಯ ಹೊಸದಾಗಿ ಪ್ರಾರಂಭಿಸಿದರೆ ಆರತಿ ಕೈಷ್ಣರಿಗೆ ಅವಕಾಶ ಸಿಗಬಹುದು ಎಂಬ ಅನಿಸಿಕೆ...

Related Articles

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...