ಚಿಕ್ಕಮಗಳೂರು: ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದಿಗೆ ಡಿ.ಎನ್. ಜೀವರಾಜ್ ಅವರ ಗೆಲುವು ಖಚಿತಗೊಂಡಿದ್ದು, ಅವರು ಶೃಂಗೇರಿ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಹೈಕೋರ್ಟ್ ಆದೇಶದ ಮೇರೆಗೆ ಮೇ 2ರಂದು ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟ ತಲುಪಿದ್ದು, ಚುನಾವಣಾ ಆಯೋಗ ಇಂದು ಅಧಿಕೃತ ಫಲಿತಾಂಶವನ್ನು ಪ್ರಕಟಿಸಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಡಿ.ಎನ್. ಜೀವರಾಜ್ ಅವರು ಮರು ಎಣಿಕೆಯಲ್ಲಿ ಮುನ್ನಡೆ ಸಾಧಿಸಿ, ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರನ್ನು ಹಿಂದಿಕ್ಕಿ ಗೆಲುವು ದಾಖಲಿಸಿದ್ದಾರೆ.
ಮೇ 2ರಂದು ನಡೆದ ಮರು ಎಣಿಕೆಯಲ್ಲಿ ಅಂಚೆ ಮತಗಳ ಪರಿಶೀಲನೆ ಪೂರ್ಣಗೊಂಡಿದ್ದರೂ ಫಲಿತಾಂಶವನ್ನು ತಕ್ಷಣ ಘೋಷಿಸಲಾಗಿರಲಿಲ್ಲ. ಈ ಬೆಳವಣಿಗೆ ಕ್ಷೇತ್ರದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.
ಮರು ಎಣಿಕೆಯು ರೋಚಕ ಹಣಾಹಣಿಗೆ ಸಾಕ್ಷಿಯಾಗಿದ್ದು, ಕೊನೆ ಹಂತದಲ್ಲಿ ಜೀವರಾಜ್ ಮುನ್ನಡೆ ಕಾಯ್ದುಕೊಂಡಿದ್ದರು.
ಈ ಫಲಿತಾಂಶ ಶೃಂಗೇರಿ ಕ್ಷೇತ್ರದ ರಾಜಕೀಯದಲ್ಲಿ ಮಹತ್ವದ ತಿರುವು ತಂದಿದ್ದು, ಬೆಂಬಲಿಗರಲ್ಲಿ ಸಂಭ್ರಮ ಮನೆಮಾಡಿದೆ.
D.N. Jeevaraj elected as new MLA of Sringeri constituency
Leave a comment