Home namma chikmagalur chikamagalur ಶೃಂಗೇರಿ ಕ್ಷೇತ್ರದ ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ
chikamagalurHomeLatest Newsnamma chikmagalur

ಶೃಂಗೇರಿ ಕ್ಷೇತ್ರದ ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ

Share
Share

ಚಿಕ್ಕಮಗಳೂರು: ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದಿಗೆ ಡಿ.ಎನ್. ಜೀವರಾಜ್ ಅವರ ಗೆಲುವು ಖಚಿತಗೊಂಡಿದ್ದು, ಅವರು ಶೃಂಗೇರಿ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಹೈಕೋರ್ಟ್ ಆದೇಶದ ಮೇರೆಗೆ ಮೇ 2ರಂದು ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟ ತಲುಪಿದ್ದು, ಚುನಾವಣಾ ಆಯೋಗ ಇಂದು ಅಧಿಕೃತ ಫಲಿತಾಂಶವನ್ನು ಪ್ರಕಟಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಡಿ.ಎನ್. ಜೀವರಾಜ್ ಅವರು ಮರು ಎಣಿಕೆಯಲ್ಲಿ ಮುನ್ನಡೆ ಸಾಧಿಸಿ, ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರನ್ನು ಹಿಂದಿಕ್ಕಿ ಗೆಲುವು ದಾಖಲಿಸಿದ್ದಾರೆ.

ಮೇ 2ರಂದು ನಡೆದ ಮರು ಎಣಿಕೆಯಲ್ಲಿ ಅಂಚೆ ಮತಗಳ ಪರಿಶೀಲನೆ ಪೂರ್ಣಗೊಂಡಿದ್ದರೂ ಫಲಿತಾಂಶವನ್ನು ತಕ್ಷಣ ಘೋಷಿಸಲಾಗಿರಲಿಲ್ಲ. ಈ ಬೆಳವಣಿಗೆ ಕ್ಷೇತ್ರದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.

ಮರು ಎಣಿಕೆಯು ರೋಚಕ ಹಣಾಹಣಿಗೆ ಸಾಕ್ಷಿಯಾಗಿದ್ದು, ಕೊನೆ ಹಂತದಲ್ಲಿ ಜೀವರಾಜ್ ಮುನ್ನಡೆ ಕಾಯ್ದುಕೊಂಡಿದ್ದರು.

ಈ ಫಲಿತಾಂಶ ಶೃಂಗೇರಿ ಕ್ಷೇತ್ರದ ರಾಜಕೀಯದಲ್ಲಿ ಮಹತ್ವದ ತಿರುವು ತಂದಿದ್ದು, ಬೆಂಬಲಿಗರಲ್ಲಿ ಸಂಭ್ರಮ ಮನೆಮಾಡಿದೆ.

D.N. Jeevaraj elected as new MLA of Sringeri constituency

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...