Home ಪಹಣಿ ತಿದ್ದುಪಡಿ ಸಮಸ್ಯೆ ನಿವಾರಣೆಗೆ ರೈತರ ಪರದಾಟ
Home

ಪಹಣಿ ತಿದ್ದುಪಡಿ ಸಮಸ್ಯೆ ನಿವಾರಣೆಗೆ ರೈತರ ಪರದಾಟ

Share
Share

ಚಿಕ್ಕಮಗಳೂರು: ಕಾಫಿನಾಡಿನ ರೈತರಿಗೆ ಒಂದೆಡೆ ಯೂರಿಯಾ ಗೊಬ್ಬರದ ಸಮಸ್ಯೆಯಾದರೆ ಮತ್ತೊಂದೆಡೆ ಪಹಣಿ ತಿದ್ದುಪಡಿ ಸಮಸ್ಯೆಯಿಂದಾಗಿ ಈ ಬಾರಿ ಕೃಷಿ ಚಟುವಟಿಕೆಗಳನ್ನು ನಡೆಸಲು ಹರಸಾಹಸ ಪಡುವಂತಾಗಿದೆ.

ತಲೆಮಾರುಗಳಿಂದ ಸಾಗುವಳಿ ಮಾಡುತ್ತಿದ್ದ ಜಮೀನಿನ ಪಹಣಿಯಲ್ಲಿ ರೈತರ ಹೆಸರನ್ನು ತೆಗೆದು ‘ಸರ್ಕಾರಿ’ ಎಂದು ನಮೂದಿಸಿರುವುದು ರೈತರ ಜೀವನೋಪಾಯಕ್ಕೆ ದೊಡ್ಡ ಹೊಡೆತ ನೀಡಿದೆ.

ಪ್ರಮುಖವಾಗಿ, ಮೂಡಿಗೆರೆ ಹಾಗೂ ಕಡೂರು ತಾಲೂಕಿನ ಸಾವಿರಾರು ರೈತರ ಪಹಣಿಯಲ್ಲಿ ಫೂಟ್ ಐಡಿ (Fruit ID) ಇಲ್ಲದ ಕಾರಣ ರೈತರಿಗೆ ಆನ್‌ಲೈನ್ ಮೂಲಕ ರಸಗೊಬ್ಬರ ಪಡೆಯಲು ಸಾಧ್ಯವಾಗುತ್ತಿಲ್ಲ.
ಮಳೆಗಾಲ ಆರಂಭವಾಗಿರುವ ಈ ಸಂದರ್ಭದಲ್ಲಿ ಭತ್ತ, ಕಾಫಿ, ಜೋಳ ಹಾಗೂ ರಾಗಿ ಬೆಳೆಗಳಿಗೆ ಗೊಬ್ಬರ ಹಾಕುವುದು ಅತ್ಯಗತ್ಯವಾಗಿದೆ. ಆದರೆ ಅಧಿಕಾರಿಗಳ ಈ ಕ್ರಮದಿಂದಾಗಿ ಖಾಸಗಿ ಅಥವಾ ಸಹಕಾರಿ ಸಂಘಗಳ ಗೊಬ್ಬರದ ಅಂಗಡಿಗಳಲ್ಲಿ ರೈತರಿಗೆ ಗೊಬ್ಬರ ನೀಡಲಾಗುತ್ತಿಲ್ಲ.

ತಂಬ್ ಇಂಪ್ರೆಶನ್ ನೀಡಿದರೂ ಪಹಣಿಯಲ್ಲಿ ಹೆಸರಿಲ್ಲದ ಕಾರಣ ತಾಂತ್ರಿಕವಾಗಿ ಗೊಬ್ಬರ ವಿತರಣೆ ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದರಿಂದಾಗಿ ಬೆಳೆಗಳಿಗೆ ಸರಿಯಾದ ಸಮಯಕ್ಕೆ ಪೋಷಕಾಂಶ ನೀಡಲು ಸಾಧ್ಯವಾಗದೆ ಇಳುವರಿ ಕುಂಠಿತವಾಗುವ ಭೀತಿ ಎದುರಾಗಿದೆ.

ನ್ಯಾಯಾಲಯವು ಈ ವಿಚಾರದಲ್ಲಿ ಸ್ಪಷ್ಟವಾಗಿ ತಡೆಯಾಜ್ಞೆ ನೀಡಿದ್ದರೂ ಸಹ, ಜಿಲ್ಲಾಡಳಿತವು ಪಹಣಿಯಲ್ಲಿ ಹಳೆಯ ಸ್ಥಿತಿಯನ್ನು ಮರುಸ್ಥಾಪಿಸದ ಕಾರಣ ರೈತರು ಕೃಷಿ ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ.
ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಿ ರೈತರಿಗೆ ಸುಲಭವಾಗಿ ರಸಗೊಬ್ಬರ ಹಾಗೂ ಇತರ ಕೃಷಿ ಸೌಲಭ್ಯಗಳು ಸಿಗುವಂತೆ ಮಾಡಬೇಕು ಎಂದು ರೈತ ಹಿತರಕ್ಷಣಾ ವೇದಿಕೆಯು ಒತ್ತಾಯಿಸಿದೆ.

Farmers’ scramble to resolve land title amendment issue

Share

Leave a comment

Leave a Reply

Your email address will not be published. Required fields are marked *

Don't Miss

ಆ.21 ರಿಂದ ಸಮಾಧಾನ್ ಸಮಾರೋಹ್ ವಿಶೇಷ ಲೋಕ ಅದಾಲತ್

ಚಿಕ್ಕಮಗಳೂರು: ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ‘ಸಮಾಧಾನ್ ಸಮಾರೋಹ್’ ಶೀರ್ಷಿಕೆಯಡಿ ವಿಶೇಷ ಲೋಕ ಅದಾಲತ್ ಅನ್ನು ಆಗಸ್ಟ್ ೨೧, ೨೨ ಹಾಗೂ ೨೩ ರಂದು ಆಯೋಜಿಸಲಾಗಿದೆ ಎಂದು...

ಮುತ್ತಿನಕೊಪ್ಪ ಗ್ರಾಮದ ಶಂಕರಪುರದಲ್ಲಿ ಕಳ್ಳತನ

ಎನ್.ಆರ್.ಪುರ : ಮುತ್ತಿನಕೊಪ್ಪ ಗ್ರಾಮದ ಶಂಕರಪುರದಲ್ಲಿ ಕಳ್ಳತನ ನಡೆದಿದೆ. ಸುಗಂಧಿ ಎಂಬುವವರ ಮಗಳು ರಕ್ಷಾ ಅವರು ಮದುವೆ ಕಾರ್ಯಕ್ರಮಕ್ಕಾಗಿ ಬ್ಯಾಂಕ್‌ನಿಂದ ಬಿಡಿಸಿಕೊಂಡು ಬಂದಿದ್ದ ಒಡವೆಗಳನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದ್ದು ಮಂಗಳವಾರ...

Related Articles

ನಾಗರಿಕ ವೇದಿಕೆಯಿಂದ ಪ್ರತಿಭಟನೆ ಖಂಡನೆ

ತರೀಕೆರೆ: ಸಂವಿಧಾನ ಸಾರ್ವಜನಿಕರು ಆರೋಗ್ಯಕರವಾಗಿ ಪ್ರತಿಭಟಿಸಲು ಅವಕಾಶ ಕಲ್ಪಿಸಿದೆ. ಆದರೆ ಅದನ್ನು ದುರ್ಬಳಕೆ ಮಾಡಿಕೊಂಡು ಕಳೆದ...

ಅಂಬೇಡ್ಕರ್ ಜಯಂತಿಗೆ ಅಡ್ಡಿ : ಆರೋಪಿಗಳ ಬಂಧನಕ್ಕೆ ಪ್ರತಿಭಟನೆ

ಚಿಕ್ಕಮಗಳೂರು:  ಅಂಬೇಡ್ಕರ್ ಜಯಂತಿಗೆ ಅಡ್ಡಿಪಡಿಸಿರುವ ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ...

ಸಂವಿಧಾನದ ಆಶಯ ಕಗ್ಗೊಲೆ ಮಾಡುತ್ತಿರುವ ಸಿಎಂ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ವೋಟು ಡಕಾಯಿತಿ ಆಗಿದೆ ಎಂಬ ಪದ ಬಳಕೆ ಮಾಡುವ ಮೂಲಕ...

ಕ್ಷುಲ್ಲಕ ಕಾರಣಕ್ಕೆ ಜಗಳ – ಎರಡು ಕುಟುಂಬಗಳ ನಡುವೆ ಮಾರಾಮಾರಿ

ಕಡೂರು : ಮಕ್ಕಳ ಆಟದ ವಿಚಾರಕ್ಕೆ ಶುರುವಾದ ಸಣ್ಣ ವಾಗ್ವಾದವೊಂದು ಮಚ್ಚು, ಕಲ್ಲು ತೂರಾಟದಂತಹ ಭೀಕರ...