Home namma chikmagalur chikamagalur ನಾಗರಿಕ ವೇದಿಕೆಯಿಂದ ಪ್ರತಿಭಟನೆ ಖಂಡನೆ
chikamagalurHomeLatest Newsnamma chikmagalur

ನಾಗರಿಕ ವೇದಿಕೆಯಿಂದ ಪ್ರತಿಭಟನೆ ಖಂಡನೆ

Share
Share

ತರೀಕೆರೆ: ಸಂವಿಧಾನ ಸಾರ್ವಜನಿಕರು ಆರೋಗ್ಯಕರವಾಗಿ ಪ್ರತಿಭಟಿಸಲು ಅವಕಾಶ ಕಲ್ಪಿಸಿದೆ. ಆದರೆ ಅದನ್ನು ದುರ್ಬಳಕೆ ಮಾಡಿಕೊಂಡು ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಯವರು ನಾಗರೀಕ ವೇದಿಕೆ ಅಡಿಯಲ್ಲಿ ಶಾಸಕ ಜಿ.ಎಚ್. ಶ್ರೀನಿವಾಸ್ ವಿರುದ್ಧ ಪ್ರತಿಭಟಿಸಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಿದ್ದು, ಇದನ್ನು ಕಾಂಗ್ರೇಸ್ ಖಂಡಿಸುತ್ತದೆ ಎಂದು ತರೀಕೆರೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಚ್.ಯು. ಫಾರೂಕ್ ಹೇಳಿದರು

ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಮಾಜಿ ಶಾಸಕ ಡಿ.ಎಸ್. ಸುರೇಶ್ ರವರು ಹತ್ತು ವ? ಶಾಸಕರಾಗಿದ್ದರು. ಜಿ.ಎಚ್. ಶ್ರೀನಿವಾಸ್ ಶಾಸಕರಾಗಿ ೮ ವ?ವಾಗಿದೆ. ಜನರಿಗೆ ದಿಕ್ಕು ತಪ್ಪಿಸುವ ಕೆಲಸ ಆಗಬಾರದು. ಜನರಿಗೆ ಸತ್ಯಾಸತ್ಯತೆ ತಿಳಿಯಲಿ. ಆದರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಯಾರ ಕಾಲದಲ್ಲಿ ಹೆಚ್ಚು ಆಗಿವೆ ಎಂಬುದಕ್ಕೆ ಬಹಿರಂಗ ಚರ್ಚೆಗೆ ಬರಲಿ. ಅವರೇ ಸ್ಥಳ ನಿಗಧಿ ಮಾಡಲಿ ಎಂದು ಸವಾಲೆಸೆದರು.

ಪಟ್ಟಣದ ಸೋಮೇಶ್ವರ ಬಡಾವಣೆಯಲ್ಲಿ ಸರ್ಕಾರದಿಂದ ರೂ. ೩.೯೭ ಕೋಟಿ ಅನುದಾನದಲ್ಲಿ ಮೌಲಾನ ಅಜಾದ್ ಮಾದರಿ ಶಾಲೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಅಶೋಕ್ ಎಂಬುವರು ಇದರ ಗುತ್ತಿಗೆದಾರ. ಕಾಮಗಾರಿ ಸ್ಥಳಕ್ಕೆ ಬಿಜೆಪಿ ಮುಖಂಡರೊಬ್ಬರು ಹೋಗಿ ಕಳಪೆ ಕಾಮಗಾರಿಯಾಗಿತ್ತಿದೆ ಎಂದು ಆರೋಪಿಸಿ ಕೆಲಸ ನಿಲ್ಲಿಸಲು ಗಲಾಟೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಗುತ್ತಿಗೆದಾರರು ಪೊಲೀಸ್ ಮೊರೆ ಹೋಗಿರಬಹುದು. ಆಗ ಪೋಲೀಸ್ ಸಿಬ್ಬಂಧಿ ಬಂದಿರಬಹುದು. ಆದರೆ ಈ ವಿಚಾರದಲ್ಲಿ ಶಾಸಕರಿಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದರು.

ಕಾಂಗ್ರೇಸ್ ನಗರಾಧ್ಯಕ್ಷ ಪ್ರಕಾಶ್ ವರ್ಮಾ ಮಾತನಾಡಿ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಎಲ್. ರಮೇಶ್ ರವರು ಶಾಸಕರು ಮತ್ತು ಅವರ ಪತ್ನಿ ಹಾಗೂ ಮಗಳ ಬಗ್ಗೆ ಬಹಿರಂಗವಾಗಿ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಇನ್ನೊಮ್ಮೆ ಈ ರೀತಿ ಮರುಕಳಿಸಿದರೆ ಪರಿಸ್ಥಿತಿ ಸರಿ ಇರುವುದಿಲ್ಲ ಎಂದು ಹೇಳಿದರು.

ಈ ಸಂದರಭದಲ್ಲಿ ಪುರಸಭಾಧ್ಯಕ್ಷ ವಸಂತಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠನ ಸಮಿತಿ ತಾಲ್ಲೂಕು ಅಧ್ಯಕ್ಷೆ ಹೇಮಲತಾ ರೇವಣ್ಣ, ಮುಖಂಡರಾದ ಎಚ್.ಎನ್. ಮಂಜುನಾಥ್, ಪರ್ವೀನ್ ತಾಜ್, ಸಿರಾಜ್, ಗಿರೀಶ್, ಟಿ.ಆರ್. ಶ್ರೀಧರ್, ಟಿ.ಎನ್. ಜಗದೀಶ್, ಇ?ದ್, ಆದಿಲ್ ಪಾಶ, ಪರಶುರಾಮ್, ವೀರಮಣಿ ಮೊದಲಾದವರು ಭಾಗವಹಿಸಿದ್ದರು.

Protest condemned by civic forum

 

Share

Leave a comment

Leave a Reply

Your email address will not be published. Required fields are marked *

Don't Miss

ಮತ ಎಣಿಕೆ ವಿಳಂಬ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಚಿಕ್ಕಮಗಳುರು: ರಾಜ್ಯ ಸರ್ಕಾರ ತಮ್ಮ ಶಾಸಕನ ಸೋಲಿನ ಭಯದಲ್ಲಿ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಸ್ಥಗಿತ ಗೊಳಿಸಿರುವ ಅನುಮಾನವಿದೆ. ಇದೇ ಕಾರಣದಿಂದಲೇ 1,822 ಮತಗಳ ಎಣಿಕೆಗೆ 12 ತಾಸು ಆದರೂ ಮುಗಿದಿಲ್ಲ...

ಕಗ್ಗಂಟಾಗಿ ಉಳಿದ ಅಂಚೆ ಮತಗಳ ಎಣಿಕೆ ಕಾರ್ಯ

ಚಿಕ್ಕಮಗಳೂರು: ಹೈಕೋರ್ಟ್ ನಿರ್ದೇಶನದಂತೆ ಶನಿವಾರ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಕಾರ್ಯ ಪೂರ್ಣಗೊಳ್ಳದೆ. ತಡರಾತ್ರಿವರೆಗೂ ಕಗ್ಗಂಟಾಗಿ ಉಳಿದಿತ್ತು. 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ 201 ಮತಗಳಿಂದ ಜಯ...

Related Articles

ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನೆಡೆದಿರುವ ಚುನಾವಣಾ ಅಕ್ರಮ ದೇಶದ ಇತಿಹಾಸದಲ್ಲಿ ಹಾಗೂ ಭವಿಷ್ಯದಲ್ಲಿ ಹಿಂದೆಂದಿಗೂ...

ಹುಲಿ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾ ಟ್ರ್ಯಾಪ್‌ ಕಳವು

ಚಿಕ್ಕಮಗಳೂರು: ಮುತ್ತೋಡಿ ಅರಣ್ಯ ವಲಯದ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆಗೆ ಶಾಕ್ ನೀಡುವಂತಹ...

ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಆಣೆ-ಪ್ರಮಾಣ

ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ...

ಮೇಲ್ಮನವಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು...