Home namma chikmagalur chikamagalur ರಾಜೇಗೌಡರಿಗೆ ರಾಜಕೀಯ ಮೈಲೇಜ್ – ಜೀವರಾಜ್ ಗೆ ಕೊನೆ ಮೊಳೆ ?
chikamagalurHomeLatest Newsnamma chikmagalur

ರಾಜೇಗೌಡರಿಗೆ ರಾಜಕೀಯ ಮೈಲೇಜ್ – ಜೀವರಾಜ್ ಗೆ ಕೊನೆ ಮೊಳೆ ?

Share
Share

ಶೃಂಗೇರಿ: ಕಳೆದ ಹತ್ತು ದಿನಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ” ಶಾಸಕತ್ವ” ದ ಬಗ್ಗೆ ಎರಡು ಪಕ್ಷದವರಿಂದ ಪಟಾಕಿ,ಮೆರವಣಿಗೆ, ವಿಜಯೋತ್ಸವ ಸಾಲು ಸಾಲಾಗಿ ನಡೆಸಿ ರಾಜಕೀಯ ಜಿದ್ದಾ ಜಿದ್ದಿಗೆ ಈಗ ಸುಪ್ರೀಂ ಕೋರ್ಟ್ ಬ್ರೇಕ್ ಹಾಕುವ ಸಂಭವ ಹೆಚ್ಚಿದೆ.

2023 ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ರಾಜೇಗೌಡ 205 ಮತಗಳಿಂದ ಜಯಗಳಿಸಿ ಕಳೆದ ಮೂರು ವರ್ಷಗಳಿಂದ ರಾಜೇಗೌಡರು ಆಡಳಿತ ಪಕ್ಷದಲ್ಲಿ ಇದ್ದರು.205 ಮತಗಳಿಂದ ಜಯಗಳಿಸಿದ್ದನ್ನು ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಪ್ರಶ್ನೆ ಮಾಡಿ ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದರು.

ಕಳೆದ ಮೂರು ವರ್ಷಗಳಿಂದ ವಿಚಾರಣೆ ನಡೆಸಿ ಮರು ಮತ ಎಣಿಕೆ ಗೆ ಮೇ ಎರಡರಂದು ದಿನ ನಿಗದಿ ಮಾಡಿತ್ತು .ಅದರಲ್ಲಿ ಜೀವರಾಜ್ ಜಯಗಳಿಸಿ ರಾಜೇಗೌಡ ಪರಾಜಿತ ಎಂದು ಘೋಷಣೆ ಮಾಡಲಾಯಿತು.ನಂತರ ಗೆಲುವಿನ ದಾಖಲೆ ಪಡೆಯಲು ಜೀವರಾಜ್ ಹಗಲಿರುಳು ಓಡಾಟ ನಡೆಸಿದ ನಂತರ ವಿಧಾನ ಸಭಾ ಸದಸ್ಯ ಎಂದು ಪ್ರಮಾಣ ವಚನ ತೆಗೆದುಕೊಳ್ಳಲು ಮತ್ತೆ ಹೋರಾಟಮಾಡಿದ್ದರು.

ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಜಟಾಪಟಿ ನಡೆದಿತ್ತು. ರಾಜೇಗೌಡರು ಇದನ್ನೆಲ್ಲ ಪ್ರಶ್ನೆಸಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು.ಇಂದು ಸುಪ್ರೀಂ ಕೋರ್ಟ್ ರಾಜೇಗೌಡರು ಶಾಸಕರಾಗಿ ಮುಂದುವರೆಯಲು ತಾತ್ಕಾಲಿಕ ತಡೆ ನೀಡಿರುವುದು ರಾಜೇಗೌಡರಿಗೆ ರಾಜಕೀಯ ಶಕ್ತಿ ಇಮ್ಮಡಿ ಆಗಿದೆ ಎಂದು ರಾಜಕೀಯ ಮತ್ತು ಕಾನೂನು ತಜ್ಞರ ಅಭಿಪ್ರಾಯವಾಗಿದೆ.

ಜೀವರಾಜ್ ಗೆ ರಾಜಕೀಯ ಹಿನ್ನಡೆ ಆಗಿದೆ.ಒಟ್ಟಾರೆ ಶೃಂಗೇರಿ ಕ್ಷೇತ್ರದ ಮತ ತಿರುವು ಪ್ರಕರಣ ದಿನಕ್ಕೊಂದು ಬಣ್ಣ,ಕ್ಷಣಕ್ಕೊಂದು ಬಣ್ಣ ಬದಲಾಯಿಸಿ ಹಲವರ ಹೃದಯ ಬಡಿತಕ್ಕೆ ಕಾರಣವಾಗಿತ್ತು. ಇನ್ನೂ ಮುಂದೆ ಇಬ್ಬರು ಕೋರ್ಟ್ ನಲ್ಲಿ ಮುಂದುವರೆದರು ವಿಧಾನ ಸಭಾ ಅವಧಿ ಮುಗಿದಿರುತ್ತದೆ.

Political mileage for Rajegowda – the final nail in the coffin for Jeevaraj?

Share

Leave a comment

Leave a Reply

Your email address will not be published. Required fields are marked *

Don't Miss

ಕೋಟ್ಯಂತರ ರೂಪಾಯಿ ಮೌಲ್ಯದ ಬ್ಯಾಂಕ್ ಆಸ್ತಿ ಪತ್ರಗಳೊಂದಿಗೆ ಮಹಿಳೆ ನಾಪತ್ತೆ

ಕಡೂರು: ಕೋರ್ಟ್ ವಿಚಾರಣೆಗಾಗಿ ಚಿಕ್ಕಮಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆಯೊಬ್ಬರು ಮನೆಯಲ್ಲಿದ್ದ ನೂರಾರು ಗ್ರಾಂ ಚಿನ್ನಾಭರಣ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಬ್ಯಾಂಕ್ ಆಸ್ತಿ ಪತ್ರಗಳೊಂದಿಗೆ ನಿಗೂಢವಾಗಿ ನಾಪತ್ತೆಯಾಗಿರುವ ಆಘಾತಕಾರಿ...

ಮುದುಗುಂಡಿ ಗ್ರಾಮದಲ್ಲಿ ಹೆಣ್ಣು ಚಿರತೆ ಸೆರೆ

ತರೀಕೆರೆ: ತಾಲ್ಲೂಕಿನ ಮುದುಗುಂಡಿ ಗ್ರಾಮದಲ್ಲಿ ಸುಮಾರು 3 ವರ್ಷ ವಯಸ್ಸಿನ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಶನಿವಾರ ಸೆರೆಹಿಡಿದಿದೆ. ಮುದುಗುಂಡಿ ಗ್ರಾಮದಲ್ಲಿ ಬಳಕೆ ಮಾಡದ ಶೌಚಾಲಯದಲ್ಲಿದ್ದ ನಾಯಿಗಳನ್ನು ಹಿಡಿಯಲು ಶನಿವಾರ ಬೆಳಿಗ್ಗೆ...

Related Articles

ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ದಾಖಲಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ

ಕಡೂರು :  ಬೆಂಗಳೂರು ನಗರವನ್ನು ಜಾಗತಿಕ ಮಟ್ಟದಲ್ಲಿ ದಾಖಲಿಸಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು...

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ...

ಮುಂಜಾಗ್ರತಾ ಕ್ರಮವಾಗಿ ಪೋಲಿಯೊ ಲಸಿಕೆ ಹಾಕಿಸಿ

ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ...