Home ಇಂದಿನಿಂದ ಮದ್ಯದ ದರ ಶೇ.30 ಹೆಚ್ಚಳ
HomeLatest Newsnamma chikmagalurState News

ಇಂದಿನಿಂದ ಮದ್ಯದ ದರ ಶೇ.30 ಹೆಚ್ಚಳ

Share
Share

ಬೆಂಗಳೂರು: ಮದ್ಯದಲ್ಲಿನ ಆ‌ಲ್ಕೋಹಾಲ್ ಪ್ರಮಾಣ ಆಧರಿಸಿ ತೆರಿಗೆ ವಿಧಿಸುವ ಹೊಸ ಅಬಕಾರಿ ನೀತಿಯು ರಾಜ್ಯದಲ್ಲಿ ಅಧಿಕೃತವಾಗಿ ಜಾರಿಯಾಗಿದ್ದು, ಇದರೊಂದಿಗೆ ಜನಸಾಮಾನ್ಯರು ಬಳಸುವ ಅಗ್ಗದ ಮದ್ಯಗಳ ಬೆಲೆ ಶೇ.30ರಷ್ಟು ದುಬಾರಿಯಾಗಲಿದೆ. ಪ್ರೀಮಿಯಂ ಮತ್ತು ಐಷಾರಾಮಿ ವಿದೇಶಿ ಬ್ರಾಂಡ್ ಮದ್ಯಗಳ ದರ ಗಣನೀಯವಾಗಿ ಇಳಿಕೆಯಾಗಲಿದೆ.

ರಾಜ್ಯದಲ್ಲಿ ಈವರೆಗೆ ಅಸ್ತಿತ್ವದಲ್ಲಿದ್ದ ದಶಕಗಳಷ್ಟು ಹಳೆಯದಾದ ‘ಬಲ್ಕ್ ಲೀಟರ್’ ಆಧಾರಿತ ಸ್ಟ್ರಾಬ್ ವಾರು ತೆರಿಗೆ ಪದ್ಧತಿಗೆ ಇತಿಶ್ರೀ ಹಾಡಿರುವ ಸರಕಾರ, ದೇಶದಲ್ಲೇ ಮೊದಲ ಬಾರಿಗೆ ಆಲೋಹಾಲ್ ಇನ್ ಬಿವರೇಜ್ (ಎಐಬಿ) ಅಬಕಾರಿ ನೀತಿಯನ್ನು ಸೋಮವಾರದಿಂದ (ಮೇ 11) ಅಧಿಕೃತವಾಗಿ ಜಾರಿ ಮಾಡಿದೆ. ಹೊಸ ಅಬಕಾರಿ ನೀತಿಯಿಂದ ಆದಾಯ ವೃದ್ಧಿಯಾಗಲಿದೆ ಮತ್ತು ಮದ್ಯವ್ಯಸನಿಗಳ ಸಂಖ್ಯೆ ತಗ್ಗಲಿದೆ ಎಂದು ನಿರೀಕ್ಷಿಸಲಾಗಿದೆ.

ಹೊಸ ನೀತಿಯಲ್ಲಿ ಅಬಕಾರಿ ಸ್ಟ್ರಾಬ್‌ಗಳ ಸಂಖ್ಯೆಯನ್ನು 16ರಿಂದ 8ಕ್ಕೆ ಇಳಿಸಲಾಗಿದೆ. ಈ ಸರಳೀಕರಣವು ತೆರಿಗೆ ವ್ಯವಸ್ಥೆಯನ್ನು ಸುಲಭಗೊಳಿಸಿದ್ದರೂ ಇದರ ನೇರ ಹೊಡೆತ ಅಗ್ಗದ ಮದ್ಯ ಖರೀದಿಸುವ ಗ್ರಾಹಕರ ಮೇಲೆ ಬೀಳಲಿದೆ. ಸಾಮಾನ್ಯ ಜನರು ಹೆಚ್ಚಾಗಿ ಬಳಸುವ ವಿಸ್ಕಿ, ರಮ್, ಬ್ರಾಂಡಿ ಮತ್ತು ವೋಡ್ಕಾ ಬೆಲೆ ಭಾರಿ ಏರಿಕೆಯಾಗಲಿದೆ. ಮುಖ್ಯವಾಗಿ 180 ಮಿ.ಲೀ (ಕ್ವಾರ್ಟರ್) ಟೆಟ್ರಾ ಪ್ಯಾಕ್ ಮತ್ತು ಬಾಟಲಿಗಳ
ದರ ಹೆಚ್ಚಳದ ಸಾಧ್ಯಾಸಾಧ್ಯತೆ

ಮದ್ಯದ ಬೆಲೆ ಶೇ.20ರಿಂದ 30ರಷ್ಟು ಹೆಚ್ಚಳವಾಗಲಿದೆ. ಕಳೆದ ವರ್ಷ 63 ರೂ. ಇದ್ದ ಕ್ವಾರ್ಟರ್ ಮದ್ಯದ ಬೆಲೆ, ಇತ್ತೀಚಿನ ಏರಿಕೆಯ ನಂತರ 80 ರೂ.ಗೆ ತಲುಪಿತ್ತು. ಈಗ ಹೊಸ ನೀತಿಯಿಂದ ಇದು 105 ರೂ.ಗೆ ಏರಿಕೆಯಾಗುವ ಸಾಧ್ಯತೆಯಿದೆ.  ಕರ್ನಾಟಕ ಬ್ರಿವರ್ಸ್ ಆ್ಯಂಡ್ ಡಿಸ್ಟಿಲ್ಲರ್ಸ್ ಅಸೋಸಿಯೇಷನ್ (ಕೆಬಿಡಿಎ) ಪ್ರಕಾರ, ಅಗ್ಗದ ದರವಿದ್ದ ಮೊದಲ ಐದು ಸ್ಟ್ರಾಬ್‌ಗಳ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಶೇ.20ರಿಂದ 30ರಷ್ಟು ಹೆಚ್ಚಿಸಲಾಗಿದೆ. ರಾಜ್ಯದ ಒಟ್ಟಾರೆ ಅಬಕಾರಿ ಆದಾಯದಲ್ಲಿ ಮೊದಲ ಐದು ಫ್ಲ್ಯಾಬ್‌ನ ಮದ್ಯಗಳ ಕೊಡುಗೆ ಶೇ.70ರಿಂದ 75ರಷ್ಟಿದೆ. ಜನಸಾಮಾನ್ಯರ ಮೆಚ್ಚಿನ ಆಯ್ಕೆಯ ಅಗ್ಗದ ಮದ್ಯದ ಮೇಲೆಯೇ ಹೆಚ್ಚಿನ ತೆರಿಗೆ ವಿಧಿ ಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಬಳಸುವ ಅಥವಾ ವಿದೇಶಿ ಮೂಲದ ಪ್ರೀಮಿಯಂ ಬ್ರಾಂಡ್‌ಗಳಾದ ಡಿಯಾಜಿಯೊ, ಪೆರ್ನಾಡ್ ರಿಕಾರ್ಡ್ ಮತ್ತು ಯುನೈಟೆಡ್ ಸ್ಪಿರಿಟ್ಸ್‌ನಂತಹ ಕಂಪನಿಗಳ ಮದ್ಯದ ಬೆಲೆಯು ಶೇ.16ರಿಂದ 20ರಷ್ಟು ಇಳಿಕೆಯಾಗುವ ಅಂದಾಜಿದೆ. 6ರಿಂದ 8ನೇ ಫ್ಲ್ಯಾಬ್‌ನಲ್ಲಿ ಬರುವ ಈ ಮದ್ಯಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.10ರಿಂದ 15ರಷ್ಟು ಕಡಿಮೆ ಮಾಡಲಾಗಿದೆ. ಇದರಿಂದ ಬಹುರಾಷ್ಟ್ರೀಯ ಕಂಪನಿಗಳಿಗೆ ದೊಡ್ಡ ಮಟ್ಟದ ಲಾಭವಾಗಲಿದೆ ಎಂಬ ಆಕ್ಷೇಪಣೆ ಕೇಳಿಬಂದಿದೆ.

ಅಬಕಾರಿ ನೀತಿಯು ಸ್ಥಳೀಯ ಮದ್ಯ ತಯಾರಿಕಾ ಘಟಕಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ದೊಡ್ಡ ಪ್ರಮಾಣದಲ್ಲಿ ಮದ್ಯ ಉತ್ಪಾದಿಸುವ ಬಹುರಾಷ್ಟ್ರೀಯ ಕಂಪನಿಗಳು ಬೆಲೆ ಏರಿಳಿತವನ್ನು ಸರಿದೂಗಿಸಿಕೊಳ್ಳಬಲ್ಲವು. ಆದರೆ, ಬಜೆಟ್ ಅಥವಾ ಅಗ್ಗದ ಮದ್ಯದ ಉತ್ಪಾದನೆಯನ್ನೇ ನೆಚ್ಚಿಕೊಂಡಿರುವ ಸ್ಥಳೀಯ ಸಣ್ಣ ಘಟಕಗಳ ವ್ಯವಹಾರ ಕುಸಿದು ಮುಚ್ಚುವ ಹಂತಕ್ಕೆ ತಲುಪಬಹುದು ಎಂದು ಕೆಬಿಡಿಎ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

Liquor prices to increase by 30% from today

Share

Leave a comment

Leave a Reply

Your email address will not be published. Required fields are marked *

Don't Miss

ಬಾಲ್ಯ ವಿವಾಹ ನಡೆದರೆ ಪೋಕ್ಸೋ ಪ್ರಕರಣ ದಾಖಲಿಸಲು ಸೂಚನೆ

ಚಿಕ್ಕಮಗಳೂರು: ಬಾಲ್ಯ ವಿವಾಹಕ್ಕೆ ನಿಷೇಧವಿದ್ದರೂ, ರಹಸ್ಯವಾಗಿ ಅಪ್ರಾಪ್ತರ ಮದುವೆ ನಡೆದರೆ ಪೋಕ್ಸೋ ಕಾಯಿದೆಯಡಿಯಲ್ಲೂ ಪ್ರಕರಣ ದಾಖಲಿಸುವಂತೆ ಚಿಕ್ಕಮಗಳೂರು ತಹಶೀಲ್ದಾರ್ ರೇಶ್ಮಾ ಸೂಚಿಸಿದ್ದಾರೆ. ಅವರು ಮಂಗಳವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು...

ಜೀವರಾಜ್ ವಿರುದ್ಧದ FIRಗೆ ಹೈಕೋರ್ಟ್ ತಡೆ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆ ದಾಖಲಾದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬಿಜೆಪಿ ಶಾಸಕ ಡಿ.ಎನ್. ಜೀವರಾಜ್...

Related Articles

ಹೃದಯಾಘಾತದಿಂದ ಶೃಂಗೇರಿಯ ಪಿ.ಸಿ. ಸತೀಶ್ ನಿಧನ

ಚಿಕ್ಕಮಗಳೂರು: ಶೃಂಗೇರಿ ಇಆರ್‌ಎಸ್‌ಎಸ್ (ERSS) ರೆಸ್ಪಾಂಡರ್ ಪಿ.ಸಿ. 612 ಸತೀಶ್ ಅವರು ಇಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹಾಜರಾಗಲು...

ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ನೂತನ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆ

ಚಿಕ್ಕಮಗಳೂರು : ನಗರದ ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆಗಾಗಿ ಭಾನುವಾರ...

ಜೀನವಸಂಧ್ಯಾದ ನವೀಕೃತ ಪಾಕಶಾಲೆ ಲೋಕಾರ್ಪಣೆ

ಚಿಕ್ಕಮಗಳೂರು: ಜೀನವಸಂಧ್ಯಾದಲ್ಲಿ ೩೫ಲಕ್ಷರೂ. ಅಂದಾಜುವೆಚ್ಚದ ನವೀಕೃತ ಪಾಕಶಾಲೆ ಮತ್ತು ಸಿಬ್ಬಂದಿ ವಸತಿಗೃಹವನ್ನು ರೋಟರಿಜಿಲ್ಲಾ ಮಾಜಿಗೌರ್‍ನರ್ ಎಂ.ಸಿ.ಶೇಖರ್...

ಮಲೆನಾಡು ಭಾಗದಲ್ಲಿ ವರುಣನ ಅಬ್ಬರ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವ ವರುಣನ ಅಬ್ಬರ ಜೋರಾಗಿದ್ದು ಜಿಲ್ಲೆಯ ಹಲವೆಡೆ ಧಾರಾಕಾರ...