Home namma chikmagalur chikamagalur ಮಲೆನಾಡು ಭಾಗದಲ್ಲಿ ವರುಣನ ಅಬ್ಬರ
chikamagalurHomeLatest Newsnamma chikmagalur

ಮಲೆನಾಡು ಭಾಗದಲ್ಲಿ ವರುಣನ ಅಬ್ಬರ

Share
Share

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವ ವರುಣನ ಅಬ್ಬರ ಜೋರಾಗಿದ್ದು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ನಿನ್ನೆಯೂ ಮಲೆನಾಡಿನ ಹಲವು ಪ್ರದೇಶಗಳಲ್ಲಿ ಆರ್ಭಟಿಸಿದ್ದ ಮಳೆರಾಯ, ಇಂದು ಕೂಡ ತನ್ನ ರೌದ್ರಾವತಾರವನ್ನು ಮುಂದುವರಿಸಿದ್ದಾನೆ. ಇದರಿಂದಾಗಿ ಮಲೆನಾಡಿನ ಜನಜೀವನ ಅಸ್ತವ್ಯಸ್ತಗೊಂಡಿದೆ.

ವಿಶೇಷವಾಗಿ ಮೂಡಿಗೆರೆ ತಾಲೂಕಿನ ಸುತ್ತಮುತ್ತಲಿನ ಭಾಗಗಳಲ್ಲಿ ಮಳೆ ಅಬ್ಬರಿಸಿದ್ದು, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಹಾಗೂ ಆಲ್ಲೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಭಾರೀ ಗಾಳಿ ಮತ್ತು ಗುಡುಗು ಸಹಿತ ಸುರಿದ ಈ ಮಳೆಯಿಂದಾಗಿ ವಾಹನ ಸವಾರರು ನಿಂತಲ್ಲೇ ನಿಲ್ಲಬೇಕಾದ ಅನಿವಾರ್ಯತೆ ಎದುರಾಯಿತು.

ಚಾರ್ಮಾಡಿ ಘಾಟ್ ನಲ್ಲಿ ಹೆಚ್ಚುತ್ತಿರುವದರಿಂದ ವಾಹನಗಳು ನಿಧಾನವಾಗಿ ಸಂಚರಿಸಿದ ದೃಶ್ಯಗಳು ಕಂಡುಬಂತು. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಾಫಿನಾಡಿನ ಮಲೆನಾಡು ಭಾಗದಲ್ಲಿ ಪ್ರಕೃತಿಯ ವಿಕೋಪಕ್ಕೆ ಜನಸಾಮಾನ್ಯರು ಆತಂಕಕ್ಕೀಡಾಗಿದ್ದಾರೆ.

ಮೂಡಿಗೆರೆ ತಾಲೂಕಿನ ಗಬ್ಬಲ್ ಸಮೀಪದ ಕಲ್ಮನೆ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದು ದಿಢೀರ್ ಮಳೆಗೆ ತತ್ತರಿಸಿದೆ. ಸೋಮವಾರ ಮಧ್ಯಾಹ್ನ ಒಂದು ಗಂಟೆ ಕಾಲ ಬೀಸಿದ ಭಾರೀ ಗಾಳಿ ಮತ್ತು ಮಳೆಯ ಆರ್ಭಟಕ್ಕೆ ಮದುವೆ ಮನೆಯಲ್ಲಿದ್ದ ಶಾಮಿಯಾನ ಮತ್ತು ಕುರ್ಚಿಗಳು ಚೆಲ್ಲಾಪಿಲ್ಲಿಯಾಗಿ ಹಾರಿ ಹೋಗಿವೆ.

ಊಟಕ್ಕೆ ಹಾಕಲಾಗಿದ್ದ ಶಾಮಿಯಾನ ಮುರಿದು ಬಿದ್ದಿದ್ದರಿಂದ ಮದುವೆಗೆ ಆಗಮಿಸಿದ್ದ ಅತಿಥಿಗಳು ಮತ್ತು ಸಂಬಂಧಿಕರು ದಿಕ್ಕುತೋಚದೆ ಪರದಾಡುವಂತಾಯಿತು. ಮಳೆ ನಿಂತ ನಂತರ ಅಸ್ತವ್ಯಸ್ತಗೊಂಡಿದ್ದ ಮದುವೆ ಮನೆಯಲ್ಲಿ ಸಿಕ್ಕ ಸಿಕ್ಕ ಕಡೆಗಳಲ್ಲಿ ನಿಂತು ಊಟ ಮಾಡಿ ಅಲ್ಲಿಂದ ನಿರ್ಗಮಿಸಿದರು. ಮದುವೆಯ ಸಂಭ್ರಮಕ್ಕೆ ಮಳೆರಾಯ ಅಡ್ಡಿಪಡಿಸಿದ್ದರಿಂದ ವಧು-ವರರ ಕುಟುಂಬದವರು ಮತ್ತು ಅತಿಥಿಗಳು ಹೈರಾಣಾದ್ರು.

Varuna’s storm in the Malnad region

Share

Leave a comment

Leave a Reply

Your email address will not be published. Required fields are marked *

Don't Miss

ಬಾಲ್ಯ ವಿವಾಹ ನಡೆದರೆ ಪೋಕ್ಸೋ ಪ್ರಕರಣ ದಾಖಲಿಸಲು ಸೂಚನೆ

ಚಿಕ್ಕಮಗಳೂರು: ಬಾಲ್ಯ ವಿವಾಹಕ್ಕೆ ನಿಷೇಧವಿದ್ದರೂ, ರಹಸ್ಯವಾಗಿ ಅಪ್ರಾಪ್ತರ ಮದುವೆ ನಡೆದರೆ ಪೋಕ್ಸೋ ಕಾಯಿದೆಯಡಿಯಲ್ಲೂ ಪ್ರಕರಣ ದಾಖಲಿಸುವಂತೆ ಚಿಕ್ಕಮಗಳೂರು ತಹಶೀಲ್ದಾರ್ ರೇಶ್ಮಾ ಸೂಚಿಸಿದ್ದಾರೆ. ಅವರು ಮಂಗಳವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು...

ಜೀವರಾಜ್ ವಿರುದ್ಧದ FIRಗೆ ಹೈಕೋರ್ಟ್ ತಡೆ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆ ದಾಖಲಾದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬಿಜೆಪಿ ಶಾಸಕ ಡಿ.ಎನ್. ಜೀವರಾಜ್...

Related Articles

ಹೃದಯಾಘಾತದಿಂದ ಶೃಂಗೇರಿಯ ಪಿ.ಸಿ. ಸತೀಶ್ ನಿಧನ

ಚಿಕ್ಕಮಗಳೂರು: ಶೃಂಗೇರಿ ಇಆರ್‌ಎಸ್‌ಎಸ್ (ERSS) ರೆಸ್ಪಾಂಡರ್ ಪಿ.ಸಿ. 612 ಸತೀಶ್ ಅವರು ಇಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹಾಜರಾಗಲು...

ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ನೂತನ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆ

ಚಿಕ್ಕಮಗಳೂರು : ನಗರದ ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆಗಾಗಿ ಭಾನುವಾರ...

ಜೀನವಸಂಧ್ಯಾದ ನವೀಕೃತ ಪಾಕಶಾಲೆ ಲೋಕಾರ್ಪಣೆ

ಚಿಕ್ಕಮಗಳೂರು: ಜೀನವಸಂಧ್ಯಾದಲ್ಲಿ ೩೫ಲಕ್ಷರೂ. ಅಂದಾಜುವೆಚ್ಚದ ನವೀಕೃತ ಪಾಕಶಾಲೆ ಮತ್ತು ಸಿಬ್ಬಂದಿ ವಸತಿಗೃಹವನ್ನು ರೋಟರಿಜಿಲ್ಲಾ ಮಾಜಿಗೌರ್‍ನರ್ ಎಂ.ಸಿ.ಶೇಖರ್...

ಮೇ. 16ಕ್ಕೆ ಮಕ್ಕಳಿಗೆ ಉಚಿತ ಹೃದ್ರೋಗ ತಪಾಸಣಾ ಶಿಬಿರ

ಚಿಕ್ಕಮಗಳೂರು- ಸಮಾಜಮುಖಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಮಕ್ಕಳ ಆರೋಗ್ಯವೇ ದೇಶದ ಭವಿಷ್ಯ ಎಂಬ ಗುರಿಯೊಂದಿಗೆ ಮಕ್ಕಳಿಗೆ...