Home namma chikmagalur chikamagalur ಶಾಸಕ ಎಚ್.ಡಿ.ತಮ್ಮಯ್ಯರಿಂದ ಸೈಕಲ್ ತುಳಿ ಸಮಸ್ಯೆ ತಿಳಿ ಕಾರ್ಯಕ್ರಮ
chikamagalurHomeLatest Newsnamma chikmagalur

ಶಾಸಕ ಎಚ್.ಡಿ.ತಮ್ಮಯ್ಯರಿಂದ ಸೈಕಲ್ ತುಳಿ ಸಮಸ್ಯೆ ತಿಳಿ ಕಾರ್ಯಕ್ರಮ

Share
Share

ಚಿಕ್ಕಮಗಳೂರು:  ನಗರದ ವಿವಿಧೆಡೆ ಶಾಸಕ ಎಚ್.ಡಿ.ತಮ್ಮಯ್ಯ ಅವರು ಅಧಿಕಾರಿಗಳೊಂದಿಗೆ ಹಾಗೂ ಸ್ಥಳೀಯ ನಗರಸಭಾ ಸದಸ್ಯರೊಂದಿಗೆ ಶುಕ್ರವಾರ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.

ಸೈಕಲ್ ತುಳಿ ಸಮಸ್ಯೆ ತಿಳಿ ಕಾರ್ಯಕ್ರಮ ಈ ಹಿಂದೆ ಇಲ್ಲಿನ ಮಧುವನ ಲೇಔಟ್ ನಿಂದ ಪ್ರಾರಂಭಗೊಂಡಿತ್ತು. ಆಗ ಸ್ಥಳೀಯ ನಿವಾಸಿಗರು ಮೂಲಭೂತ ಸೌಲಭ್ಯಗಳ ಬೇಡಿಕೆಯನ್ನು ಇಟ್ಟಿದ್ದರು. ಅವುಗಳಲ್ಲಿ ಹಲವು ಕೆಲಸಗಳು ಕಾರ್ಯರೂಪಕ್ಕೆ ಬಂದಿದ್ದು ನೂತನವಾಗಿ ಡಾಂಬರೀಕರಣವಾಗಿರುವ ರಸ್ತೆಯನ್ನು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಉದ್ಘಾಟಿಸಿದರು.

ಮಧುವನ ಲೇಔಟ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಶಾಸಕರು ಇದೇ ಸಂದರ್ಭದಲ್ಲಿ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಬಳಿಕ ಶಾಸಕರು ಸೈಕಲ್‌ನಲ್ಲಿಯೇ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಕಾಮಗಾರಿಯ ವೀಕ್ಷಣೆಗೆ ತೆರಳಿದರು.

ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿದ ಅವರು, ನಿಧಾನಗತಿಯಲ್ಲಿ ಸಾಗುತ್ತಿರುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿ ಮುಗಿಸಬೇಕು. ಈ ಕಟ್ಟಡದ ಮೊದಲನೇ ಅಂತಸ್ತಿನಲ್ಲಿ ಕಮರ್ಷಿಯಲ್ ಮಳಿಗೆಗಳನ್ನು ನಿರ್ಮಾಣ ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಕಾಮಗಾರಿಯನ್ನು ೨೦೨೭ರ ಮಾರ್ಚ್ ಅಂತ್ಯದೊಳಗೆ ಮುಗಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು. ಈ ಕಟ್ಟಡದಲ್ಲಿ ಹೈಟೆಕ್ ಶೌಚಾಲಯ, ವಿಶ್ರಾಂತಿ ಕೊಠಡಿ, ತಾಯಿ ಮಗು ಆರೈಕೆ ಕೊಠಡಿ ತೆರೆಯಲು ಆದ್ಯತೆ ನೀಡಬೇಕೆಂದು ಶಾಸಕರು ಹೇಳಿದರು.

ಬಳಿಕ ಶಾಸಕರು ಮೂಡಿಗೆರೆ ರಸ್ತೆಯಲ್ಲಿ ಸೈಕಲ್ ನಲ್ಲಿಯೇ ತೆರಳುವ ವೇಳೆಯಲ್ಲಿ ಶ್ರೀ ಬೋಳರಾಮೇಶ್ವರ ವೃತ್ತದ ಬಳಿ ಶ್ರೀ ರಾಮೇಶ್ವರ ಬಡಾವಣೆಯ ನಿವಾಸಿಗರು ತಮ್ಮ ಬಡಾವಣೆಯ ಅಹವಾಲುಗಳನ್ನು ನೀಡಿದರು. ಆಗ ಶಾಸಕರು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡ ವೀಕ್ಷಿಸಿ ನಿಯಮದ ಪ್ರಕಾರ ಕಟ್ಟಡ ನಿರ್ಮಾಣ ಆಗಬೇಕು. ನಿಯಮ ಮೀರಿದರೆ ಕಾಮಗಾರಿ ತಡೆಯಬೇಕೆಂದು ನಗರಸಭಾ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಇದೇ ಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮತ್ತೊಂದು ಕಟ್ಟಡದ ಮಾಲೀಕರು ರಸ್ತೆ ಜಾಗ ಒತ್ತುವರಿ ಮಾಡಿರುವುದನ್ನು ಗಮನಿಸಿದ ಶಾಸಕರು ಕೂಡಲೇ ತೆರವುಗೊಳಿಸಬೇಕೆಂದು ಸೂಚನೆ ನೀಡಿದರು. ಶಾಸಕರು ತೇಗೂರಿಗೆ ತೆರಳಿ ವಾಪಸ್ ಬರುವಾಗ ನಗರಸಭೆ ಸಿಬ್ಬಂಧಿಯವರು ರಸ್ತೆ ಒತ್ತುವರಿ ಜಾಗ ತೆರವುಗೊಳಿಸಿದ್ದರು.

ನಂತರ ಶಾಸಕರು ಮೂಡಿಗೆರೆ ರಸ್ತೆಯಲ್ಲಿ ಸೈಕಲ್ ನಲ್ಲೇ ಮೆಡಿಕಲ್ ಕಾಲೇಜ್ ರಸ್ತೆ ವೀಕ್ಷಣೆಗೆ ತೆರಳುವಾಗ ರಾಂಪುರ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಯನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಶಾಸಕರು ಸೈಕಲ್ ತುಳಿ ಸಮಸ್ಯೆ ತಿಳಿ ಕಾರ್ಯಕ್ರಮವನ್ನು ಮುಂದುವರೆಸಿದರು.

MLA H.D. Thammaiah’s program to understand the problem of bicycle accidents

Share

Leave a comment

Leave a Reply

Your email address will not be published. Required fields are marked *

Don't Miss

ಕಳವಾದ ₹11 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶ

ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೆಣಸೆ ಗ್ರಾಮದ ಕನ್ಯಾಕುಮಾರಿ ದೇವಸ್ಥಾನ ಹಾಗೂ ಯಡದಳ್ಳಿಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಗಳಲ್ಲಿ ಒಡವೆ ಹಾಗೂ ಹಣ ಕಳ್ಳತನ ಮಾಡಿದ್ದ ಇಬ್ಬರು ಅಂತರ್ ಜಿಲ್ಲಾ ಆರೋಪಿಗಳನ್ನು...

ಐಡಿಎಸ್‌ಜಿ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

ಚಿಕ್ಕಮಗಳೂರು: ಶಿಕ್ಷಣ, ಜೀವನದ ಒಂದು ಭಾಗ. ಇದರ ಬಗ್ಗೆ ವಿದ್ಯಾರ್ಥಿಗಳು ಅರಿಯಬೇಕು, ಪಠ್ಯದ ಜತೆಗೆ, ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೋಳ್ಳುವುದರಿಂದ ಜ್ಞಾನಾರ್ಜನೆಗೆ ಸಹಕಾರಿ ಆಗಲಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಅವರು ಹೇಳಿದರು. ನಗರದ...

Related Articles

ಕೇಂದ್ರದ ಬಿಜೆಪಿ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯ್ತಿಗಳಿಗೆ ೧೫ನೇ ಹಣಕಾಸು ಯೋಜನೆ ಅನುದಾನ ಮತ್ತು...

ಗ್ರಾಮದ ರಸ್ತೆ ಬಿಡಿಸಿಕೊಡಲು ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಚಿಕ್ಕಮಗಳೂರು:  ಚಿಕ್ಕಹಳ್ಳ ಗ್ರಾಮದ ರಸ್ತೆಯನ್ನು ಪ್ರಭಾವಿ ವ್ಯಕ್ತಿಗಳು ಮುಟ್ಟುಗೋಲು ಹಾಕಿ ಕೊಂಡಿರುವ ನಡೆಯನ್ನು ಖಂಡಿಸಿ ಶುಕ್ರವಾರ...

ಶಿಕ್ಷಕರು-ಉಪನ್ಯಾಸಕರ ನೇಮಕ ಮಾಡಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು

ಚಿಕ್ಕಮಗಳೂರು- ಸಂವಿಧಾನ ಬದ್ಧ ಹಕ್ಕುಗಳಾದ ಶಿಕ್ಷಣ ಮತ್ತು ಆರೋಗ್ಯಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿ ಸರ್ಕಾರಿ...

ಬೈಕ್‌ಗೆ ಟಿಪ್ಪರ್ ಡಿಕ್ಕಿ ಬೈಕ್‌ ಸವಾರ ಸ್ಥಳದಲ್ಲೇ ಸಾವು

ಮೂಡಿಗೆರೆ: ಅತಿ ವೇಗದಲ್ಲಿ ಬಂದ ಟಿಪ್ಪರ್ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ...