Home namma chikmagalur chikamagalur ಅರಣ್ಯದಲ್ಲಿ ಅಪರಿಚಿತ ವೃದ್ಧನ ಶವ ಪತ್ತೆ 
chikamagalurCrime NewsHomeLatest Newsnamma chikmagalur

ಅರಣ್ಯದಲ್ಲಿ ಅಪರಿಚಿತ ವೃದ್ಧನ ಶವ ಪತ್ತೆ 

Share
Share
ಕೊಟ್ಟಿಗೆಹಾರ : ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಅರಣ್ಯ ಪ್ರದೇಶದಲ್ಲಿ ಸುಮಾರು 65 ರಿಂದ 70 ವರ್ಷದೊಳಗಿನ ಅಪರಿಚಿತ ವೃದ್ಧನ ಶವ ಪತ್ತೆಯಾಗಿದೆ.
ಕಳೆದ ಮೂರು–ನಾಲ್ಕು ದಿನಗಳಿಂದ ರಸ್ತೆ ಬದಿಯ ಅಂಗಡಿಗಳ ಬಳಿ ಈ ವೃದ್ಧ ಅಲೆದಾಡುತ್ತಿದ್ದು, ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ. ಊರು ಯಾವುದು ಎಂದು ಕೇಳಿದಾಗ “ಮಂಡ್ಯ” ಎಂದು ಹೇಳುತ್ತಿದ್ದನೆಂದು ಅಂಗಡಿ ಯುವಕರು ಮಾಹಿತಿ ನೀಡಿದ್ದಾರೆ.
ಗ್ರಾಮ ಪಂಚಾಯಿತಿ ತ್ಯಾಜ್ಯ ವಿಲೇವಾರಿ ಸ್ಥಳದ ಬಳಿ ಬೇಲಿ ನಿರ್ಮಾಣ ಕಾರ್ಯ ನಡೆಸುತ್ತಿದ್ದ ಸ್ಥಳೀಯರು ಅರಣ್ಯದ ಒಳಭಾಗದಲ್ಲಿ ಶವವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ದಿಲೀಪ್ ಕುಮಾರ್ ಪರಿಶೀಲನೆ ನಡೆಸಿದರು.
ಪ್ರಾಥಮಿಕ ತನಿಖೆಯಲ್ಲಿ ಮೃತದೇಹದ ಮೇಲೆ ಯಾವುದೇ ಹಲ್ಲೆ ಅಥವಾ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಸಮಾಜ ಸೇವಕ ಆರಿಫ್ ಅವರ ಆಂಬುಲೆನ್ಸ್ ಮೂಲಕ ಶವವನ್ನು ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಹಾಗೂ ಗುರುತು ಪತ್ತೆ ಕಾರ್ಯ ಕೈಗೊಳ್ಳಲಾಗಿದೆ.
ಈ ನಡುವೆ, ಅರಣ್ಯದ ಒಳಭಾಗದಿಂದ ರಸ್ತೆವರೆಗೆ ಶವವನ್ನು ಸ್ವತಃ ಹೊತ್ತು ತಂದ ಪಿಎಸ್ಐ ದಿಲೀಪ್ ಕುಮಾರ್ ಅವರ ಮಾನವೀಯ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಕುರಿತು ಬಣಕಲ್ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.
Body of unidentified elderly man found in forest
Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...