Home namma chikmagalur chikamagalur ಲಾರಿ ಪಂಚರ್ ಹಾಕುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಸಾವು
chikamagalurCrime NewsHomeLatest Newsnamma chikmagalur

ಲಾರಿ ಪಂಚರ್ ಹಾಕುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಸಾವು

Share
Share

ಚಿಕ್ಕಮಗಳೂರು: ನಗರದ 60 ಅಡಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಲಾರಿಗೆ ಪಂಚರ್ ಹಾಕುತ್ತಿದ್ದ ಗ್ಯಾರೇಜ್ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೊಹಮ್ಮದ್ ಹಿಮರೂಜ್ (47) ಎಂಬುವರೇ ದುರ್ಮರಣಕ್ಕೀಡಾದ ದುರದೃಷ್ಟಕರ ವ್ಯಕ್ತಿ. ಹಿಮರೂಜ್ ಅವರು ಎಂದಿನಂತೆ ತಮ್ಮ ಪಂಚರ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಗ್ಯಾರೇಜ್‌ಗೆ ಬಂದ ಭಾರತ್ ಬೆಂಜ್ ಲಾರಿಯೊಂದಕ್ಕೆ ಅವರು ಪಂಚರ್ ಹಾಕುತ್ತಾ ನಿಂತಿದ್ದರು.

ಇದೇ ಸಮಯದಲ್ಲಿ ಮಹೀಂದ್ರಾ ಪಿಕ್‌ಅಪ್ (KA 15 7330) ವಾಹನದ ಚಾಲಕ ನಯಾಜ್ ಎಂಬಾತ ತನ್ನ ವಾಹನವನ್ನು ತೀವ್ರ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ರಿವರ್ಸ್ ತೆಗೆದಿದ್ದಾನೆ. ಪರಿಣಾಮ, ಲಾರಿಯ ಹಿಂಭಾಗದಲ್ಲಿ ಕೆಲಸ ಮಾಡುತ್ತಿದ್ದ ಹಿಮರೂಜ್ ಅವರಿಗೆ ಪಿಕ್ಅಪ್ ವಾಹನವು ಜೋರಾಗಿ ಡಿಕ್ಕಿ ಹೊಡೆದು, ಅವರ ಮೇಲೆಯೇ ಹರಿದಿದೆ.

ಅಪಘಾತದಿಂದ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಹಿಮರೂಜ್ ಅವರನ್ನು ತಕ್ಷಣವೇ ಅಲ್ಲಿದ್ದ ಲಾರಿ ಚಾಲಕ ಹಾಗೂ ಸ್ಥಳೀಯ ಸಾರ್ವಜನಿಕರು ಆಟೋ ಒಂದರಲ್ಲಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಹಿಮರೂಜ್ ಕೊನೆಯುಸಿರೆಳೆದಿದ್ದು, ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ದುರ್ಘಟನೆಗೆ ಕಾರಣವಾದ ಪಿಕ್‌ಅಪ್ ವಾಹನ ಹಾಗೂ ಅದರ ಬೇಜವಾಬ್ದಾರಿ ಚಾಲಕ ನಯಾಜ್ ವಿರುದ್ಧ ಮೃತರ ಪತ್ನಿ ಶಾಬಿನಾ ನಾಜ್ ಸಂಚಾರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Worker who was fixing a lorry puncture dies on the spot

Share

Leave a comment

Leave a Reply

Your email address will not be published. Required fields are marked *

Don't Miss

ಇಂದಿನಿಂದ ಮದ್ಯದ ದರ ಶೇ.30 ಹೆಚ್ಚಳ

ಬೆಂಗಳೂರು: ಮದ್ಯದಲ್ಲಿನ ಆ‌ಲ್ಕೋಹಾಲ್ ಪ್ರಮಾಣ ಆಧರಿಸಿ ತೆರಿಗೆ ವಿಧಿಸುವ ಹೊಸ ಅಬಕಾರಿ ನೀತಿಯು ರಾಜ್ಯದಲ್ಲಿ ಅಧಿಕೃತವಾಗಿ ಜಾರಿಯಾಗಿದ್ದು, ಇದರೊಂದಿಗೆ ಜನಸಾಮಾನ್ಯರು ಬಳಸುವ ಅಗ್ಗದ ಮದ್ಯಗಳ ಬೆಲೆ ಶೇ.30ರಷ್ಟು ದುಬಾರಿಯಾಗಲಿದೆ. ಪ್ರೀಮಿಯಂ ಮತ್ತು...

ಮಣ್ಣುಮುಕ್ಕ ಹಾವು ಮಾರಾಟಕ್ಕೆ ಯತ್ನ: ಐವರು ಬಂಧನ

ಚಿಕ್ಕಮಗಳೂರು: ಅಪರೂಪದ ವನ್ಯಜೀವಿಯಾದ ಮಣ್ಣುಮುಕ್ಕ ಹಾವು (Red Sand Boa) ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಗರದ...

Related Articles

ಸಿ.ಟಿ.ರವಿಗೆ ಸೋಲಿನ ಬಳಿಕ ದಲಿತತ್ವ ನೆನಪು

ಚಿಕ್ಕಮಗಳೂರು: ಹಿಂದುತ್ವ ಜಪಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಸೋಲಿನ ಬಳಿಕ ದಲಿತತ್ವ ನೆನಪಾಗಿದೆ...

ವಿದ್ಯುತ್ ತಂತಿ ತಗುಲಿ ರೈತನ ಧಾರುಣ ಸಾವು

ಕಡೂರು: ವಿದ್ಯುತ್ ತಂತಿ ತಗುಲಿ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರದೃಷ್ಟಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು...

ಭದ್ರಾ ಹಿನ್ನೀರಿನ ಪ್ರದೇಶದಲ್ಲಿ ಆನೆಗಳ ಹಿಂಡು ಪ್ರತ್ಯಕ್ಷ

ಎನ್.ಆರ್. ಪುರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ನರಸಿಂಹರಾಜಪುರ...

ಸಂಬಂಧಿಕರ ಮನೆಗೆ ಹೊರಟ ಯುವಕ ರಸ್ತೆ ಅಪಘಾತದಲ್ಲಿ ಸಾವು

ಶೃಂಗೇರಿ: ಪೊಲೀಸ್‌ ಠಾಣಾ ವ್ಯಾಪ್ತಿಯ ಸುಂಕದಮಕ್ಕಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ-169ರಲ್ಲಿ ಬೈಕ್ ಅಪಘಾತ ಸಂಭವಿಸಿ ಪ್ರದೀಪ್...