Home namma chikmagalur chikamagalur ಚಿಕ್ಕಮಗಳೂರು ಜಿಲ್ಲಾ ಜಾಗೃತಿ ಸಮಿತಿಗೆ ಬರಹಗಾರ ಡಿ. ಎಂ. ಮಂಜುನಾಥಸ್ವಾಮಿ ನೇಮಕ
chikamagalurHomeLatest Newsnamma chikmagalur

ಚಿಕ್ಕಮಗಳೂರು ಜಿಲ್ಲಾ ಜಾಗೃತಿ ಸಮಿತಿಗೆ ಬರಹಗಾರ ಡಿ. ಎಂ. ಮಂಜುನಾಥಸ್ವಾಮಿ ನೇಮಕ

Share
Share

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಮನೆಗೊಂದು ಗ್ರಂಥಾಲಯ’ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಜಾಗೃತಿ ಸಮಿತಿಗೆ ಬರಹಗಾರರಾದ ಡಿ. ಎಂ. ಮಂಜುನಾಥಸ್ವಾಮಿ ಅವರನ್ನು ಸಂಚಾಲಕರಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಮಾಹಿತಿ ನೀಡಿದ್ದು. ಜಿಲ್ಲೆಯಾದ್ಯಂತ ಕನ್ನಡ ಸಾಹಿತ್ಯ, ಪುಸ್ತಕ ಸಂಸ್ಕೃತಿ ಮತ್ತು ಓದುವ ಹವ್ಯಾಸವನ್ನು ವ್ಯಾಪಕವಾಗಿ ವಿಸ್ತರಿಸುವ ಉದ್ದೇಶದಿಂದ ಈ ವಿಶೇಷ ಸಮಿತಿಯನ್ನು ರಚಿಸಲಾಗಿದೆ. ಈ ಜಾಗೃತಿ ಸಮಿತಿಯು ಒಟ್ಟು ಹತ್ತು ಜನ ಸದಸ್ಯರನ್ನು ಒಳಗೊಂಡಿದ್ದು, ಡಿ. ಎಂ. ಮಂಜುನಾಥಸ್ವಾಮಿ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಿದೆ.

ಸಮಿತಿಯ ಸದಸ್ಯರುಗಳಾಗಿ ಕೆ. ಚಂದ್ರಯ್ಯ, ಡಾ. ಲಕ್ಷ್ಮಿಕಾಂತ್ ಕೆ. ಎನ್., ಮಾವಿನಕೆರೆ ದಯಾನಂದ್, ಎಂ. ಆರ್. ಪ್ರಕಾಶ್, ದಾದಾಪೀರ್ ತರೀಕೆರೆ, ಸೌಭಾಗ್ಯ ಮಹಾಂತೇಶ್, ಸುಜಾತ ಎಚ್. ಎಲ್., ನಂದೀಶ್ ಬಂಕೇನಹಳ್ಳಿ ಹಾಗೂ ಸತೀಶ್ ಜೆ. ಅವರು ನೇಮಕಗೊಂಡಿದ್ದಾರೆ. ಈ ತಂಡವು ಜಿಲ್ಲೆಯಲ್ಲಿ ಪುಸ್ತಕ ಸಂಸ್ಕೃತಿಯನ್ನು ಪಸರಿಸಲು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಿದೆ.

ತಮ್ಮ ಈ ಹೊಸ ಜವಾಬ್ದಾರಿಯ ಕುರಿತು ಸಂತಸ ಹಂಚಿಕೊಂಡಿರುವ ನೂತನ ಸಂಚಾಲಕ ಮಂಜುನಾಥಸ್ವಾಮಿ ಅವರು, ಪ್ರಸ್ತುತ ದಿನಗಳಲ್ಲಿ ಯುವ ಪೀಳಿಗೆಯಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಪುಸ್ತಕ ಓದುವ ಅಭಿರುಚಿಯನ್ನು ಹೆಚ್ಚಿಸುವುದು ಅತ್ಯಂತ ಅಗತ್ಯವಾಗಿದೆ ಎಂದಿದ್ದಾರೆ.

ಇದಕ್ಕಾಗಿ ಜಿಲ್ಲೆಯಲ್ಲಿ ವಿಶೇಷ ಮತ್ತು ಆಕರ್ಷಕ ಕಾರ್ಯಕ್ರಮಗಳನ್ನು ರೂಪಿಸಿ ಯುವಜನರನ್ನು ಸಾಹಿತ್ಯದ ಕಡೆಗೆ ಸೆಳೆಯಲು ಶ್ರಮಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಮಹತ್ವದ ಹುದ್ದೆಗೆ ಆಯ್ಕೆಯಾಗಿರುವ ಮಂಜುನಾಥಸ್ವಾಮಿ ಅವರಿಗೆ ಜಿಲ್ಲೆಯ ಸಾಹಿತ್ಯಾಸಕ್ತರು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಅವರ ಹಿತೈಷಿಗಳು ಮತ್ತು ಸ್ನೇಹಿತರು ಆತ್ಮೀಯವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Writer D. M. Manjunathaswamy appointed to Chikkamagaluru District Awareness Committee

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಹಕರಿಗೆ ಬಡ್ಡಿ ಸಹಿತ ವಿಮಾ ಕಂತು ಮರಳಿಸುವಂತೆ ಆದೇಶ

ಚಿಕ್ಕಮಗಳೂರು : ಖಾತೆದಾರರ ಒಪ್ಪಿಗೆ ಪಡೆಯದೆ ಅವರ ಖಾತೆಯಿಂದ ಹಣ ಮುರಿದುಕೊಂಡು ವಿಮಾ ಪಾಲಿಸಿ ಖರೀದಿಸಿ ಸೇವಾ ನ್ಯೂನತೆ ಎಸಗಿದ ಆರೋಪದಲ್ಲಿ ಕೋಟಕ್ ಮಹೀಂದ್ರಾ ಓಲ್ಡ್ ಮ್ಯೂಚ್ಯುಯಲ್ ಲೈಫ್ ಇನ್‌ಶೂರೆನ್ಸ್ ಲಿಮಿಟೆಡ್...

ಲೋಕಾಯುಕ್ತ ಬಲೆಗೆ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳು

ಚಿಕ್ಕಮಗಳೂರು: ರೈತನೊಬ್ಬನಿಂದ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕು ಕಚೇರಿಯಲ್ಲಿ ನಡೆದಿದೆ. ತರೀಕೆರೆ ತಾಲೂಕಿನ...

Related Articles

“ಶಿವಾನಂದ ನೀಲಣ್ಣವ‌ರ್ ಕೊಡುಗೆ” ನಾಮಫಲಕ ತೆರವು

ಕಡೂರು: ಅನಧಿಕೃತವಾಗಿ ಬಡ್ಡಿ ವ್ಯವಹಾರ ಮಾಡಿದ ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಅವರನ್ನು...

ಆಟವಾಡುತ್ತಿದ್ದ ವೇಳೆ ಹಗ್ಗಕ್ಕೆ ಸಿಲುಕಿ ಬಾಲಕಿ ಸಾವು

ಶೃಂಗೇರಿ: ಬೇಸಿಗೆ ರಜಾ ಕಳೆಯಲು ಅಜ್ಜಿ ಮನೆಗೆ ಬಂದ ಸಂದರ್ಭದಲ್ಲಿ ಬಾಲಕಿಯೊಬ್ಬಳು ಆಟವಾಡುತ್ತಿದ್ದ ವೇಳೆ ಹಗ್ಗಕ್ಕೆ...

ಪರವಾನಗಿ ಇಲ್ಲದ ಅಕ್ರಮ ಸಿಂಗಲ್ ಬ್ಯಾರೆಲ್ ಬಂದೂಕು ವಶ

ಚಿಕ್ಕಮಗಳೂರು: ಪರವಾನಗಿ ಇಲ್ಲದೆ ಮನೆಯಲ್ಲಿ ಇಟ್ಟುಕೊಂಡಿದ್ದ ಅಕ್ರಮ ಸಿಂಗಲ್ ಬ್ಯಾರೆಲ್ ಬಂದೂಕನ್ನು (ಎಸ್‌ಬಿಎಂಎಲ್) ಆಲ್ಲೂರು ಪೊಲೀಸರು...

ಕಾಮೇನಹಳ್ಳಿ ಮೀಸಲು ಅರಣ್ಯದಲ್ಲಿ ಕ್ಯಾಮೆರಾ ಕಳವು

ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ಮೇಲೆ ಕಣ್ಣಿಡಲು ಅಳವಡಿಸಲಾಗಿದ್ದ ಅತ್ಯಾಧುನಿಕ ಕ್ಯಾಮೆರಾಗಳನ್ನೇ ಖದೀಮರು ಹೊತ್ತೊಯ್ದಿರುವ...