Home namma chikmagalur chikamagalur ನೂತನ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅಧಿಕಾರ ಸ್ವೀಕಾರ
chikamagalurHomeLatest Newsnamma chikmagalur

ನೂತನ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅಧಿಕಾರ ಸ್ವೀಕಾರ

Share
Share

ಚಿಕ್ಕಮಗಳೂರು: ಕಾಫಿನಾಡಿನ ನೂತನ ಜಿಲ್ಲಾಧಿಕಾರಿಯಾಗಿ ಭನ್ವರ್ ಸಿಂಗ್ ಮೀನಾ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲಾಧಿಕಾರಿ ಎಂ.ಎನ್. ನಾಗರಾಜ್ ಅವರಿಂದ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಆಡಳಿತ ನೀಡುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಅಭಿವೃದ್ಧಿಗಾಗಿ ಸಿಇಒ, ಡಿಎಫ್‌ಒ ಮತ್ತು ಎಸ್ಪಿ ಅವರನ್ನೊಳಗೊಂಡ ಉತ್ತಮ ತಂಡದೊಂದಿಗೆ, ಎಲ್ಲರೂ ಒಟ್ಟಾಗಿ ಕೆಲಸ ಮಾಡುವುದಾಗಿ ತಿಳಿಸಿದರು. ಭನ್ವ‌ರ್ ಸಿಂಗ್ ಮೀನಾ ಅವರು 2017ರ ಬ್ಯಾಚ್‌ ನ ಐಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಬೆಳಗಾವಿಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

ಆನಂತರ ಬಸವಕಲ್ಯಾಣದಲ್ಲಿ ಎಸಿಯಾಗಿ, ಕೊಡಗು ಜಿಲ್ಲಾ ಪಂಚಾಯತ್‌ನಲ್ಲಿ ಸಿಇಒ ಆಗಿ ಸೇವೆ ಸಲ್ಲಿಸಿದ್ದಾರೆ. ಕೆಪಿಎಸ್‌ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಹಾಗೂ ಬಾಗಲಕೋಟೆಯಲ್ಲೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಇತ್ತೀಚೆಗೆ ಕಲಬುರಗಿ ಜಿಲ್ಲೆಯಲ್ಲಿ ಕೆಲಸ ಮಾಡಿದ ನಂತರ ಇದೀಗ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಜಿಲ್ಲೆಯ ಎಡಿಸಿ, ಎಸಿ ಸೇರಿದಂತೆ ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ಸಮಸ್ಯೆಗಳು ಮತ್ತು ಆದ್ಯತೆಗಳ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

New District Collector Bhanwar Singh Meena assumes office

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...