Home namma chikmagalur chikamagalur ಜಿಂಕೆ ಬೇಟೆ ಮೂವರ ನ್ಯಾಯಾಂಗ ಬಂಧನ
chikamagalurHomeLatest Newsnamma chikmagalur

ಜಿಂಕೆ ಬೇಟೆ ಮೂವರ ನ್ಯಾಯಾಂಗ ಬಂಧನ

Share
Share

ಚಿಕ್ಕಮಗಳೂರು: ಜಿಂಕೆ ಜಾತಿಯ ವನ್ಯಪ್ರಾಣಿಯೊಂದನ್ನು ಬೇಟೆಯಾಡಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಗಳಿಂದ ಪ್ರಾಣಿಯ ಕಳೇಬರ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ತರೀಕೆರೆ ತಾಲ್ಲೂಕು ಲಿಂಗದಹಳ್ಳಿ ಹೋಬಳಿ, ಮೇಟೂರು ಗ್ರಾಮದ ವೆಂಕಟರಮಣ, ತಮಿಳುನಾಡು ತಿರುವಣ್ಣಾಮಲೈ ಜಿಲ್ಲೆಯ ಜಮಣಮತ್ತೂರು ತಾಲ್ಲೂಕಿನ ಕುಂಬಳೂರು ಗ್ರಾಮದ ಕನ್ನಿಯಪ್ಪನ್ ಹಾಗೂ ಅದೇ ಜಿಲ್ಲೆ, ತಾಲ್ಲೂಕು ವಲ್ಲಿಯೂರಿನ ಸುರೇಶ ಎಂಬವರೇ ಬಂಧಿತ ಆರೋಪಿಗಳು.

ಮಂಗಳವಾರ ಬೆಳಗ್ಗಿನ ಜಾವ ಸುಮಾರು ೧.೪೫ರ ಸುಮಾರಿಗೆ ಅತ್ತಿಗುಂಡಿ ಗ್ರಾಮದಿಂದ ಮಲಗಾರು ಗ್ರಾಮಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಕಾಡು ಪ್ರಾಣಿಗಳ ಬೇಟೆಯಾಡುತ್ತಿರುವ ಬಗ್ಗೆ ಮಾಹಿತಿ ದೊರೆತ ತಕ್ಷಣ ಕಾರ್ಯತತ್ಪರರಾದ ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಟಾರ್ಚ್ ಬೆಳಕಿನಲ್ಲಿ ಓಡಿಹೋಗುತ್ತಿದ್ದ ಆರೋಪಿಗಳನ್ನು ಸುತ್ತುವರಿದಿದ್ದಾರೆ.

ಅನಂತರ ಪಂಚರ ಸಮಕ್ಷಮದಲ್ಲಿ ಅವರಿಂದ ಜಿಂಕೆ ಜಾತಿಗೆ ಸೇರಿದ ಪ್ರಾಣಿಯ ಕಳೇಬರ, ಬಿಳಿ ಬಣ್ಣದ ಒಂದು ಬಟ್ಟೆ ಬ್ಯಾಗ್, ಎರಡು ಹೆಡ್‌ಲೈಟ್‌ಗಳು, ಎರಡು ಮರದ ದೊಣ್ಣೆಗಳು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪಮಹಾ ನಿರೀಕ್ಷಕಿ ಜಿ.ಸಂಗೀತ, ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರು ಮಾರ್ಗದರ್ಶನದಲ್ಲಿ ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪನಿರೀಕ್ಷಕ ಬಾಬುದ್ದೀನ್ ಹಾಗೂ ಸಿಬ್ಬಂದಿ ದೇವರಾಜ, ಕೃಷ್ಣರಾಜ್ ಅರಸ್, ದಿಲೀಪ್, ನಟರಾಜ್, ಹಾಲೇಶ್, ಹೇಮಾವತಿ ಹಾಗೂ ಚಾಲಕ ತಿಮ್ಮಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಅರಣ್ಯ ಕಾಯ್ದೆ ಮತ್ತು ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಸಂಬಂಧಪಟ್ಟ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರ ಕಚೇರಿ (೯೪೮೦೮೦೦೨೨೦) ಹಾಗೂ ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಕಚೇರಿ (೮೨೭೭೯೪೯೮೦೯) ದೂರವಾಣಿ ಸಂಖ್ಯೆಗಳಿಗೆ ಕರೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Three arrested for deer hunting

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...