Home namma chikmagalur chikamagalur ಅಧಿಕಾರದಲ್ಲಿ ಮೆರೆಯುತ್ತಿರುವವರು ಜೆಡಿಎಸ್‌-ಬೋಜೇಗೌಡರ ಭಿಕ್ಷೆಯಿಂದ
chikamagalurHomeLatest Newsnamma chikmagalur

ಅಧಿಕಾರದಲ್ಲಿ ಮೆರೆಯುತ್ತಿರುವವರು ಜೆಡಿಎಸ್‌-ಬೋಜೇಗೌಡರ ಭಿಕ್ಷೆಯಿಂದ

Share
Share

ಚಿಕ್ಕಮಗಳೂರು: ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ರಸ್ತೆ ಅಭಿವೃದ್ಧಿ ಕಾಮಗಾರಿ ವಿಚಾರವಾಗಿ ಜಟಾಪಟಿಯ ನಂತರ ರಾಜಕೀಯ ಕೆಸರೆರಚಾಟ ಮುಂದುವರೆದಿದೆ. ಮಾಜಿ ಶಾಸಕ ಸಿ.ಟಿ. ರವಿ ಅವರು ತಾಂತ್ರಿಕ ಕಾರಣಗಳಿಂದ ಚುನಾವಣೆಯಲ್ಲಿ ಸೋತಿರಬಹುದು, ಆದರೆ ಜನರ ವಿಶ್ವಾಸ ಕಳೆದುಕೊಂಡಿಲ್ಲ ಎಂಬ ಮಾತನಾಡಿದ್ದಾರೆ.

ತಾವು ಸೋತಿದ್ದರೂ ಈ ಹಿಂದಿನ ಚುನಾವಣೆಗಳಿಗಿಂತ 2023ರಲ್ಲಿ ಹೆಚ್ಚಿನ ಮತಗಳನ್ನು ಪಡೆದಿದ್ದು, ಜನರ ಪ್ರೀತಿ ಇಂದಿಗೂ ತಮ್ಮ ಮೇಲಿದೆ ಎಂದು ಶಾಸಕ ತಮ್ಮಯ್ಯ ವಿರುದ್ಧ ಪರೋಕ್ಷವಾಗಿ ನಡೆಸಿದ್ದಾರೆ. ಸದ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸುತ್ತಾ, ಇವತ್ತು ಅಧಿಕಾರದಲ್ಲಿ ಮೆರೆಯುತ್ತಿರುವವರು ಜೆಡಿಎಸ್‌ ಮತ್ತು ಬೋಜೇಗೌಡರ ಭಿಕ್ಷೆಯಿಂದ ಮೆರೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ತಾವು ಎಂದಿಗೂ ಅಭಿವೃದ್ಧಿ, ನೀತಿ ಮತ್ತು ಪಕ್ಷನಿಷ್ಠೆಯ ರಾಜಕಾರಣ ಮಾಡಿದ್ದೇನೆಯೇ ಹೊರತು ಜಾತಿ ರಾಜಕಾರಣ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮನ್ನು ನಂಬಿದವರನ್ನು ತಾವು ಎಂದಿಗೂ ಕೈಬಿಟ್ಟಿಲ್ಲ, ಆದರೆ ದುರಾಸೆಯಿಂದ ಅಡ್ಡದಾರಿ ಹಿಡಿದವರನ್ನು ಮಾತ್ರ ದೂರ ಇಟ್ಟಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಕಷ್ಟಪಟ್ಟು ಮೇಲೆ ಬರಲು ಬಯಸುವವರಿಗೆ ತಾವು ಸದಾ ಬೆಂಬಲವಾಗಿ ನಿಂತಿರುವುದಾಗಿ ಹೇಳಿದ ಅವರು, ಜಿಲ್ಲೆಯ ಜನರಿಗೆ ಯಾರು ಸೈಕಲ್‌ನಿಂದ ಕಾರಿಗೆ ಬೆಳೆದಿದ್ದಾರೆ ಎಂಬುದು ಚೆನ್ನಾಗಿ ಗೊತ್ತು ಎಂದಿದ್ದಾರೆ. ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಸರ್ಕಾರವೇ ಇರುವುದರಿಂದ, ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮದ್ಯದ ವ್ಯವಹಾರ, ಬೇನಾಮಿ 21ಗುತ್ತಿಗೆಗಳು ಹಾಗೂ ಬಾರ್‌ಗಳ ದಂಧೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಸತ್ಯವನ್ನು ಹೊರತರಲಿ ಎಂದು ಸವಾಲು ಹಾಕಿದ್ದಾರೆ.

ತಮಗೆ ಜನರ ಪ್ರೀತಿಯೇ ಮುಖ್ಯವಾಗಿದ್ದು, ಅಡ್ಡಕಸಬಿಗಳ ಬೆದರಿಕೆಗೆ ತಾವು ಎಂದಿಗೂ ಬಗ್ಗುವುದಿಲ್ಲ ಎಂದು ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Those who are in power are living on the alms of JDS-Boje Gowda.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲ್ಯ ವಿವಾಹ ತಡೆಯಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ

ಚಿಕ್ಕಮಗಳೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಬಾಲ್ಯ ವಿವಾಹ ತಡೆಯಲು ಹೋದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ...

ಅರಣ್ಯದಲ್ಲಿ ಅಪರಿಚಿತ ವೃದ್ಧನ ಶವ ಪತ್ತೆ 

ಕೊಟ್ಟಿಗೆಹಾರ : ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಅರಣ್ಯ ಪ್ರದೇಶದಲ್ಲಿ ಸುಮಾರು 65 ರಿಂದ 70 ವರ್ಷದೊಳಗಿನ ಅಪರಿಚಿತ ವೃದ್ಧನ ಶವ ಪತ್ತೆಯಾಗಿದೆ. ಕಳೆದ ಮೂರು–ನಾಲ್ಕು ದಿನಗಳಿಂದ ರಸ್ತೆ ಬದಿಯ...

Related Articles

ಬಿ.ಎಲ್.ಶಂಕರ್ ರ ರಾಜಕೀಯ ಹಪ ಹಪಿಗೆ ಮತ್ತೆ ಮತ್ತೆ ತಣ್ಣೀರು !

ಬಿ.ಎಲ್.ಶಂಕರ್ ಕಾಂಗ್ರೆಸ್ ನ ರಾಜ್ಯ ನಾಯಕರು ನಿಜ,ಆದರೆ ಇವರು ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಲ್ಲಿ ಕಡ್ಡಿ...

ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ ನಿಯಂತ್ರಣ ತಪ್ಪಿ ಪಲ್ಟಿ

ಚಿಕ್ಕಮಗಳೂರು: ಮಂಗಳೂರಿನಿಂದ ಹೊರನಾಡಿಗೆ ಆಗಮಿಸಿದ್ದ ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ (ಟಿಟಿ) ವಾಹನ ತಡರಾತ್ರಿ ಹೊರನಾಡು ಸಮೀಪದ ಭಾಮಿ...

ಭೈರಾಪುರ ಗ್ರಾಮದಲ್ಲಿ ಜಾತಿ ನಿಂದನೆ ಪ್ರಕರಣ ದಾಖಲು

ತರೀಕೆರೆ: ತಮ್ಮದೇ ಜಮೀನಿನಲ್ಲಿ ಬೇಸಾಯ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅಕ್ರಮವಾಗಿ ಮುನ್ನುಗ್ಗಿ ಜಾತಿ ನಿಂದನೆ ಮಾಡಿ,...

ಸೀತಾಳಯ್ಯನಗಿರಿಯಲ್ಲಿ ಜೀಪ್ ಚಾಲಕರ ಪರಸ್ಪರ ಹೊಡೆದಾಟ

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿಯ ಸಮೀಪದ ಸೀತಾಳಯ್ಯನಗಿರಿಯಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ...