Home namma chikmagalur chikamagalur ರಾಜಕೀಯ ಸಮರವಾಗಿ ಮಾರ್ಪಟ್ಟ ರಸ್ತೆ ಕಾಮಗಾರಿ ವೀಕ್ಷಣೆ ಪ್ರಕರಣ
chikamagalurHomeLatest Newsnamma chikmagalur

ರಾಜಕೀಯ ಸಮರವಾಗಿ ಮಾರ್ಪಟ್ಟ ರಸ್ತೆ ಕಾಮಗಾರಿ ವೀಕ್ಷಣೆ ಪ್ರಕರಣ

Share
Share

ಚಿಕ್ಕಮಗಳೂರು: ರಸ್ತೆ ಕಾಮಗಾರಿ ವಿಚಾರವಾಗಿ ಆರಂಭವಾದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಬೀದಿ ಕಾಳಗವು ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ರಾಜಕೀಯ ಸಮರವಾಗಿ ಮಾರ್ಪಟ್ಟಿದೆ.

ನಗರ ಠಾಣೆಯಲ್ಲಿ ದೂರು-ಪ್ರತಿದೂರುಗಳ ಸ್ಪರ್ಧೆಯೇ ಏರ್ಪಟ್ಟಿದ್ದು, ಇದುವರೆಗೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ. ಈ ಘಟನೆಯು ನಗರ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಉಭಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳು ಮತ್ತಷ್ಟು ಉಗ್ರರೂಪ ಪಡೆದುಕೊಂಡಿವೆ.

ದಾಖಲಾಗಿರುವ ಪ್ರಕರಣಗಳ ಪೈಕಿ ಕಾಂಗ್ರೆಸ್, ಎಸ್‌ಡಿಪಿಐ ಹಾಗೂ ಮುಸ್ಲಿಂ ಸಂಘಟನೆಗಳಿಂದ 4 ದೂರುಗಳು ಸಲ್ಲಿಕೆಯಾಗಿದ್ದರೆ, ಬಿಜೆಪಿಯಿಂದ ಒಂದು ದೂರು ದಾಖಲಾಗಿದೆ. ಇದರೊಂದಿಗೆ ಪೊಲೀಸರು ಕೂಡ ಒಂದು ಸುಮೋಟೊ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಸದ್ಯಕ್ಕೆ ಪೊಲೀಸರ ಸುಮೋಟೊ ಪ್ರಕರಣ ಹಾಗೂ ಮುದಾಸಿರ್ ಪಾಷ ನೀಡಿದ ದೂರಿನ ಮೇರೆಗೆ ಮಾತ್ರ ಎಫ್‌ಐಆರ್ ದಾಖಲಿಸಲಾಗಿದೆ. ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ವಿರುದ್ಧ ಮುಸ್ಲಿಂ ಮುಖಂಡರು ನೀಡಿದ ದೂರಿನನ್ವಯ ಎಫ್‌ಐಆ‌ರ್ ದಾಖಲಿಸಲಾಗಿದೆ.

ಮತ್ತೊಂದೆಡೆ, ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಕೆ.ಪಿ. ವೆಂಕಟೇಶ್ ಅವರು ಕಾಂಗ್ರೆಸ್ ನಗರಸಭೆಯ ಸದಸ್ಯರಾದ ಪರಮೇಶ್ ರಾಜ್ ಅರಸ್, ಮುನೀರ್ ಹಾಗೂ ಮುಖಂಡರಾದ ಕಲಂದರ್ ಮತ್ತು ಜಾವಿದ್ ವಿರುದ್ಧ ಜಾತಿ ನಿಂದನೆ ದೂರು ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನಿಂದಲೂ ಪ್ರತಿದೂರು ಸಲ್ಲಿಕೆಯಾಗಿದ್ದು, ಕುರವಂಗಿ ರಾಜೇಶ್ ಎಂಬುವವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಿದ್ದಾರೆ. ಇತ್ತೀಚೆಗೆ ನಗರದ ರಾಂಪುರ ರಸ್ತೆಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಕಾಮಗಾರಿ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಉಂಟಾದ ಗಲಾಟೆಯು, ಸದ್ಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಕಾನೂನು ಮತ್ತು ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ.

Road construction observation case turns into political battle

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...