Home Crime News ಭೈರಾಪುರ ಗ್ರಾಮದಲ್ಲಿ ಜಾತಿ ನಿಂದನೆ ಪ್ರಕರಣ ದಾಖಲು
Crime NewsHomeLatest Newsnamma chikmagalurTarikere

ಭೈರಾಪುರ ಗ್ರಾಮದಲ್ಲಿ ಜಾತಿ ನಿಂದನೆ ಪ್ರಕರಣ ದಾಖಲು

Share
Share

ತರೀಕೆರೆ: ತಮ್ಮದೇ ಜಮೀನಿನಲ್ಲಿ ಬೇಸಾಯ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅಕ್ರಮವಾಗಿ ಮುನ್ನುಗ್ಗಿ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಲಿಂಗದಹಳ್ಳಿಯ ಶಾಂತಿನಗರದ ನಿವಾಸಿಯಾದ ಸಿದ್ದಮ್ಮ ಎಂಬುವವರೇ ಈ ದೌರ್ಜನ್ಯಕ್ಕೆ ಒಳಗಾದ ದುರ್ದೈವಿ. ಸಿದ್ದಮ್ಮನವರು ಭೈರಾಪುರ ಗ್ರಾಮದ ಸರ್ವೇ ನಂಬರ್ 73 (ಹಳೆದು), 101 (ಹೊಸದು) ರಲ್ಲಿರುವ ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿಸುತ್ತಿದ್ದಾಗ, ಅದೇ ಗ್ರಾಮದ ಸಣ್ಣಪ್ಪ ಹಾಗೂ ಆತನ ಮಗ ಮನು ಎಂಬುವವರು ಜಮೀನಿಗೆ ಅಕ್ರಮವಾಗಿ ನುಗ್ಗಿದ್ದಾರೆ.

ಈ ವೇಳೆ “ಉಳುಮೆ ಮಾಡಿದ ಜಾಗವನ್ನು ತುಳಿಯಬೇಡಿ” ಎಂದು ಸಿದ್ದಮ್ಮ ಹೇಳಿದ್ದೇ ತಡ, ಆಕ್ರೋಶದ ಕಟ್ಟೆ ಒಡೆದ ಸಣ್ಣಪ್ಪ ಸಿದ್ದಮ್ಮನವರ ವಿರುದ್ಧ ಅಸಭ್ಯವಾಗಿ ಜಾತಿ ನಿಂದನೆ ಮಾಡಿ ಕಾಲಿನಿಂದ ಒದೆಯಲು ಯತ್ನಿಸಿದ್ದಾನೆ.

ತಂದೆಯ ಜೊತೆಗೂಡಿದ ಮಗ ಮನು ಸಿದ್ದಮ್ಮನವರನ್ನು ಜೋರಾಗಿ ತಳ್ಳಿದ್ದು, ಅವರು ಕಲ್ಲಿನ ರಾಶಿಯ ಮೇಲೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಸಿದ್ದಮ್ಮನವರ ಸೊಂಟ, ತೊಡೆ ಹಾಗೂ ಕಿವಿಯ ಭಾಗಕ್ಕೆ ಬಲವಾದ ಗಾಯಗಳಾಗಿವೆ. ಇಷ್ಟಕ್ಕೇ ನಿಲ್ಲದ ಆರೋಪಿ ತಂದೆ-ಮಗ, ಜಮೀನಿನಿಂದ ಖಾಲಿ ಮಾಡಿಸುವುದಾಗಿ ಅಬ್ಬರಿಸಿದ್ದಲ್ಲದೆ, ಮುಂದಿನ ದಿನಗಳಲ್ಲಿ ಒಬ್ಬಂಟಿಯಾಗಿ ಸಿಕ್ಕಾಗ ಬೈಕ್‌ನಲ್ಲಿ ಗುದ್ದಿಸಿ ಕೊಲೆ ಮಾಡುವುದಾಗಿ ಬಹಿರಂಗವಾಗಿಯೇ ಪ್ರಾಣ ಬೆದರಿಕೆ ಒಡ್ಡಿದ್ದಾರೆ.

ಸದ್ಯ ತೀವ್ರವಾಗಿ ಗಾಯಗೊಂಡಿರುವ ಸಿದ್ದಮ್ಮನವರು ತರೀಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ತರೀಕೆರೆ ಪೊಲೀಸರು ಆರೋಪಿಗಳ ವಿರುದ್ಧ ಅಟ್ರಾಸಿಟಿ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

Caste abuse case registered in Bhairapura village

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...