Home namma chikmagalur chikamagalur ಬೈಕ್‌ ನಿಂದ ಕೆಳಗೆ ಬಿದ್ದಮಹಿಳೆಗೆ ಗಂಭೀರ ಗಾಯ
chikamagalurHomeLatest Newsnamma chikmagalur

ಬೈಕ್‌ ನಿಂದ ಕೆಳಗೆ ಬಿದ್ದಮಹಿಳೆಗೆ ಗಂಭೀರ ಗಾಯ

Share
Share

ಕಡೂರು: ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಬೈಕಿಗೆ ಹಾವು ಅಡ್ಡ ಬಂದ ಪರಿಣಾಮ ಸವಾರ ದಿಢೀರ್ ಬ್ರೇಕ್ ಹಾಕಿದ್ದರಿಂದ ಹಿಂಬದಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಣಾವಾರ-ಸಖರಾಯಪಟ್ಟಣ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಅರಕೆರೆ ಗ್ರಾಮದ ನಿವಾಸಿ ತಿಲೋತ್ತಮ (39) ಗಾಯಗೊಂಡ ಮಹಿಳೆ. ಈ ಸಂಬಂಧ ಬೈಕ್ ಸವಾರ ಮಧು ಎಂಬುವವರ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಿಲೋತ್ತಮ ಅವರು ಮೇ 23ರಂದು ಬೆಳಗ್ಗೆ ಕಡೂರು ತಾಲೂಕಿನ ಬಳ್ಳೇಕೆರೆ ಗ್ರಾಮದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪೂಜೆ ಮಾಡಿಸಲು ಗ್ರಾಮಸ್ಥರ ಕಾರಿನಲ್ಲಿ ತೆರಳಿದ್ದರು. ಪೂಜೆ ಮುಗಿದ ಬಳಿಕ ಸಂಜೆ 6 ಗಂಟೆ ಸಮಯದಲ್ಲಿ ಅದೇ ಗ್ರಾಮದ ಮಧು ಎಂಬುವವರು ಬಳ್ಳೇಕೆರೆ ದೇವಸ್ಥಾನದಿಂದ ತಮ್ಮ ಬೈಕ್ ನಲ್ಲಿ (KA-13 EG-1613) ಅರಕೆರೆಗೆ ವಾಪಸ್ ಹೊರಟಿದ್ದರು.

ಈ ವೇಳೆ ತಿಲೋತ್ತಮ ಅವರು ಮಧು ಅವರ ಬೈಕ್‌ ಹಿಂಬದಿ ಕುಳಿತು ತೆರಳುತ್ತಿರುವಾಗ ಮಾಚಗೊಂಡನಹಳ್ಳಿ ಗೇಟ್ ಬಳಿ ಹಾವೊಂದು ದಿಢೀರನೆ ರಸ್ತೆಗೆ ಅಡ್ಡ ಬಂದಿದೆ ಹೀಗಾಗಿ ಬೈಕ್ ಚಾಲಕ ಮಧು ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದರಿಂದ ನಿಯಂತ್ರಣ ಸಿಗದೆ ತಕ್ಷಣವೇ ಬ್ರೇಕ್ ಹಾಕಿದ್ದಾರೆ.

ಹೀಗಾಗಿ ಹಿಂಬದಿ ಕುಳಿತಿದ್ದ ತಿಲೋತ್ತಮ ಅವರು ರಸ್ತೆಗೆ ಬಿದ್ದ ಪರಿಣಾಮ ಅವರ ಎರಡು ಕಾಲುಗಳು ಹಾಗೂ ಬಲಭುಜಕ್ಕೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಹಾಗೂ ದಾರಿಹೋಕರು ಗಾಯಾಳುವನ್ನು ಬಾಣಾವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸದ್ಯ ತಿಲೋತ್ತಮ ಅವರು ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ಭೇಟಿ ನೀಡಿದ ಸಖರಾಯಪಟ್ಟಣ ಠಾಣೆಯ ಎಎಸ್‌ಐ ಕುಮಾರ್ ಅವರು ಗಾಯಾಳು ತಿಲೋತ್ತಮ ಅವರಿಂದ ಹೇಳಿಕೆ ಪಡೆದು ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ ಹೀಗಾಗಿ ಸವಾರ ಮಧು ವಿರುದ್ಧ ಸಖರಾಯಪಟ್ಟಣ ಪೊಲೀಸರು ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Woman seriously injured after falling off bike

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಭನ್ವರ್ ಸಿಂಗ್ ಮೀನಾ ನೇಮಕ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಆಡಳಿತದ ಸಾರಥಿ ಬದಲಾಗಿದ್ದು, ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳ ವರ್ಗಾವಣೆಯ ಮಹತ್ವದ ಅದೇಶ ಹೊರಡಿಸಿದೆ. ಜಿಲ್ಲೆಯ ಹಾಲಿ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ...

ಸಿ.ಟಿ.ರವಿಗೆ ಸೋಲಿನ ಬಳಿಕ ದಲಿತತ್ವ ನೆನಪು

ಚಿಕ್ಕಮಗಳೂರು: ಹಿಂದುತ್ವ ಜಪಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಸೋಲಿನ ಬಳಿಕ ದಲಿತತ್ವ ನೆನಪಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಎಂ.ಮಲ್ಲೇಶಸ್ವಾಮಿ ಟೀಕಿಸಿದರು. ಇಪ್ಪತ್ತು ವರ್ಷ ಶಾಸಕರಾಗಿ,...

Related Articles

ತರೀಕೆರೆ-ಕಡೂರು-ಚಿಕ್ಕಮಗಳೂರು: ಅದಲು-ಬದಲು ಕಾಂಗ್ರೆಸ್, ಬಿಜೆಪಿ ಕಿತ್ತಾಟ !

ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ...

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ...

ಮೇ 27ಕ್ಕೆ ಅರಣ್ಯ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಹೋರಾಟಗಾರರ ಜಂಟಿ ಸಭೆ ನಿಗದಿಗೊಳಿಸಿ...

ಪತ್ರಿಕೆ ಸೋರಿಕೆ ಖಂಡಿಸಿ ಎನ್‌ಎಸ್‌ಯುಐ ಪ್ರತಿಭಟನೆ

ಚಿಕ್ಕಮಗಳೂರು: ನೀಟ್-ಯು.ಜಿ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ನೇತೃತ್ವದಲ್ಲಿ...