Home namma chikmagalur chikamagalur ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ
chikamagalurHomeLatest Newsnamma chikmagalur

ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ

Share
Share

ಚಿಕ್ಕಮಗಳೂರು: ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆ.ಬಿ. ಹಾಳ್‌ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಕಮಲಮ್ಮ ಎಂಬುವರು ಮೇ 19ರಂದು ತಮ್ಮ ಸೊಸೆಯೊಂದಿಗೆ ಹಬ್ಬಕ್ಕಾಗಿ ಬೇಲೂರು ತಾಲೂಕಿನ ಹಳೇಬೀಡು ಹೋಬಳಿಯ ಸಾಣೇನಹಳ್ಳಿಯಲ್ಲಿರುವ ಸೊಸೆಯ ತವರುಮನೆಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಈ ಕೃತ್ಯ ಎಸಗಿದ್ದಾರೆ.

ಮೇ 24ರಂದು ಬೆಳಗ್ಗೆ ಕಮಲಮ್ಮ ಅವರ ಪಕ್ಕದ ಮನೆಯಲ್ಲೇ ವಾಸವಿರುವ ಹಿರಿಯ ಮಗ ಯೋಗೀಶ್ ಮನೆ ಬಾಗಿಲು ಮುರಿದಿರುವುದನ್ನು ಗಮನಿಸಿ ಫೋನ್ ಮೂಲಕ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದ ತಕ್ಷಣ ಸಂತ್ರಸ್ತರು ಮನೆಗೆ ಬಂದು ಪರಿಶೀಲಿಸಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮನೆಯೊಳಗೆ ನುಗ್ಗಿದ ಕಳ್ಳರು ಕಬ್ಬಿಣದ ಬೀರುವಿನ ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ಮುರಿದು, ಲಾಕರ್‌ನಲ್ಲಿದ್ದ 38,000 ರೂ ಮೌಲ್ಯದ 7 ಗ್ರಾಂ ಚಿನ್ನಾಭರಣ 2,000 ರೂ ಮೌಲ್ಯದ ಎರಡು ಜೊತೆ ಬೆಳ್ಳಿಯ ಕಾಲು ಚೈನ್ ಹಾಗೂ ದಿವಾನ್ ಕಾಟ್ ಮಾದರಿಯ ಬಾಕ್ಸ್‌ನಲ್ಲಿ ಬಟ್ಟೆಯೊಳಗೆ ಇಟ್ಟಿದ್ದ 35,000 ರೂ ನಗದು ಸೇರಿದಂತೆ ಒಟ್ಟು 75,000 ರೂ ಮೌಲ್ಯದ ಸ್ವತ್ತನ್ನು ದೋಚಿದ್ದಾರೆ.

ಕಮಲಮ್ಮ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ತಡವಾಗಿ ಠಾಣೆಗೆ ಬಂದು ದೂರು ನೀಡಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Burglary broke into a locked house by breaking the back door

Share

Leave a comment

Leave a Reply

Your email address will not be published. Required fields are marked *

Don't Miss

ಸಾವಿರಾರು ಮಂದಿಯಿಂದ ಬೃಹತ್ ಈದ್‌ಮಿಲಾದ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ೧೫೦೧ನೇ ಜನ್ಮದಿನದ ಅಂಗವಾಗಿ ಆಚರಿಸಲಾದ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ ಬುಧವಾರ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಬೃಹತ್ ಮೆರವಣಿಗೆ ನಡೆಸಿದರು. ನಗರದ ಅಂಡೇಛತ್ರದಿಂದ ಆರಂಭವಾದ...

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ ಘಟಕವು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ನೂರಾ ರು ಮಹಿಳೆಯರು ಮಂಗಳವಾರ ಪ್ರತಿಭಟಿಸುವ ಮೂಲಕ ಭರವಸೆ...

Related Articles

ಮಾಜಿ ಸರ್ಜನ್  ಕುಮಾರ್ ನಾಯಕ್ ಇನ್ನಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಮಲ್ಲೇಗೌಡ ಜನರಲ್ ಆಸ್ಪತ್ರೆಯ ಮಾಜಿ ಸರ್ಜನ್ ಕುಮಾರ್ ನಾಯಕ್ (67) ರಾತ್ರಿ...

ತಹಸೀಲ್ದಾರ್ ನಿಲುವಿನ ವಿರುದ್ಧ ಮಾಜಿ ಶಾಸಕ ಕುಮಾರಸ್ವಾಮಿ ಅಸಮಾಧಾನ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅವರು ಸಾರ್ವಜನಿಕರೊಂದಿಗೆ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,...

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಈಜಲು ತೆರಳಿದ್ದ 23 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ...

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕತ್ತು ಹಿಸುಕಿ ಹಾಗೂ ಮೂಗು–ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ...