Home namma chikmagalur chikamagalur ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಬಲಿ
chikamagalurCrime NewsHomeLatest Newsnamma chikmagalur

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಬಲಿ

Share
Share

ಚಿಕ್ಕಮಗಳೂರು: ಬೇಲಿ ದಾಟುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಬಲಿಯಾಗಿರುವ ಘಟನೆ ಕಡೂರು ತಾಲೂಕಿನ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಸನ್ನ (43) ಮೃತ ದುರ್ದೈವಿ.

ಒಂದೇ ವಾರದಲ್ಲಿ ಕಡೂರು ತಾಲೂಕಿನಲ್ಲಿ ಎರಡು ದುರಂತ ಸಂಭವಿಸಿದ್ದು ಕಳೆದ ವಾರವಷ್ಟೇ ತಾಲೂಕಿನ ಮರಡಿಹಳ್ಳಿಯಲ್ಲಿ ಹನುಮಂತಪ್ಪ ಎಂಬುವರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಾಗ ಗ್ರಾಮಸ್ಥರು ಶವವನ್ನಿಟ್ಟು ಮೆಸ್ಕಾಂ ಕಚೇರಿ ಮುಂದೆ ಭಾರಿ ಪ್ರತಿಭಟನೆ ನಡೆಸಿದ್ದರು. ಆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳ ನಿರ್ಲಕ್ಷ್ಯ ಈಗ ಮತ್ತೊಬ್ಬ ರೈತನನ್ನು ಬಲಿಪಡೆದಿದೆ.

ಖುದ್ದೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಉಸ್ತುವಾರಿ ಜಿಲ್ಲೆಯಲ್ಲೇ ವಾರದ ಅಂತರದಲ್ಲಿ ಇಂತಹ ಎರಡು ಘಟನೆಗಳು ಮರುಕಳಿಸಿರುವುದು ಮೆಸ್ಕಾಂ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಿದೆ.

ಮೃತ ಪ್ರಸನ್ನ ಅವರಿಗೆ ಕೇವಲ 5 ತಿಂಗಳ ಹೆಣ್ಣು ಮಗುವಿದ್ದು, ಮನೆಗೆ ಆಸರೆಯಾಗಿದ್ದ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Farmer dies after touching downed electric wire

Share

Leave a comment

Leave a Reply

Your email address will not be published. Required fields are marked *

Don't Miss

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ ಬಿ.ಎಸ್. ಅವರ ನೇತೃತ್ವದಲ್ಲಿ ಜುಲೈ 5, 2026ರಂದು ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಆರ್.ಸಿ....

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ ಫಾಲ್ಸ್‌ (Hebbe Falls) ಧುಮ್ಮಿಕ್ಕಿ ಹರಿಯುತ್ತಿದೆ. ಹೆಬ್ಬೆ ಜಲಪಾತದಲ್ಲಿ ಸುಮಾರು 100 ಅಡಿಗೂ ಎತ್ತರದಿಂದ...

Related Articles

ಜಿಲ್ಲಾ ಆಸ್ಪತ್ರೆಯ ಸರ್ಜನ್ ಆಗಿ ಡಾ.ದೇವರಾಜ್

ಚಿಕ್ಕಮಗಳೂರು; ಮಲ್ಲೇಗೌಡ ಜನರಲ್ ಆಸ್ಪತ್ರೆಯ ಸರ್ಜನ್ ಆಗಿ ಡಾ.ಟಿ.ಎಂ.ದೇವರಾಜ್ ನೇಮಕವಾಗಿದ್ದು ಇಂದು ಮಧ್ಯಾಹ್ನ. ಅಧಿಕಾರ ಸ್ಪೀಕಾರ...

ಭದ್ರಾ ಹುಲಿ ಸಂರಕ್ಷಿತ ಸಿಬ್ಬಂದಿಗಳಿಂದಲೇ ಮದ್ಯಪಾನ ಮೋಜು ಮಸ್ತಿ

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ವ್ಯಾಪ್ತಿಯ ತಣಿಗೆಬೈಲು ವಲಯದ, ವಿರೂಪಾಕ್ಷ ಖಾನ್ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಗಳು...

ತೋಟಕ್ಕೆ ನೀರು ಬಿಡಲು ಹೋದ ಯುವತಿ ಅಪಹರಣ

ಅಜ್ಜಂಪುರ : ಯುವತಿಯೊಬ್ಬಳನ್ನು ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋಗಿರುವ ಗಂಭೀರ ಆರೋಪ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ...

ಜೀತ ಪದ್ಧತಿ ತಡೆಗಟ್ಟಲು ಮಾಧ್ಯಮಗಳು ಜೀತ ಪದ್ಧತಿ ವರದಿ ಪ್ರಕಟಿಸಬೇಕು

ಚಿಕ್ಕಮಗಳೂರು: ಮಾನವ ಕಳ್ಳ ಸಾಗಾಣಿಕೆ ಹಾಗೂ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆ ಮತ್ತು ಜೀತ ಪದ್ಧತಿಗೆ...