Home namma chikmagalur chikamagalur ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ
chikamagalurCrime NewsHomeLatest Newsnamma chikmagalur

ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ

Share
Share

ಎನ್.ಆ‌ರ್.ಪುರ: ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನವಾಗಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೂರು ಗ್ರಾಮದ ಜಕ್ಕಣಕ್ಕಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಜಕ್ಕಣಕ್ಕಿಯ ಸರ್ವೆ ನಂ 224 ರ ತೋಟದ ಮಾಲೀಕರಾದ ಕೆ. ಪ್ರಸಾದ್ ಮೂರ್ತಿ ಅವರು ಪ್ರತಿವರ್ಷದಂತೆ ರೈತರಿಂದ ಹಸಿ ಅಡಿಕೆ ಖರೀದಿಸಿ, ಸಂಸ್ಕರಿಸಿ ಗೋಡೋನ್‌ನಲ್ಲಿ ಸಂಗ್ರಹಿಸಿಟ್ಟಿದ್ದರು. ಏಪ್ರಿಲ್ 1 ರಂದು ಗೋಡೋನ್ ಸ್ವಚ್ಛಗೊಳಿಸಿ ಬೀಗ ಹಾಕಲಾಗಿತ್ತು.

ಆದರೆ ಏಪ್ರಿಲ್ 3 ರಂದು ಸಂಜೆ ಬಾಗಿಲು ತೆಗೆದು ನೋಡಿದಾಗ ಗೋಡೋನ್‌ನ ಮೇಲ್ಬಾಗದ ಹೆಂಚುಗಳನ್ನು ತೆಗೆದಿರುವುದು ಪತ್ತೆಯಾಗಿದೆ. ಒಟ್ಟು 149 ಮೂಟೆಗಳಲ್ಲಿ 7 ಅಡಿಕೆ ಮೂಟೆಗಳು ನಾಪತ್ತೆಯಾಗಿದ್ದು, ಕಳ್ಳರು ಹೆಂಚು ತೆಗೆದು ಒಳನುಗ್ಗಿ ಮುಂಭಾಗದ ಡೋರ್ ಮೂಲಕ ಮೂಟೆಗಳನ್ನು ಸಾಗಿಸಿರುವುದು ತಿಳಿದುಬಂದಿದೆ.

ಕಳ್ಳತನವಾದ 70 ಕೆಜಿಯ 7 ಮೂಟೆಗಳ ಅಂದಾಜು ಮೌಲ್ಯ 2,50,000 ರೂಪಾಯಿಗಳಾಗಿದ್ದು, ವೈಯಕ್ತಿಕ ಕಾರಣಗಳಿಂದ ತಡವಾಗಿ ಪ್ರಸಾದ್ ಮೂರ್ತಿ ನೀಡಿದ ದೂರಿನ ಮೇರೆಗೆ ಬಾಳೆಹೊನ್ನೂರು ಪೊಲೀಸರು ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ.

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೂರು ಗ್ರಾಮದ ಜಕ್ಕಣಕ್ಕಿಯಲ್ಲಿ ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ.

ಜಕ್ಕಣಕ್ಕಿಯ ಸರ್ವೆ ನಂ 224 ರ ತೋಟದ ಮಾಲೀಕರಾದ ಕೆ. ಪ್ರಸಾದ್ ಮೂರ್ತಿ ಅವರು ಪ್ರತಿವರ್ಷದಂತೆ ರೈತರಿಂದ ಹಸಿ ಅಡಿಕೆ ಖರೀದಿಸಿ, ಸಂಸ್ಕರಿಸಿ ಗೋಡೋನ್‌ನಲ್ಲಿ ಸಂಗ್ರಹಿಸಿಟ್ಟಿದ್ದರು. ಏಪ್ರಿಲ್ 1 ರಂದು ಗೋಡೋನ್ ಸ್ವಚ್ಛಗೊಳಿಸಿ ಬೀಗ ಹಾಕಲಾಗಿತ್ತು.

ಆದರೆ ಏಪ್ರಿಲ್ 3 ರಂದು ಸಂಜೆ ಬಾಗಿಲು ತೆಗೆದು ನೋಡಿದಾಗ ಗೋಡೋನ್‌ನ ಮೇಲ್ಬಾಗದ ಹೆಂಚುಗಳನ್ನು ತೆಗೆದಿರುವುದು ಪತ್ತೆಯಾಗಿದೆ. ಒಟ್ಟು 149 ಮೂಟೆಗಳಲ್ಲಿ 7 ಅಡಿಕೆ ಮೂಟೆಗಳು ನಾಪತ್ತೆಯಾಗಿದ್ದು, ಕಳ್ಳರು ಹೆಂಚು ತೆಗೆದು ಒಳನುಗ್ಗಿ ಮುಂಭಾಗದ ಡೋರ್ ಮೂಲಕ ಮೂಟೆಗಳನ್ನು ಸಾಗಿಸಿರುವುದು ತಿಳಿದುಬಂದಿದೆ.

ಕಳ್ಳತನವಾದ 70 ಕೆಜಿಯ 7 ಮೂಟೆಗಳ ಅಂದಾಜು ಮೌಲ್ಯ 2,50,000 ರೂಪಾಯಿಗಳಾಗಿದ್ದು, ವೈಯಕ್ತಿಕ ಕಾರಣಗಳಿಂದ ತಡವಾಗಿ ಪ್ರಸಾದ್ ಮೂರ್ತಿ ನೀಡಿದ ದೂರಿನ ಮೇರೆಗೆ ಬಾಳೆಹೊನ್ನೂರು ಪೊಲೀಸರು ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ.

Areca nuts worth lakhs of rupees stolen from farm godown

Share

Leave a comment

Leave a Reply

Your email address will not be published. Required fields are marked *

Don't Miss

ಸಾವಿರಾರು ಮಂದಿಯಿಂದ ಬೃಹತ್ ಈದ್‌ಮಿಲಾದ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ೧೫೦೧ನೇ ಜನ್ಮದಿನದ ಅಂಗವಾಗಿ ಆಚರಿಸಲಾದ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ ಬುಧವಾರ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಬೃಹತ್ ಮೆರವಣಿಗೆ ನಡೆಸಿದರು. ನಗರದ ಅಂಡೇಛತ್ರದಿಂದ ಆರಂಭವಾದ...

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ ಘಟಕವು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ನೂರಾ ರು ಮಹಿಳೆಯರು ಮಂಗಳವಾರ ಪ್ರತಿಭಟಿಸುವ ಮೂಲಕ ಭರವಸೆ...

Related Articles

ಮಾಜಿ ಸರ್ಜನ್  ಕುಮಾರ್ ನಾಯಕ್ ಇನ್ನಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಮಲ್ಲೇಗೌಡ ಜನರಲ್ ಆಸ್ಪತ್ರೆಯ ಮಾಜಿ ಸರ್ಜನ್ ಕುಮಾರ್ ನಾಯಕ್ (67) ರಾತ್ರಿ...

ತಹಸೀಲ್ದಾರ್ ನಿಲುವಿನ ವಿರುದ್ಧ ಮಾಜಿ ಶಾಸಕ ಕುಮಾರಸ್ವಾಮಿ ಅಸಮಾಧಾನ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅವರು ಸಾರ್ವಜನಿಕರೊಂದಿಗೆ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,...

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಈಜಲು ತೆರಳಿದ್ದ 23 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ...

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕತ್ತು ಹಿಸುಕಿ ಹಾಗೂ ಮೂಗು–ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ...