Home namma chikmagalur chikamagalur ರಸ್ತೆ ಅಪಘಾತದಲ್ಲಿ ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು
chikamagalurCrime NewsHomeLatest Newsnamma chikmagalur

ರಸ್ತೆ ಅಪಘಾತದಲ್ಲಿ ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Share
Share

ಕೊಪ್ಪ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಹಮ್ಮದ್ ರಫೀಕ್ ಎಂಬ 32 ವರ್ಷದ ಯುವಕ ದುರಂತ ಅಂತ್ಯ ಕಂಡಿರುವ ಘಟನೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಹೊನಗೋಡಿನ ದೇವಸ್ಥಾನದ ಬಳಿ ಮೇ 25 ರಂದು ಹರಿಹರಪುರದ ಮತ್ವಾನಿಯಲ್ಲಿರುವ ನಾದಿನಿಯ ಮನೆಗೆ ಸ್ಕೂಟಿಯಲ್ಲಿ ಬಂದಿದ್ದ ರಫೀಕ್, ಮರುದಿನ ಬೆಳಗಿನ ಜಾವ ಶೃಂಗೇರಿಯ ತಮ್ಮ ಮನೆಗೆ ವಾಪಸ್ ಹೊರಟಿದ್ದರು.

ಈ ವೇಳೆ ಹೊನಗೋಡು ರಸ್ತೆಯಲ್ಲಿ ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದ ಅಪರಿಚಿತ ವಾಹನವೊಂದು ಇವರ ಸ್ಕೂಟಿಗೆ ಜೋರಾಗಿ ಡಿಕ್ಕಿ ಹೊಡೆದು, ಗಾಯಾಳುವನ್ನು ಉಪಚರಿಸದೆ ಸ್ಥಳದಿಂದ ಪರಾರಿಯಾಗಿದೆ.

ಅಪಘಾತದಿಂದ ತಲೆ ಹಾಗೂ ಕಾಲಿಗೆ ತೀವ್ರ ಪೆಟ್ಟಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರಫೀಕ್ ಅವರನ್ನು ಆ ಮಾರ್ಗವಾಗಿ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಸಹೃದಯಿ ಪ್ರವಾಸಿಗರು ಗಮನಿಸಿ, ತಕ್ಷಣ ತಮ್ಮದೇ ವಾಹನದಲ್ಲಿ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶೃಂಗೇರಿಯ ಶ್ರೀ ಅಭಿನವ ವಿದ್ಯಾ ತೀರ್ಥ ಆಸ್ಪತ್ರೆಗೆ ತಕ್ಷಣವೇ ಅಂಬುಲೆನ್ಸ್ ಮೂಲಕ ಕರೆದೊಯ್ಯಲಾಯಿತಾದರೂ, ಬೆಳಿಗ್ಗೆ ಸುಮಾರು 6-30 ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಕೊನೆಯುಸಿರೆಳೆದಿದ್ದಾರೆ.

ಮೃತರ ತಂದೆ ಅಬ್ದುಲ್ ರಹೀಂ ನೀಡಿದ ಲಿಖಿತ ದೂರಿನನ್ವಯ ಹರಿಹರಪುರ ಪೊಲೀಸರು ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತ ಎಸಗಿ ಮಾನವೀಯತೆಯೇ ಇಲ್ಲದೆ ಓಡಿಹೋದ ಅಪರಿಚಿತ ವಾಹನ ಮತ್ತು ಅದರ ಚಾಲಕನ ಪತ್ತೆಗಾಗಿ ತೀವ್ರ ಜಾಲ ಬೀಸಿದ್ದಾರೆ.

Man injured in road accident dies due to lack of treatment

Share

Leave a comment

Leave a Reply

Your email address will not be published. Required fields are marked *

Don't Miss

ಸಾವಿರಾರು ಮಂದಿಯಿಂದ ಬೃಹತ್ ಈದ್‌ಮಿಲಾದ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ೧೫೦೧ನೇ ಜನ್ಮದಿನದ ಅಂಗವಾಗಿ ಆಚರಿಸಲಾದ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ ಬುಧವಾರ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಬೃಹತ್ ಮೆರವಣಿಗೆ ನಡೆಸಿದರು. ನಗರದ ಅಂಡೇಛತ್ರದಿಂದ ಆರಂಭವಾದ...

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ ಘಟಕವು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ನೂರಾ ರು ಮಹಿಳೆಯರು ಮಂಗಳವಾರ ಪ್ರತಿಭಟಿಸುವ ಮೂಲಕ ಭರವಸೆ...

Related Articles

ಮಾಜಿ ಸರ್ಜನ್  ಕುಮಾರ್ ನಾಯಕ್ ಇನ್ನಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಮಲ್ಲೇಗೌಡ ಜನರಲ್ ಆಸ್ಪತ್ರೆಯ ಮಾಜಿ ಸರ್ಜನ್ ಕುಮಾರ್ ನಾಯಕ್ (67) ರಾತ್ರಿ...

ತಹಸೀಲ್ದಾರ್ ನಿಲುವಿನ ವಿರುದ್ಧ ಮಾಜಿ ಶಾಸಕ ಕುಮಾರಸ್ವಾಮಿ ಅಸಮಾಧಾನ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅವರು ಸಾರ್ವಜನಿಕರೊಂದಿಗೆ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,...

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಈಜಲು ತೆರಳಿದ್ದ 23 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ...

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕತ್ತು ಹಿಸುಕಿ ಹಾಗೂ ಮೂಗು–ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ...