ಚಿಕ್ಕಮಗಳೂರು: ಸಂವಿಧಾನ, ಪ್ರಜಾತಂತ್ರ, ಜನವಿರೋಧಿ ಆಗಿರುವ ಸರ್ವಾಧಿಕಾರಿ ಗುಣವಿರುವ ಎಸ್.ಐ.ಆರ್ ರದ್ಧಾಗಬೇಕು ಸಂವಿಧಾನ ಬದ್ಧವಾದ, ಜನಸ್ನೇಹಿಯಾದ ಐ.ಆರ್ ತೀವ್ರ ಪರಿಷ್ಕರಣೆ ಮೂಲಕ ಜಾರಿಗೆ ತರಬೇಕು ಎಂದು ಆಗ್ರಹಿಸಿ ಇಂದು ಪ್ರಗತಿ ಸಂಘಟನೆಗಳ ಹಾಗೂ ಜಾತ್ಯಾತೀತ ಪಕ್ಷಗಳ ಒಕ್ಕೂಟ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾ ಸತ್ಯಾಗ್ರಹ ನೆಡೆಸಿದರು.
ಇಂದು ಬೆಳಿಗ್ಗೆ ಆಜಾದ್ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಎಸ್.ಐ.ಆರ್ ಎಂಬ ಅಸಂವಿಧಾನಿಕ, ಅವೈಜ್ಞಾನಿಕ, ದೋಷಪೂರಿತ ಮತ್ತು ದುರುದ್ದೇಶಪೂರಿತ ಮತದಾರರ ಪಟ್ಟಿಯ ಪರಿಷ್ಕರಣಾ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಆಗ್ರಹಿಸಿದರು,
ಭಾರತದ ಪ್ರತಿಯೊಬ್ಬ ನಾಗರೀಕನನ್ನು ಮುಕ್ತವಾಗಿ ಹಾಗೂ ಪಾರದರ್ಶಕವಾಗಿ ಒಳಗೊಳ್ಳುವ ರೀತಿಯಲ್ಲಿ ನೆಡೆಸಬೇಕು, ಇಡೀ ಚುನಾವಣಾ ಪ್ರಕ್ರಿಯೆಯನ್ನೇ ಅಪಹರಿಸಲು ಮುಂದಾಗಿರುವ ಇ.ಸಿ.ಐ ಆಯ್ಕೆ ವಿಧಾನ, ವಿ.ವಿ.ಎಂ ಮುಂತಾದ ಕಬಂಧ ಬಾಹುಗಳಿಂದ ಮುಕ್ತಿ ದೊರಕಬೇಕು ಎಂದು ಒತ್ತಾಯಿಸಿದರು.
ಈ ಪ್ರಕ್ರಿಯೆಯನ್ನು ವ್ಯವದಾನದ ಜೊತೆ ನೆಡೆಸಬೇಕು ಕನಿಷ್ಠ ೧ ವರ್ಷದ ಅವಧಿ ನಿಗದಿಮಾಡಬೇಕು, ೬ ತಿಂಗಳು ಮನೆ-ಮನೆಗೆ ಹೋಗಿ ಮತದಾರರ ಪಟ್ಟಿ ಪರಿಷ್ಕರಣೆ ನೆಡೆಸಬೇಕು, ಕರಡುಪಟ್ಟಿ ತಯಾರಾದ ಮೇಲೆ ತಿದ್ದುಪಡಿ ಸಲ್ಲಿಸಲು ಜನರಿಗೆ ಕನಿಷ್ಠ ೬ ತಿಂಗಳ ಸಮಯಾವಕಾಶ ನೀಡಬೇಕೆಂಬ ಬೇಡಿಕೆಯು ಸೇರಿದಂತೆ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಗೆ ಕನಿಷ್ಠ ೭ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಪ್ರತಿಭಟನೆಯಲ್ಲಿ ಎದ್ದೇಳು ಕರ್ನಾಟಕದ ಜಿಲ್ಲಾಧ್ಯಕ್ಷ ಟಿ.ಎಲ್ ಗಣೇಶ್, ರಾಜ್ಯ ಸಂಚಾಲಕ ಗೌಸ್ ಮೊಹಿದ್ದೀನ್, ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಯೂಸುಫ್ಹಾದಿ, ಮಂಜು, ಉಪಸ್ಥಿತರಿದ್ದರು.
Protest demanding repeal of unconstitutional SIR
Leave a comment