Home namma chikmagalur chikamagalur ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ
chikamagalurHomeLatest Newsnamma chikmagalur

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

Share
Oplus_16908288
Share

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಕರೆದಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಚಿಕ್ಕಮಗಳೂರು ಶಾಖೆಗೆ ನೂತನವಾಗಿ ಡಿ.ರಾಮೇಗೌಡರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದಾಗಿ ಕೆಲವರು ಪತ್ರಿಕಾ ಗೋಷ್ಠಿ ನಡೆಸಿರುವುದು ನಿಯಮ ಬಾಹಿರವಾಗಿದೆ ಎಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇವೆ ಎಂದರು.

ತಾಲ್ಲೂಕು ಅಧ್ಯಕ್ಷರಾಗಿದ್ದ ವೈ.ಸಿ.ಸುನಿಲ್ ಕುಮಾರ್ ರವರ ಮೇಲೆ ಕೆಲವು ಆರೋಪಗಳಿದ್ದು, ಆರೋಪಗಳ ಬಗ್ಗೆ ಸ್ಪಷ್ಟಿಕರಣ ಕೇಳಲು ಜಿಲ್ಲಾ ಸಮಿತಿ ಸಭೆ ತೀರ್ಮಾನಿಸಿತ್ತು. ಅದರಂತೆ ಜಿಲ್ಲಾ ಸಮಿತಿ ಸುನಿಲ್ ಕುಮಾರ್ ರವರಿಗೆ ರಿಜಿಸ್ಟರ್ ಅಂಚೆ ಪತ್ರದ ಮೂಲಕ ನೋಟಿಸು ಜಾರಿ ಮಾಡಲಾಗಿತ್ತು. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಸುನಿಲ್ ಕುಮಾರ್ ಅನಾರೋಗ್ಯದ ಕಾರಣ ನೀಡಿ ರಾಜಿನಾಮೆ ನಾಟಕ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.

ಕೆ.ಕೆ.ಕೃಷ್ಣಗೌಡರು ಸಂಘಟನೆಯಲ್ಲಿ ಬಹಳ ಕಾಲ ಇರುವವರು ಸಂಘಟನೆಯ ನಿಯಮಾವಳಿಗಳು ಕೃಷ್ಣಗೌಡರಿಗೆ ತಿಳಿದಿದ್ದರೂ ಯಾರೊ ಬೆರಳೆಣಿಕೆ ಜನರನ್ನು ಕೂರಿಸಿಕೊಂಡು ಅಸ್ಥಿತ್ವದಲ್ಲಿರುವ ತಾಲ್ಲೂಕು ಸಮಿತಿ ಗಮನಕ್ಕೂ ಬಾರದೆ ತಾಲ್ಲೂಕು ಸಮಿತಿ ಅಧ್ಯಕ್ಷರನ್ನು ಘೋಷಣೆ ಮಾಡಿರುವುದು ನಿಯಮ ಬಾಹಿರವಾಗಿದೆ ಎಂದು ಹೇಳಿದರು.

ಈ ವಿಚಾರವನ್ನು ರಾಜ್ಯ ಸಮಿತಿ ಗಮನಕ್ಕೆ ತರಲಾಗಿದ್ದು ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲವೆಂದು ರಾಜ್ಯಾಧ್ಯಕ್ಷರು ತಿಳಿಸಿರುತ್ತಾರೆ. ಈ ಕಾರಣದಿಂದ ಕೂಡಲೆ ಜಾರಿಗೆ ಬರುವಂತೆ ಸಂಪೂರ್ಣ ತಾಲ್ಲೂಕು ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ. ಹಾಗೂ ಮತ್ತಾವರ ಜಯರಾಂರವರನ್ನು ತಾಲ್ಲೂಕು ಸಂಚಾಲಕರಾಗಿ ನೇಮಕ ಮಾಡಿದ್ದು ಮುಂದಿನ ತಾಲ್ಲೂಕು ಸಮಿತಿ ಸಭೆ ಕರೆಯುವ ಜವಬ್ದಾರಿಯನ್ನು ನೀಡಲಾಗಿದೆ ಅಲ್ಲಿ ತಾಲ್ಲೂಕು ಸಮಿತಿ ರಚನೆ ಮಾಡಲಾಗುವುದು ಎಂದರು.

ಸುದ್ದಿಗೋಷ್ಟಿಯಲ್ಲಿ ಗೌರವಾಧ್ಯಕ್ಷ ಬಿ.ಸಿ. ಬಸವರಾಜು, ಮಾಜಿ ಅಧ್ಯಕ್ಷ ಗುರುಶಾಂತಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಾಶೇಖರ್, ದೇವರಾಜ್, ಶಿವಣ್ಣ, ಜಯರಾಂ, ಕುಮಾರಸ್ವಾಮಿ ಇದ್ದರು.

Appointment of president of taluk unit of farmers’ association is illegal

Share

Leave a comment

Leave a Reply

Your email address will not be published. Required fields are marked *

Don't Miss

ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು

ಚಿಕ್ಕಮಗಳೂರು: ಪರಿಶಿಷ್ಟಜಾತಿ,ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರು, ನಿವೃತ್ತ ಸರ್ಕಾರಿ ನೌಕರ ಸಂಘದವರು ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆಲಸ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುವ ಎನ್.ಎಂ. ನಾಗರಾಜ್...

ಗ್ರಾಮಲೆಕ್ಕಿಗನಿಗೆ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚನೆ

ಚಿಕ್ಕಮಗಳೂರು : ಗ್ರಾಮಲೆಕ್ಕಿಗರೊಬ್ಬರಿಗೆ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ ಲಾಭಮಾಡಿಕೊಡುವ ಆಮಿಷವೊಡ್ಡಿದ ಬ್ಯಾಂಕ್ ಉದ್ಯೋಗಿಯೊಬ್ಬ ೪೫.೨೦ ಲಕ್ಷ ಹಣಕ್ಕೆ ೫೦ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚಿಸಿರುವ ಬಗ್ಗೆ...

Related Articles

ಸಿದ್ದು ಮೌನಂ ಸಮ್ಮತಿ ಯಾವಾಗ ಸ್ಪೋಟಿಸುತ್ತದೆ ?

ಕರ್ನಾಟಕದ ರಾಜಕಾರಣದಲ್ಲಿ ಇಂತಹ ಬೆಳವಣಿಗೆ ನಡೆಯ ಬಹುದು ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. 2013...

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು...

ಸಂವಿಧಾನ ವಿರೋಧಿ ಎಸ್.ಐ.ಆರ್ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಸಂವಿಧಾನ, ಪ್ರಜಾತಂತ್ರ, ಜನವಿರೋಧಿ ಆಗಿರುವ ಸರ್ವಾಧಿಕಾರಿ ಗುಣವಿರುವ ಎಸ್.ಐ.ಆರ್ ರದ್ಧಾಗಬೇಕು ಸಂವಿಧಾನ ಬದ್ಧವಾದ, ಜನಸ್ನೇಹಿಯಾದ...

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ-ವೃದ್ಧ ಸಾವು

ಕಡೂರು: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಹೆಚ್ಚಿನ ಚಿಕಿತ್ಸೆಗಾಗಿ...