Home namma chikmagalur chikamagalur ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ
chikamagalurHomeLatest Newsnamma chikmagalur

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

Share
Share

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ.

ಮಧ್ಯರಾತ್ರಿ 1ಗಂಟೆ ಸುಮಾರಿಗೆ ಮಳೆ ಆರಂಭವಾಯಿತು. ಮಳೆಗಿಂತ ಬಿರುಗಾಳಿಯೇ ಜೋರಾಗಿತ್ತು. ಜತೆಗೆ ಗುಡುಗು ಮತ್ತು ಸಿಡಿಲಿನ ಅಬ್ಬರ ಜನರನ್ನು ಆತಂಕಗೊಳಿಸಿತು.

ನಗರದ ಕೋಟೆ ಬಡಾವಣೆ, ಹೊಸಮನೆ, ಜಯನಗರ, ಬೈಪಾಸ್ ರಸ್ತೆ, ಜ್ಯೋತಿನಗರದಲ್ಲಿ ದೊಡ್ಡ ಮರಗಳು ನೆಲಕ್ಕೆ ಉರುಳಿದವು. ಮರಗಳು ಬೀಳುವಾಗ ವಿದ್ಯುತ್ ತಂತಿಗಳು ಸಿಕ್ಕಿಕೊಂಡು ಕಂಬಗಳು ಮುರಿದು ಬಿದ್ದವು. ಅವುಗಳನ್ನು ತೆರವುಗೊಳಿಸುವ ಕಾರ್ಯ ಶನಿವಾರ ಸಂಜೆ ತನಕವೂ ನಡೆಯಿತು.

ಒಂದೇ ಗಂಟೆ ಮಳೆಗೆ ನಗರದಲ್ಲಿ 25 ವಿದ್ಯುತ್ ಕಂಬಗಳು, 16 ಮರಗಳು, 2 ವಿದ್ಯುತ್ ಪರಿವರ್ತಕಗಳು ಧರೆಗೆ ಉರುಳಿದ್ದವು. ನಗರಸಭೆ, ಮೆಸ್ಕಾಂ, ಅರಣ್ಯ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದರು. ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ, ನಗರಸಭೆ ಅಧ್ಯಕ್ಷೆ ಭವ್ಯಾ ಮಂಜುನಾಥ್, ಆಯುಕ್ತ ಬಿ.ಸಿ. ಬಸವರಾಜ್‌, ತಹಶೀಲ್ದಾರ್ ರೇಷ್ಮಾಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಜಿಲ್ಲಾ ಆಟದ ಮೈದಾನದ ವ್ಯಾಯಾಮ ಶಾಲೆಯ ಮೇಲ್ಬಾಗದ ಕೊಠಡಿಯ ಶೀಟುಗಳು ಹಾರಿ ಹೋಗಿವೆ. ಎಚ್.ಸಿ. ಸುರೇಂದ್ರಗೌಡ ಅವರ ಮನೆಗೆ ಸಿಡಿಲು ಬಡಿದು ಚಾವಣಿಗೆ ಹಾನಿಯಾಗಿದೆ. ಚಾವಣಿಯ ಹೆಂಚು ಮನೆಯ ಮಲಗುವ ಕೋಣೆಯ ತುಂಬಾ ತುಂಬಿಕೊಂಡಿದ್ದವು. ಮಳೆ ಬಂದಾಗ ದಂಪತಿ ಎಚ್ಚರವಾಗಿದ್ದರಿಂದ ಮನೆಯಲ್ಲಿದ್ದವರಿಗೆ ತೊಂದರೆಯಾಗಿಲ್ಲ.

ಜ್ಯೋತಿ ನಗರದಲ್ಲಿರುವ ಕ್ರೀಡಾ ಇಲಾಖೆ ಆವರಣದಲ್ಲಿನ ವಸತಿ ನಿಲಯದ ಪಕ್ಕದ ಮರವೊಂದು ಮನೆಯೊಂದರ ಮೇಲೆ ಬಿದ್ದಿದೆ. ಸ್ಥಳಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಸಿ. ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಮಗಳೂರು ಕ್ಲಬ್ ಕಾಂಪೌಂಡ್ ಮೇಲೆ ದೊಡ್ಡ ಮರವೊಂದು ಬಿದ್ದು, ಗೋಡೆ ಕುಸಿದಿದೆ. ನಗರದ ಸುತ್ತಮುತ್ತಲ ಗ್ರಾಮಗಳಾದ ಹಿರೇಗೌಜ, ಕೆಂಗನಹಳ್ಳಿ, ಕರಿಸಿದ್ದನಹಳ್ಳಿ ಸೇರಿ ಹಲವೆಡೆ ಮನೆಗಳ ಹೆಂಚು ಹಾರಿ ಹೋಗಿವೆ.

The entire city is shaken by heavy rain and thunder.

Share

Leave a comment

Leave a Reply

Your email address will not be published. Required fields are marked *

Don't Miss

ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು

ಚಿಕ್ಕಮಗಳೂರು: ಪರಿಶಿಷ್ಟಜಾತಿ,ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರು, ನಿವೃತ್ತ ಸರ್ಕಾರಿ ನೌಕರ ಸಂಘದವರು ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆಲಸ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುವ ಎನ್.ಎಂ. ನಾಗರಾಜ್...

ಗ್ರಾಮಲೆಕ್ಕಿಗನಿಗೆ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚನೆ

ಚಿಕ್ಕಮಗಳೂರು : ಗ್ರಾಮಲೆಕ್ಕಿಗರೊಬ್ಬರಿಗೆ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ ಲಾಭಮಾಡಿಕೊಡುವ ಆಮಿಷವೊಡ್ಡಿದ ಬ್ಯಾಂಕ್ ಉದ್ಯೋಗಿಯೊಬ್ಬ ೪೫.೨೦ ಲಕ್ಷ ಹಣಕ್ಕೆ ೫೦ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚಿಸಿರುವ ಬಗ್ಗೆ...

Related Articles

ಸಿದ್ದು ಮೌನಂ ಸಮ್ಮತಿ ಯಾವಾಗ ಸ್ಪೋಟಿಸುತ್ತದೆ ?

ಕರ್ನಾಟಕದ ರಾಜಕಾರಣದಲ್ಲಿ ಇಂತಹ ಬೆಳವಣಿಗೆ ನಡೆಯ ಬಹುದು ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. 2013...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ...

ಸಂವಿಧಾನ ವಿರೋಧಿ ಎಸ್.ಐ.ಆರ್ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಸಂವಿಧಾನ, ಪ್ರಜಾತಂತ್ರ, ಜನವಿರೋಧಿ ಆಗಿರುವ ಸರ್ವಾಧಿಕಾರಿ ಗುಣವಿರುವ ಎಸ್.ಐ.ಆರ್ ರದ್ಧಾಗಬೇಕು ಸಂವಿಧಾನ ಬದ್ಧವಾದ, ಜನಸ್ನೇಹಿಯಾದ...

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ-ವೃದ್ಧ ಸಾವು

ಕಡೂರು: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಹೆಚ್ಚಿನ ಚಿಕಿತ್ಸೆಗಾಗಿ...