Home namma chikmagalur chikamagalur ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ
chikamagalurHomeLatest Newsnamma chikmagalur

ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ

Share
Oplus_131072
Share

ಮೂಡಿಗೆರೆ: ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಿವೇಶನ ರಹಿತರು ನಿವೇಶನಕ್ಕಾಗಿ ಒತ್ತಾಯಿಸಿ ಶುಕ್ರವಾರ ಆರಂಭಗೊಂಡ ಧರಣಿ ಸೋಮವಾರ ೪ನೇ ದಿನ ಮುಂದುವರೆಯಿತು.

ಈ ಸಂದರ್ಭದಲ್ಲಿ ಟಿಯುಸಿಐ ಜಿಲ್ಲಾಧ್ಯಕ್ಷ ಕೆ.ಕೆ.ಕೃಷ್ಣಪ್ಪ ಮಾತನಾಡಿ, ಕಳೆದ ೧೦ ವರ್ಷದ ಹಿಂದೆ ನಿವೇಶನಕ್ಕಾಗಿ ಕಾಯ್ದಿರಿಸಿದ್ದ ತಾಲೂಕಿನ ಮಣ್ಣಿಕೆರೆ ಗ್ರಾಮದ ಸರ್ವೇ ನಂಬರ್ ೧೪೪ ರಲ್ಲಿ ೩.೨೦ ಎಕರೆ ಸರಕಾರಿ ಭೂಮಿಯಲ್ಲಿ ನಿವೇಶನ ರಹಿತರಿಗೆ ಇಂದಿಗೂ ಫಲಾನುಭವಿಗಳ ಪಟ್ಟಿ ತಯಾರಿಸಿಲ್ಲ. ಧರಣಿ ಪ್ರಾರಂಭಿಸಿ ೪ ದಿನವಾಗಿದೆ.

ತಾ.ಪಂ. ಇಒ ದಯಾವತಿ ಸ್ಥಳಕ್ಕೆ ಭೇಟಿ ನೀಡಿ ಹೋಗಿದ್ದು ಬಿಟ್ಟರೆ, ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇಲ್ಲಿ ಪ್ರಭಾವಿ ವ್ಯಕ್ತಿಯೋರ್ವರು ಮನೆ ಕಟ್ಟಿಕೊಳ್ಳಲು ಬಿಟ್ಟಿದ್ದಾರೆ. ಆದರೆ ನಮಗೆ ಮಾತ್ರ ತೆರವು ಮಾಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು.

ಕೆಲವರು ಹೋರಾಟದ ದಿಕ್ಕು ತಪ್ಪಿಸಲು ನಿವೇಶನ ರಹಿತರಿಗೆ ಆಮಿಷ ಒಡ್ಡುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಯಾರೂ ಬಗ್ಗುವುದಿಲ್ಲ. ಈಗಾಗಲೇ ನಮ್ಮ ಹೋರಾಟಕ್ಕೆ ವಿವಿಧ ಪಕ್ಷ ಹಾಗೂ ಸಂಘಟನೆಗಳು ಸಂಪೂರ್ಣ ಬೆಂಬಲ ಸೂಚಿಸಿದ್ದು, ಇದರಿಂದ ಹೋರಾಟಕ್ಕೆ ಇನ್ನಷ್ಟು ಬಲ ಸಿಕ್ಕಿದೆ. ನಮ್ಮ ನ್ಯಾಯಯುತ ಹೋರಾಟಕ್ಕೆ ಜಯ ಸಿಗುವವರೆಗೂ ಧರಣಿ ಹಿಂಪಡೆಯುವುದಿಲ್ಲವೆಂದು ಹೇಳಿದರು.

ಎಸ್‌ಡಿಪಿಐ ತಾಲೂಕು ಅಧ್ಯಕ್ಷ ಅಂಗಡಿ ಚಂದ್ರು, ಭೀಮ ಆರ್ಮಿಯ ಹಾದಿಗೆ ಜಯಕುಮಾರ್, ಖಾಲಿದ್, ಚಂದ್ರು, ನಾಗೇಶ್ ಸಾಲುಮರ, ಆದಾಮ್, ಹನೀಫ್, ಯಶೊಧ, ಜಾನಕಿ, ಸವಿತ, ಕೃಷ್ಣ ಕಮ್ಮರಗೂಡು, ರವಿ ಶುಭನಗರ, ರೋಜಿ ಮತ್ತಿತರರಿದ್ದರು.

Protest demanding land in Mannikere village continues for 4th day

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...