Home namma chikmagalur chikamagalur ರೈತ ಸಂಘದ ಡಿ.ರಾಮೇಗೌಡ ಕಲ್ಲಹಳ್ಳಿ ಆಯ್ಕೆ ಕ್ರಮಬದ್ಧ
chikamagalurHomeLatest Newsnamma chikmagalur

ರೈತ ಸಂಘದ ಡಿ.ರಾಮೇಗೌಡ ಕಲ್ಲಹಳ್ಳಿ ಆಯ್ಕೆ ಕ್ರಮಬದ್ಧ

Share
Share

ಚಿಕ್ಕಮಗಳೂರು: ತಾಲ್ಲೂಕು ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ತಾಲ್ಲೂಕು ಸಮಿತಿಯ ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳ ನಿರ್ಣಯದಂತೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಡಿ.ರಾಮೇಗೌಡ ಕಲ್ಲಹಳ್ಳಿ ಅವರ ಆಯ್ಕೆ ಕ್ರಮಬದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಕೆ.ಕೆ.ಕೃಷ್ಣಗೌಡ ಹೇಳಿದರು.

ಚಿಕ್ಕಮಗಳೂರು ತಾಲ್ಲೂಕು ಸಮಿತಿಯಲ್ಲಿ ನಿಷ್ಕ್ರಿಯರಾಗಿರುವ ಒಂದಿಬ್ಬರು ಪದಾಧಿಕಾರಿಗಳನ್ನು ಕೈ ಬಿಟ್ಟು ಸಂಘದ ಬಲವರ್ಧನೆಗಾಗಿ ಸದ್ಯದಲ್ಲೇ ಸಮಿತಿಯನ್ನು ಪುನ‌ರ್ ರಚಿಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಹಾಲಿ ಜಿಲ್ಲಾ ಘಟಕದ ಅಧ್ಯಕ್ಷರ ಹುದ್ದೆ ಕ್ರಮಬದ್ಧ ಅಲ್ಲ. ಕೆಲವು ತಾಲ್ಲೂಕುಗಳಲ್ಲಿ ಸಮಿತಿಯೇ ಇಲ್ಲ. ಜಿಲ್ಲಾ ಘಟಕದ ಅಧ್ಯಕ್ಷರಿಗೆ ಸಂಘದ ಬಲವರ್ಧನೆಯ ಬಗ್ಗೆ ಆಸಕ್ತಿ ಇಲ್ಲ. ಕೆಲವು ಮಾಲೀಕತ್ವದ ಮನೋಭಾವನೆಯ ಹಿರಿಯ ನಾಯಕರು ಹಾಗೂ ನೆನ್ನೆ ಮೊನ್ನೆ ಬಂದ ಕೆಲವು ಕಾರ್ಯಕರ್ತರಿಂದ ಸಂಘದ ಸಿದ್ದಾಂತವನ್ನು ಉಲ್ಲಂಘಿಸಿ ರಚನೆ ಮಾಡಿಕೊಂಡ ಜಿಲ್ಲಾ ಘಟಕದ ಅಧ್ಯಕ್ಷರ ನಿಯಮಬಾಹಿರ ಗುಂಪು ಎಂದು ಸಾಬೀತುಪಡಿಸುತ್ತೇವೆ. ಈ ಬಗ್ಗೆ ಬಹಿರಂಗವಾಗಿ ಚರ್ಚೆಗೆ ಬರಲಿ ಎಂದು ಹೇಳಿದರು.

ಜಾತ್ಯತೀತ ಸೈದ್ಧಾಂತಿಕ, ಸಂಘದ ಸಿದ್ಧಾಂತ, ರಾಜ್ಯ ಘಟಕದ ಅಧ್ಯಕ್ಷರ ಆದೇಶ ಎಂಬ ಶಬ್ದ ಬಳಸಿ ಮಾಧ್ಯಮಗಳ ಮೂಲಕ ಸಾರ್ವಜನಿಕರನ್ನು ನಂಬಿಸುವುದು, ತೋರಿಕೆ ಹೋರಾಟ ನಡೆಸುವುದು ಮತ್ತು ಸಂಘದ ಪ್ರಾಮಾಣಿಕ ಪದಾಧಿಕಾರಿಗಳನ್ನು ಪ್ರತಿಸ್ಪರ್ಧಿ ಎಂದು ಭಾವಿಸಿ ಅವರ ಮೇಲೆ ಸುಳ್ಳು ಆರೋಪ ಹೊರಿಸಿ ತೇಜೋವಧೆ ಮಾಡುವುದು, ಕಾರಣ ಕೇಳದೆ ತಾಲ್ಲೂಕು ಅಧ್ಯಕ್ಷರನ್ನು ಮತ್ತು ಸಮಿತಿಯನ್ನು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ಕೊಡುವ ಮೂಲಕ ವಜಾಗೊಳಿಸುವುದು ಸಂಘದ ಸಿದ್ಧಾಂತವೇ ಎಂದು ಪ್ರಶ್ನಿಸಿದರು.

ಚಳವಳಿಗಳನ್ನು ರೂಪಿಸುವುದಾಗಿ ಹೇಳಿಕೆ ನೀಡಿ ದಿನಾಂಕ ನಿಗದಿ ಮಾಡಿ ನಂತರ ಚಳವಳಿಯಿಂದ ಹಿಂದೆ ಸರಿಯಲು ಕಾರಣವೇನು. ಆ ಬಗ್ಗೆ ಚರ್ಚಿಸಲು ಜಿಲ್ಲಾಧ್ಯಕ್ಷರ ಗುಂಪು ಬಹಿರಂಗವಾಗಿ ಆಹ್ವಾನಿಸಲಿ ಎಂದು ಹೇಳಿದರು. ಈಗಾಗಲೇ ಜಿಲ್ಲೆಯ ಕೆಲವು ತಾಲ್ಲೂಕುಗಳ ಪ್ರಾಮಾಣಿಕ ಪದಾಧಿಕಾರಿಗಳು ಜಿಲ್ಲಾಧ್ಯಕ್ಷರ ಗುಂಪಿನ ವರ್ತನೆಗೆ ಬೇಸತ್ತು ಸಂಘದಿಂದ ದೂರ ಸರಿಯುತ್ತಿದ್ದಾರೆ. ಜಿಲ್ಲಾಧ್ಯಕ್ಷರು ಕಷ್ಟದಿಂದ ಬಳಲಿ ಬಂದ ರೈತರನ್ನೇ ಅನಿವಾರ್ಯವಾಗಿ ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಉಪಾಧ್ಯಕ್ಷ ಪರ್ವತೇಗೌಡ, ಚಂದ್ರಶೇಖರ್, ಮುಳ್ಳುಂಡಪ್ಪ, ಕಾಂತರಾಜ್, ಲೋಕೇಶ್, ರಾಮೇಗೌಡ ಭಾಗವಹಿಸಿದ್ದರು.

Farmers’ Association’s D. Ramegowda Kallahalli election formalized

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...