Home namma chikmagalur chikamagalur ಸ್ನೇಹಿತರ ಮದುವೆ ಪತ್ರಿಕೆ ಹಂಚಲು ಹೋದ ಯುವಕ ನಾಪತ್ತೆ
chikamagalurHomeLatest Newsnamma chikmagalur

ಸ್ನೇಹಿತರ ಮದುವೆ ಪತ್ರಿಕೆ ಹಂಚಲು ಹೋದ ಯುವಕ ನಾಪತ್ತೆ

Share
Share

ತರೀಕೆರೆ: ತಾಯಿಗೆ ಆಶಾಕಿರಣವಾಗಿದ್ದ ಮಗ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ರಶೀದಾ ಅವರ ಏಕೈಕ ಪುತ್ರ, 23 ವರ್ಷದ ಸಾದಿಕ್ ನಾಪತ್ತೆಯಾದ ಯುವಕ.

ವಿದ್ಯಾಭ್ಯಾಸ ಮುಗಿಸಿಕೊಂಡು ತಾಯಿಯ ಜೊತೆಯಲ್ಲೇ ಇದ್ದ ಸಾದಿಕ್ ಜೂನ್ 1ರಂದು ಮನೆಯಿಂದ ಹೊರಟವನು ಮರಳಿ ಬಂದಿಲ್ಲ. ಅಂದು ಮಧ್ಯಾಹ್ನ ತಾಯಿ ರಶೀದಾ ಸಂಬಂಧಿಕರ ಮದುವೆ ಮುಗಿಸಿಕೊಂಡು ಬಂದಾಗ ಮನೆಗೆ ಬೀಗ ಹಾಕಲಾಗಿತ್ತು.

ತಕ್ಷಣ ಮಗನ ಮೊಬೈಲ್‌ಗೆ ಕರೆ ಮಾಡಿದಾಗ, ಆತನ ಸ್ನೇಹಿತ ಮುಸ್ಪೀರ್ ಕರೆ ಸ್ವೀಕರಿಸಿ ಮಾತನಾಡಿದ್ದನು. ನಾವಿಬ್ಬರೂ ನಮ್ಮ ಪರಿಚಿತ ಸ್ನೇಹಿತರ ಮದುವೆ ಪತ್ರಿಕೆ ಹಂಚಲು ಒಟ್ಟಿಗೆ ಹೋಗುತ್ತಿದ್ದೇವೆ ಎಂದು ಮುಸ್ಪೀರ್ ತಾಯಿಗೆ ತಿಳಿಸಿದ್ದನು. ಆದರೆ ಇದಾದ ಕೆಲವೇ ಸಮಯದಲ್ಲಿ ಸಾದಿಕ್ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ.

ಮಗ ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗಾಬರಿಗೊಂಡ ತಾಯಿ, ಅಕ್ಕಪಕ್ಕದವರು ಹಾಗೂ ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ಮಗನನ್ನು ಪತ್ತೆಹಚ್ಚಿಕೊಡುವಂತೆ ಲಕ್ಕವಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವಕನ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.

A young man who went to distribute a friend’s wedding newspaper goes missing

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯನ ಡಬಲ್ ಡ್ಯೂಟಿ.!

ಚಿಕ್ಕಮಗಳೂರು : ಸರ್ಕಾರದ ಬೊಕ್ಕಸದಿಂದ ಕೈತುಂಬಾ ಸಂಬಳ ಪಡೆಯುತ್ತಾ, ಕರ್ತವ್ಯದ ಸ್ಥಳದಲ್ಲಿ ರೋಗಿಗಳನ್ನು ಸತಾಯಿಸಿ ನೆರೆಯ ಕೇರಳದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ...

ಶಾಸಕರುಗಳಿಗೆ ಅಧಿಕಾರದ ಹಠ-ರೈತರಿಗೆ ಬರಗಾಲದ ಭಯ

ಕಡೂರು ಬರಪೀಡಿತ ತಾಲೂಕು ಪಟ್ಟಿಯಿಂದ ಹೊರಕ್ಕೆ: ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕಡೂರು: ಕಡೂರು ತಾಲ್ಲೂಕು ಪ್ರತಿ ವರ್ಷವೂ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಪ್ರಸಕ್ತ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ...

Related Articles

ಕಾಡಾನೆ-ಕಾಡುಕೋಣ ದಾಳಿಯಿಂದ ಭೀತಿಯಲ್ಲಿ ಕಾರ್ಮಿಕರು

ಮೂಡಿಗೆರೆ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಒಂದೆಡೆ...

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಪ್ರಾಧ್ಯಾಪಕರ ಹಾಜರಾತಿ ತಿದ್ದುಪಡಿ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (CIMS)ಯಲ್ಲಿ ಸಹಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಗಣೇಶ್ ಪಿ....

ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ

ಚಿಕ್ಕಮಗಳೂರು: ಕಾಫಿನಾಡಿನ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ನೂತನ ಜಿಲ್ಲಾಡಳಿತ ಸಂಕೀರ್ಣದ (ಡಿಸಿ...

ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ

ತರೀಕೆರೆ: ಸರ್ಕಾರಿ ಬಸ್ ಚಾಲಕನ ಮೇಲೆ ಖಾಸಗಿ ಬಸ್ ಏಜೆಂಟ್‌ಗಳು ನಡುರಸ್ತೆಯಲ್ಲೇ ಪುಂಡಾಟ ನಡೆಸಿ, ರಕ್ತ...