Home namma chikmagalur chikamagalur ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಜಿಲ್ಲೆಯಲ್ಲಿ 51 ಮನೆಗೆ ಹಾನಿ
chikamagalurHomeLatest Newsnamma chikmagalur

ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಜಿಲ್ಲೆಯಲ್ಲಿ 51 ಮನೆಗೆ ಹಾನಿ

Share
Share

ಚಿಕ್ಕಮಗಳೂರು: ಕಾಫಿನಾಡಿನಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಜೂನ್ 4ರವರೆಗೆ ಕೇಂದ್ರ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಕಳೆದ ಪೂರ್ವ ಮುಂಗಾರು ಅವಧಿಯಲ್ಲಿ (ಮಾರ್ಚ್ 1 ರಿಂದ ಮೇ 31) ಜಿಲ್ಲೆಯಲ್ಲಿ ಸರಾಸರಿ 153.2 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ. -4 ರಷ್ಟು ಕೊರತೆಯಿದ್ದರೂ ಕೊಪ್ಪ, ಶೃಂಗೇರಿ ಮತ್ತು ಕಳಸ ತಾಲೂಕುಗಳಲ್ಲಿ ಅಧಿಕ ಮಳೆಯಾಗಿದೆ.

ಸದ್ಯ ಭದ್ರಾ ಜಲಾಶಯದಲ್ಲಿ 137.2 ಅಡಿ ನೀರಿನ ಮಟ್ಟವಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ಜಿಲ್ಲೆಯಾದ್ಯಂತ ಒಟ್ಟು 34 ತಂಡಗಳನ್ನು ನಿಯೋಜಿಸಲಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳ ಮಳೆಯಿಂದಾಗಿ ಜಿಲ್ಲೆಯಲ್ಲಿ ವ್ಯಾಪಕ ಆಸ್ತಿ-ಪಾಸ್ತಿ ಹಾನಿಯಾಗಿದ್ದು, ಒಟ್ಟು 1870 ವಿದ್ಯುತ್ ಕಂಬಗಳು, 37.40 ಕಿ.ಮೀ ವಿದ್ಯುತ್ ಮಾರ್ಗ ಹಾಗೂ ಎರಡು ಅಂಗನವಾಡಿ ಕಟ್ಟಡಗಳು ಹಾನಿಗೊಂಡಿವೆ. ಇದರಿಂದ ಸುಮಾರು 323.52 ಲಕ್ಷ ರೂ. ನಷ್ಟ ಸಂಭವಿಸಿದೆ.

ಜಿಲ್ಲೆಯಲ್ಲಿ ಒಟ್ಟು 51 ಮನೆಗಳು ಭಾಗಶಃ ಹಾಗೂ 1 ಮನೆ ಪೂರ್ಣ ಹಾನಿಯಾಗಿದ್ದು, ನಿಯಮಾವಳಿಗಳಂತೆ ಕ್ರಮವಾಗಿ 6,500 ರೂ. ಮತ್ತು 1,20,000 ರೂ. ಪರಿಹಾರ ವಿತರಿಸಲಾಗುತ್ತಿದೆ. ಹಾಗೆಯೇ 26.58 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಡಿಸಿ ಸೂಚಿಸಿದ್ದಾರೆ.

ವಿಪತ್ತು ನಿರ್ವಹಣೆಗೆ ಜಿಲ್ಲಾ ನಿಧಿಯಲ್ಲಿ 26.82 ಕೋಟಿ ರೂ. ಅನುದಾನ ಲಭ್ಯವಿದ್ದು, ಯಾವುದೇ ಆರ್ಥಿಕ ಕೊರತೆಯಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ತುರ್ತು ಸಂದರ್ಭಗಳ ಎದುರಿಸಲು ಮೂಡಿಗೆರೆ, ನರಸಿಂಹರಾಜಪುರ ಮತ್ತು ಚಿಕ್ಕಮಗಳೂರಿನಲ್ಲಿ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ರಸ್ತೆ ಬ್ಲಾಕ್ ಹಾಗೂ ಭೂಕುಸಿತ ತಡೆಯಲು ಜೆಸಿಬಿ, ಹಿಟಾಚಿ ಮತ್ತು ಯಂತ್ರಗಳನ್ನು ಸನ್ನದ್ಧವಾಗಿಡಲಾಗಿದೆ.

ತಹಶೀಲ್ದಾರರ ನೇತೃತ್ವದ ವಿಶೇಷ ತಂಡಗಳ ಜೊತೆಗೆ 561 ಗೃಹರಕ್ಷಕರು, 64 ಈಜುಗಾರರು ಹಾಗೂ 566 ಸ್ವಯಂಸೇವಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರು ತುರ್ತು ನೆರವಿಗಾಗಿ ಜಿಲ್ಲಾಧಿಕಾರಿ ಕಚೇರಿ (08262-238950), ಪೊಲೀಸ್ (9480805100) ಅಥವಾ ಮೆಸ್ಕಾಂ (9448289543) ಕಂಟ್ರೋಲ್ ರೂಂ ಅನ್ನು 24×7 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಎಸ್‌ಐಆರ್ (SIR) ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಚುನಾವಣಾ ಆಯೋಗದ ಸುತ್ತೋಲೆಯಂತೆ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವಾಗಿ ನಿಗದಿ ಪಡಿಸಲಾಗಿದ್ದು, ಜೂನ್ 20ರಿಂದ 29ರ ವರೆಗೆ ಸಿಬ್ಬಂದಿಗೆ ತರಬೇತಿ ಹಾಗೂ ಪ್ರೀ-ಫಿಲ್ಡ್ ಎನ್ಯುಮರೇಷನ್ ಫಾರಂಗಳ ಮುದ್ರಣ ಕಾರ್ಯ ನಡೆಯಲಿದೆ. ತದನಂತರ ಜೂನ್ 30ರಿಂದ ಜುಲೈ 29ರ ವರೆಗೆ ಒಂದು ತಿಂಗಳ ಕಾಲ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಈ ಫಾರಂಗಳನ್ನು ಜನರಿಂದ ಭರ್ತಿ ಮಾಡಿಸಿ ಸಂಗ್ರಹಿಸಲಿದ್ದಾರೆ.

ಜುಲೈ 29ರೊಳಗೆ ಮತಗಟ್ಟೆಗಳ ಮರುಹಂಚಿಕೆ ಪ್ರಕ್ರಿಯೆ ಮುಗಿಯಲಿದ್ದು, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಸಾರ್ವಜನಿಕರು ಆಗಸ್ಟ್ 5ರಿಂದ ಸೆಪ್ಟೆಂಬರ್ 4ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 3ರೊಳಗೆ ಇಆರ್‌ಒ ಅವರಿಂದ ಇವುಗಳ ಇತ್ಯರ್ಥ ನಡೆಯಲಿದೆ.

ಈ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಜಿಲ್ಲೆಯ 1,230 ಮತಗಟ್ಟೆಗಳಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಸಭೆ ನಡೆಸಿ, ಬಾಕಿ ಇರುವ ಬೂತ್ ಮಟ್ಟದ ಏಜೆಂಟರ ನೇಮಕಾತಿಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಲಾಗಿದೆ. ಜೊತೆಗೆ, ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಜಾಗೃತಿ ಮೂಡಿಸಲು ಮಾಧ್ಯಮದವರಿಗಾಗಿ ವಿಶೇಷ ತರಬೇತಿ ಹಾಗೂ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ ಮತದಾರರ ಮ್ಯಾಪಿಂಗ್ ಪ್ರಕ್ರಿಯೆ ಅತ್ಯಂತ ವೇಗವಾಗಿ ನಡೆಯುತ್ತಿದ್ದು, ಒಟ್ಟು 9,67,287 ಮತದಾರರ ಪೈಕಿ ಈಗಾಗಲೇ 8,63,478 ಮತದಾರರ ಮ್ಯಾಪಿಂಗ್ ಪೂರ್ಣಗೊಂಡು ಶೇ. 89.27ರಷ್ಟು ಪ್ರಗತಿ ಸಾಧಿಸಲಾಗಿದೆ. ಕಳೆದ ಹತ್ತು ದಿನಗಳಲ್ಲೇ 34,000 ಮತದಾರರ ಮ್ಯಾಪಿಂಗ್ ಮಾಡಲಾಗಿದ್ದು, ಜೂನ್ 20ರ ಗಡುವಿನೊಳಗೆ ಇನ್ನುಳಿದ ಪ್ರಕ್ರಿಯೆಯನ್ನು ಮುಗಿಸಲು ಜಿಲ್ಲಾಡಳಿತವು ವಿಶೇಷ ತಂಡಗಳು ಹಾಗೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

51 houses damaged in pre-monsoon rains in the district

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯನ ಡಬಲ್ ಡ್ಯೂಟಿ.!

ಚಿಕ್ಕಮಗಳೂರು : ಸರ್ಕಾರದ ಬೊಕ್ಕಸದಿಂದ ಕೈತುಂಬಾ ಸಂಬಳ ಪಡೆಯುತ್ತಾ, ಕರ್ತವ್ಯದ ಸ್ಥಳದಲ್ಲಿ ರೋಗಿಗಳನ್ನು ಸತಾಯಿಸಿ ನೆರೆಯ ಕೇರಳದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ...

ಶಾಸಕರುಗಳಿಗೆ ಅಧಿಕಾರದ ಹಠ-ರೈತರಿಗೆ ಬರಗಾಲದ ಭಯ

ಕಡೂರು ಬರಪೀಡಿತ ತಾಲೂಕು ಪಟ್ಟಿಯಿಂದ ಹೊರಕ್ಕೆ: ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕಡೂರು: ಕಡೂರು ತಾಲ್ಲೂಕು ಪ್ರತಿ ವರ್ಷವೂ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಪ್ರಸಕ್ತ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ...

Related Articles

ಕಾಡಾನೆ-ಕಾಡುಕೋಣ ದಾಳಿಯಿಂದ ಭೀತಿಯಲ್ಲಿ ಕಾರ್ಮಿಕರು

ಮೂಡಿಗೆರೆ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಒಂದೆಡೆ...

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಪ್ರಾಧ್ಯಾಪಕರ ಹಾಜರಾತಿ ತಿದ್ದುಪಡಿ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (CIMS)ಯಲ್ಲಿ ಸಹಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಗಣೇಶ್ ಪಿ....

ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ

ಚಿಕ್ಕಮಗಳೂರು: ಕಾಫಿನಾಡಿನ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ನೂತನ ಜಿಲ್ಲಾಡಳಿತ ಸಂಕೀರ್ಣದ (ಡಿಸಿ...

ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ

ತರೀಕೆರೆ: ಸರ್ಕಾರಿ ಬಸ್ ಚಾಲಕನ ಮೇಲೆ ಖಾಸಗಿ ಬಸ್ ಏಜೆಂಟ್‌ಗಳು ನಡುರಸ್ತೆಯಲ್ಲೇ ಪುಂಡಾಟ ನಡೆಸಿ, ರಕ್ತ...