Home namma chikmagalur chikamagalur 5.50 ಕೋಟಿಯ ಟಿಂಬರ್ ವ್ಯವಹಾರದಲ್ಲಿ ವಂಚನೆ
chikamagalurCrime NewsHomeLatest Newsnamma chikmagalur

5.50 ಕೋಟಿಯ ಟಿಂಬರ್ ವ್ಯವಹಾರದಲ್ಲಿ ವಂಚನೆ

Share
Share

ಚಿಕ್ಕಮಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಂಬರ್ ವ್ಯವಹಾರಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ವಂಚನೆ, ಜಗಳ ಹಾಗೂ ಕೊಲೆ ಬೆದರಿಕೆ ಪ್ರಕರಣವೊಂದು ಆಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪ ನಿವಾಸಿ, ಟಿಂಬರ್ ವ್ಯಾಪಾರಿ ಜುಬೇರ್ ಎಂಬುವರು ನೀಡಿದ ದೂರಿನನ್ವಯ ಆಲ್ಲೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಜುಬೇರ್, ಶಂಶುದ್ದೀನ್ ಮತ್ತು ರಾಜೇಶ್ ಎಂಬುವರು ಸೇರಿ ಚಿಕ್ಕಮಗಳೂರು ಜಿಲ್ಲೆಯ ಭೂತನಕಾಡು ಗ್ರಾಮದ ಚಾಮುಂಡಿ ಪ್ಲಾಂಟೇಷನ್ ಎಸ್ಟೇಟ್‌ನ ಕಾಫಿ ತೋಟದಲ್ಲಿ 5.50 ಕೋಟಿ ರೂಪಾಯಿ ಮೌಲ್ಯದ ಸಿಲ್ವರ್ ಮರಗಳನ್ನು ಖರೀದಿಸಲು ನಿರೂಪ್ ಮತ್ತು ಅವರ ತಂದೆ ರತ್ನಾಕರ್ ಎಂಬುವರ ಜೊತೆ ಒಪ್ಪಂದ ಮಾಡಿಕೊಂಡಿದ್ದರು.

ಮುಂಗಡವಾಗಿ 50 ಲಕ್ಷ ರೂಪಾಯಿ ನೀಡಲು ಒಪ್ಪಿ, ಶಂಶುದ್ದೀನ್ ಅವರ ಬ್ಯಾಂಕ್ ಖಾತೆಯಿಂದ ನಿರೂಪ್ ಖಾತೆಗೆ 35 ಲಕ್ಷ ರೂಪಾಯಿ ಜಮೆ ಮಾಡಲಾಗಿತ್ತು ಹಾಗೂ 15 ಲಕ್ಷ ರೂಪಾಯಿಗಳನ್ನು ನಗದಾಗಿ ನೀಡಲಾಗಿತ್ತು. ಆದರೆ, ದಿನ ಕಳೆಯುತ್ತಿದ್ದಂತೆ ಉಭಯ ಪಾರ್ಟಿಗಳ ನಡುವೆ ವ್ಯವಹಾರ ಸರಿಯಾಗಿ ಕುದುರದ ಕಾರಣ ಜುಬೇರ್ ತಂಡವು ತಮ್ಮ ಮುಂಗಡ ಹಣವನ್ನು ವಾಪಸ್ ಕೇಳಿದೆ. ಈ ವೇಳೆ ನಿರೂಪ್ ತಂಡವು ಬ್ಯಾಂಕ್ ಖಾತೆಯ ಮೂಲಕ 35 ಲಕ್ಷ ರೂಪಾಯಿಗಳನ್ನು ಕಂತುಗಳ ರೂಪದಲ್ಲಿ ಹಿಂದಿರುಗಿಸಿದೆ. ಆದರೆ ಬಾಕಿ ಉಳಿದ 15 ಲಕ್ಷ ರೂಪಾಯಿಗಳನ್ನು ನೀಡದೆ ಸತಾಯಿಸಲು ಆರಂಭಿಸಿದೆ ಎನ್ನಲಾಗಿದೆ.

ಹಣ ವಾಪಸ್ ಪಡೆಯಲು ಜುಬೇರ್, ಶಂಶುದ್ದೀನ್ ಮತ್ತು ಶಿಯಾಬ್ ಭೂತನಕಾಡಿನಲ್ಲಿರುವ ನಿರೂಪ್ ನಿವಾಸಕ್ಕೆ ತೆರಳಿದ್ದಾರೆ. ಮೇ 14ರ ರಾತ್ರಿ ಹಣದ ವಿಚಾರವಾಗಿ ಮಾತುಕತೆ ನಡೆಸುತ್ತಿದ್ದಾಗ ನಿರೂಪ್ ಹಾಗೂ ರತ್ನಾಕರ್ ಅಶ್ಲೀಲ ಪದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿದ್ದಲ್ಲದೆ, ಭಜರಂಗದಳದ ಹೆಸರೇಳಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಷ್ಟೇ ಅಲ್ಲದೆ, ಜುಬೇರ್ ಅವರ ಕೈಯಲ್ಲಿದ್ದ ಸುಮಾರು 1.50 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಅನ್ನು ಒಡೆದು ಹಾಕಿ, ಇಬ್ಬರು ಹುಡುಗರು ಮತ್ತು ಕೆಲಸದವರೊಂದಿಗೆ ಸೇರಿ ಹಲ್ಲೆ ನಡೆಸಿ ಗೇಟಿನಿಂದ ಹೊರಗೆ ತಳ್ಳಿದ್ದಾರೆ ಎಂದು ಆರೋಪಿಸಲಾಗಿದೆ.

ಇದಾದ ಬಳಿಕವೂ ಮೇ 16ರಂದು ಹಣ ಕೇಳಲು ಹೋದಾಗ ರತ್ನಾಕರ್ ಮತ್ತು ನಿರೂಪ್ ಇಬ್ಬರು ಗೂಂಡಾಗಳನ್ನು ಕರೆದುಕೊಂಡು ಬಂದು ಜುಬೇರ್, ಶಂಶುದ್ದೀನ್ ಹಾಗೂ ಶಿಯಾಬ್ ಅವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.

ಗಲಾಟೆ ಬಿಡಿಸಲು ಬಂದ ಅಸ್ಲರ್ ಮತ್ತು ಅವರ ಸ್ನೇಹಿತರಿಗೂ ಬೈದು ಗಲಾಟೆ ಮಾಡಲಾಗಿದೆ. ತದನಂತರ ಕಾರಿನಲ್ಲಿ ಊರಿಗೆ ಹೊರಟಾಗ ಗೇಟಿನ ಮುಂಭಾಗ ಅಡ್ಡಗಟ್ಟಿ, ಇನ್ನೊಮ್ಮೆ ಹಣ ಕೇಳಿ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹಣ ಸಿಗುವ ಭರವಸೆಯಿಂದ ಅಲ್ಲಿಯೇ ಕಾಯ್ದು, ನ್ಯಾಯ ಸಿಗದ ಹಿನ್ನೆಲೆಯಲ್ಲಿ ಜುಬೇರ್ ಆಲ್ಲೂರು ಪೊಲೀಸ್ ಠಾಣೆಗೆ ತಡವಾಗಿ ಬಂದು ದೂರು ನೀಡಿದ್ದಾರೆ. ಸದ್ಯ ಪೊಲೀಸರು ರತ್ನಾಕರ್, ನಿರೂಪ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

Fraud in timber transaction worth Rs. 5.50 crore

Share

Leave a comment

Leave a Reply

Your email address will not be published. Required fields are marked *

Don't Miss

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ ಮಾಡಿರುವುದನ್ನು ಸಖರಾಯಪಟ್ಟಣ ಪೊಲೀಸರು ಪತ್ತೆ ಮಾಡಿದ್ದಾರೆ. ಜೂನ್ 13ರ ರಾತ್ರಿ ಸಖರಾಯಪಟ್ಟಣ ಪೊಲೀಸ್...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ರೂಬೆನ್ ಮೊಸಸ್ ಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ 

ಚಿಕ್ಕಮಗಳೂರು: ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರೂಬೆನ್ ಮೊಸಸ್ ರವರಿಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ ದೊರೆತಿದೆ....

ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯ ನೀಡಲು ಮನವಿ

ಚಿಕ್ಕಮಗಳೂರು:  ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲ ವೇತನವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿ...

ಜಲಾಶಯದ ನೀರು ಕುಡಿಯುವ ನೀರಿಗೆ ಬಳಕೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕ್ಷೀಣಿಸುತ್ತಿದ್ದು,...