Home namma chikmagalur chikamagalur ಬೀಗ ಹಾಕಿದ್ದ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳ್ಳತನ
chikamagalurHomeLatest Newsnamma chikmagalur

ಬೀಗ ಹಾಕಿದ್ದ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳ್ಳತನ

Share
Share

ಮೂಡಿಗೆರೆ : ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ನಗದು ಹಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಮೂಡಿಗೆರೆ ತಾಲೂಕಿನ ಗೋಣಿಬೀಡಿನ ಮಂಡಿ ಮನೆ ನಿವಾಸಿ ಲಕ್ಷ್ಮಣೇಗೌಡ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಲಕ್ಷ್ಮಣೇಗೌಡ ಅವರು ತಮ್ಮ ಹೆಂಡತಿ ರಾಧಾ ಅವರೊಂದಿಗೆ ಮೇ 30ರಂದು ಮಧ್ಯಾಹ್ನ ಸಕಲೇಶಪುರದಲ್ಲಿರುವ ಮಗಳ ಮನೆಗೆ ತೆರಳಿದ್ದರು. ಜೂನ್ 1ರಂದು ಬೆಳಿಗ್ಗೆ ಮನೆಗೆ ವಾಪಸ್ ಬಂದು ನೋಡಿದಾಗ ಕಳ್ಳತನ ನಡೆದಿರುವುದು ದೃಢಪಟ್ಟಿದೆ.

ಖದೀಮರು ಮನೆಯ ಮುಂಬಾಗಿಲನ್ನು ಮುರಿದು ಒಳನುಗ್ಗಿದ್ದಲ್ಲದೆ, ಸಿಕ್ಕಿಬೀಳುವ ಭಯದಿಂದ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದಾರೆ. ಬಳಿಕ ರೂಮಿನಲ್ಲಿದ್ದ 10 ಸಾವಿರ ರೂಪಾಯಿ ನಗದು ಹಣ, 25 ಸಾವಿರ ರೂಪಾಯಿ ಮೌಲ್ಯದ ಎರಡು ಕೈ ಗಡಿಯಾರಗಳು (ವಾಚ್) ಹಾಗೂ 10 ಸಾವಿರ ರೂಪಾಯಿ ಬೆಲೆಯ ಒಂದು ಆಂಪ್ಲಿಫೈಯರ್ ಸೇರಿ ಒಟ್ಟು 45 ಸಾವಿರ ರೂಪಾಯಿ ಮೌಲ್ಯದ ಸ್ವತ್ತನ್ನು ದೋಚಿ ಪರಾರಿಯಾಗಿದ್ದಾರೆ.

ಇಷ್ಟೇ ಅಲ್ಲದೆ ಮನೆಯಲ್ಲಿದ್ದ ಎರಡು ಸ್ಪೀಕರ್ ಹಾಗೂ ಜನರೇಟರ್ ಅನ್ನು ಸಹ ಕಳ್ಳತನ ಮಾಡಲು ಯತ್ನಿಸಿದ್ದು, ಅವುಗಳನ್ನು ಮನೆಯಿಂದ ಹೊರಭಾಗಕ್ಕೆ ತಂದು ಇಟ್ಟುಕೊಂಡಿರುವುದು ಕಂಡುಬಂದಿದೆ. ಆದರೆ ಯಾವುದೋ ಕಾರಣಕ್ಕೆ ಅವುಗಳನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜೂನ್ 3ರಂದು ಲಕ್ಷ್ಮಣೇಗೌಡ ಅವರು ನೀಡಿದ ದೂರಿನನ್ವಯ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ.

Items worth lakhs of rupees stolen from locked house

Share

Leave a comment

Leave a Reply

Your email address will not be published. Required fields are marked *

Don't Miss

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ ಮಾಡಿರುವುದನ್ನು ಸಖರಾಯಪಟ್ಟಣ ಪೊಲೀಸರು ಪತ್ತೆ ಮಾಡಿದ್ದಾರೆ. ಜೂನ್ 13ರ ರಾತ್ರಿ ಸಖರಾಯಪಟ್ಟಣ ಪೊಲೀಸ್...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ರೂಬೆನ್ ಮೊಸಸ್ ಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ 

ಚಿಕ್ಕಮಗಳೂರು: ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರೂಬೆನ್ ಮೊಸಸ್ ರವರಿಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ ದೊರೆತಿದೆ....

ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯ ನೀಡಲು ಮನವಿ

ಚಿಕ್ಕಮಗಳೂರು:  ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲ ವೇತನವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿ...

ಜಲಾಶಯದ ನೀರು ಕುಡಿಯುವ ನೀರಿಗೆ ಬಳಕೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕ್ಷೀಣಿಸುತ್ತಿದ್ದು,...