ಅಜ್ಜಂಪುರ: ಬುಕ್ಕಂಬುದಿಯಿಂದ ಅಜ್ಜಂಪುರ ರಸ್ತೆಯ ಸಿದ್ದಾಪುರ ತಿರುವಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸಿದ್ದಾಪುರ ಗ್ರಾಮದ ಪ್ರಭಾಕರ್ (ಚಾಲಕ) ಎಂಬುವವರು ಚಿಕ್ಕಾನವಂಗಲ ಕೆರೆಯಿಂದ ಟ್ರ್ಯಾಕ್ಟರ್ನಲ್ಲಿ ಮಣ್ಣು ತುಂಬಿಸಿಕೊಂಡು ಹೋಗುತ್ತಿದ್ದಾಗ, ಅಜ್ಜಂಪುರ ಕಡೆಯಿಂದ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಬಂದ ಲಾರಿಯೊಂದು ಟ್ರ್ಯಾಕ್ಟರ್ನ ಮಧ್ಯಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಪ್ರಭಾಕರ್ ಅವರು ರಸ್ತೆಗೆ ಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಲಾರಿಯಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಮೃತರ ಸಹೋದರ ದಿವಾಕರ್ ನೀಡಿದ ದೂರಿನ ಮೇರೆಗೆ ಅಜ್ಜಂಪುರ ಪೊಲೀಸರು ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Driver dies in road accident
Leave a comment